Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆಯಲ್ಲಿ 700 ಮನೆಗಳ ಲೋಕಾರ್ಪಣೆ | ಬಡವರ ಆರ್ಥಿಕ ಚೈತನ್ಯ ನೀಡುವ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು :  ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್

---Advertisement---

 

ಚಿತ್ರದುರ್ಗ. ಮಾ.02:    ರಾಜ್ಯ ಸರ್ಕಾರದಿಂದ ಬಡವರಿಗೆ, ಶೋಷಿತ ವರ್ಗದವರ ಆರ್ಥಿಕ ಸಬಲೀಕರಣಕ್ಕಾಗಿ, ಆರ್ಥಿಕ ಚೈತನ್ಯ ನೀಡುವ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗುವುದು ಎಂದು ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಪ್ರಧಾನಮಂತ್ರಿ ಆವಾಸ್ ಯೋಜನೆ “ಸರ್ವರಿಗೂ ಸೂರು” ಯೋಜನೆಯಡಿ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ನಿರ್ಮಾಣವಾದ 700 ಮನೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಚ್ರ್ಯುಯಲ್ ಮುಖಾಂತರ ಲೋಕಾರ್ಪಣೆ ಹಾಗೂ ಮನೆ ಹಂಚಿಕೆ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

 

“ಸರ್ವರಿಗೂ ಸೂರು” ಯೋಜನೆಯಡಿ  ವಸತಿ ರಹಿತರು ಸಾಕಷ್ಟು ಸಂಖ್ಯೆಯಲ್ಲಿ ಅರ್ಜಿ ಸಲ್ಲಿಸಿದ್ದು, ವಸತಿ ರಹಿತರು ಯಾರೂ ಸಹ ನಿರಾಸೆ ಪಡುವ ಅಗತ್ಯವಿಲ್ಲ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮನೆಗಳ ಮಂಜೂರಾತಿಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಮಾತನಾಡಿ, ಚಳ್ಳಕೆರೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ನಗರದಲ್ಲಿ 2017ರ ಡಿಸೆಂಬರ್ 27ರಂದು ಮನೆಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿತ್ತು. ಕಳೆದ ಸರ್ಕಾರದ ಅವಧಿಯಲ್ಲಿ ಬೇರೆ ಬೇರೆ ಕಾರಣಗಳಿಂದಾಗಿ ಮನೆಗಳ ನಿರ್ಮಾಣ ಕಾಮಗಾರಿ ಕುಂಠಿತವಾಯಿತು ಎಂದು ತಿಳಿಸಿದ ಅವರು, ಚಳ್ಳಕೆರೆ ನಗರದಲ್ಲಿ 1,127 ಮನೆಗಳು ಮಂಜೂರಾಗಿದ್ದು, ಇದರಲ್ಲಿ 700 ಮನೆಗಳು ಪೂರ್ಣಗೊಂಡಿವೆ. ಇನ್ನೂ 300ಕ್ಕೂ ಹೆಚ್ಚು ಮನೆಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿದ್ದು, ಆದಷ್ಟು ಶೀಘ್ರದಲ್ಲಿ ಮನೆಗಳ ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ರಾಜ್ಯ ಸರ್ಕಾರ ಬಹುಮುಖ್ಯವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಜೊತೆ ಜೊತೆಗೆ ಅಭಿವೃದ್ಧಿ ಕಾರ್ಯಕ್ರಮಗಳಿಗೂ ಒತ್ತು ನೀಡಲಾಗುವುದು ಎಂದು ಹೇಳಿದರು.

ಸರ್ವರಿಗೂ ಸೂರು ಯೋಜನೆ: ಪ್ರಧಾನ ಮಂತ್ರಿ ಆವಾಸ್ ಯೋಜನೆ-ಸರ್ವರಿಗೂ ಸೂರು ಯೋಜನೆಯಡಿ ಚಿತ್ರದುರ್ಗ ಜಿಲ್ಲೆಯ ಚಿತ್ರದುರ್ಗ ತಾಲ್ಲೂಕಿನಲ್ಲಿ 1518, ಚಳ್ಳಕೆರೆ-1127, ಹಿರಿಯೂರು-1465, ಹೊಳಲ್ಕೆರೆ-533, ಹೊಸದುರ್ಗ-700 ಹಾಗೂ ಮೊಳಕಾಲ್ಮುರು ತಾಲ್ಲೂಕಿನಲ್ಲಿ 500 ಮನೆಗಳು ಸೇರಿದಂತೆ ಆರು ನಗರ, ಪಟ್ಟಣದ ವ್ಯಾಪ್ತಿಯಲ್ಲಿ ಒಟ್ಟು ರೂ.370.97 ಕೋಟಿ ಯೋಜನಾ ವೆಚ್ಚದಲ್ಲಿ 5,843 ಮನೆಗಳು ಮಂಜೂರಾಗಿದ್ದು, ಈ ಪೈಕಿ 3,879 ಮನೆಗಳನ್ನು ಪ್ರಾರಂಭಿಸಿದ್ದು, 2,191 ಮನೆಗಳು ಪೂರ್ಣಗೊಂಡಿದ್ದು, 1,688 ಮನೆಗಳು ವಿವಿಧ ಹಂತಗಳಲ್ಲಿ ಪ್ರಗತಿಯಲ್ಲಿವೆ.

ಉಳಿದ 1964 ಮನೆಗಳನ್ನು ಪ್ರಾರಂಭಿಸಬೇಕಾಗಿರುತ್ತದೆ.
ಕಾರ್ಯಕ್ರಮದಲ್ಲಿ ನಗರಸಭೆ ಸ್ಥಾಯಿ ಸಮಿತಿ ಸದಸ್ಯ ರಾಘವೇಂದ್ರ, ನಗರಸಭೆ ಸದಸ್ಯರಾದ ಸುಮಕ್ಕ ಅಂಜಿನಪ್ಪ, ಜೈತುಂಬಿ, ಮುಖಂಡರಾದ ವೀರಭದ್ರಪ್ಪ, ಪ್ರಭುದೇವ್, ಮುಜೀಬ್, ಬಡಗಿ ಪಾಪಣ್ಣ, ದಳವಾಯಿ ಮೂರ್ತಿ, ಸಿ.ಟಿ.ಶ್ರೀನಿವಾಸ್, ಅನ್ವರ್, ಲಕ್ಷ್ಮಣ್, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ದಾವಣಗೆರೆ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕೃಷ್ಣಾರೆಡ್ಡಿ ಸೇರಿದಂತೆ ಮತ್ತಿತರರು ಇದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment