Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೀಪಿಕಾ ದಾಸ್ ಅದ್ದೂರಿ ಆರತಕ್ಷತೆ : ಯಾರೆಲ್ಲಾ ಬಂದಿದ್ರು..? ಗುಟ್ಟಾಗಿ ಆದ ಮದುವೆ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ನಾಗಿಣಿ ಧಾರಾವಾಹಿ ಹಾಗೂ ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ಇಂದು ಅದ್ದೂರಿಯಾಗಿ ರಿಸೆಪ್ಶನ್ ಮಾಡಿಕೊಂಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಯಾರಿಗೂ ಮಾಹಿತಿಯೇ ತಿಳಿಸದೆ ಮದುವೆಯಾಗಿದ್ದರು. ಕುಟುಂಬಸ್ಥರ ಸಮ್ಮುಖದಲ್ಲಷ್ಟೇ ಮದುವೆ ನಡೆದಿತ್ತು. ದೀಪಿಕಾ ದಾಸ್ ಈ ರೀತಿ ಗುಟ್ಟಾಗಿ ಮದುವೆಯಾಗಿದ್ದೇಕೆ ಎಂಬುದು ಎಲ್ಲರಿಗೂ ಪ್ರಶ್ನೆಯಾಗಿ ಕಾಡಿತ್ತು. ಹುಡುಗ ದುಬೈ ಎಂದೇ ಹೇಳಲಾಗಿತ್ತು. ಕನ್ನಡ ಬರುತ್ತಾ ಎಂಬೆಲ್ಲಾ ಚರ್ಚೆಗಳು ಹುಟ್ಟುಕೊಂಡಿದ್ದವು‌. ಇದೀಗ ದೀಪಿಕಾ ದಾಸ್ ಪತಿಯ ಬಗ್ಗೆ ಇದೀಗ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ.

 

ಇಂದು ದೀಪಿಕಾ ದಾಸ್ ಹಾಗೂ ದೀಪಕ್ ಅದ್ದೂರಿ ಆರತಕ್ಷತಾ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಬಿಗ್ ಬಾಸ್ ಸ್ಪರ್ಧಿಗಳು ಕೂಡ ಭಾಗಿಯಾಗಿ, ನವದಂಪತಿಗೆ ಶುಭ ಹಾರೈಸಿದ್ದಾರೆ. ಸ್ಯಾಂಡಲ್ ವುಡ್ ನ ಹಲವು ಕಲಾವಿದರು ಕೂಡ ಆಗಮಿಸಿದ್ದರು.

ಇನ್ನು ದೀಪಿಕಾ ದಾಸ್ ಎಲ್ಲಾ ಪ್ರಶ್ನೆಗಳಿಗೂ ತೆರೆ ಎಳೆದಿದ್ದಾರೆ. ‘ನಾನು ಮದುವೆಯಾಗಿರುವ ಹುಡುಗ ಅಪ್ಪಟ ಕನ್ನಡದ ಹುಡುಗ, ಗೌಡ್ರ ಹುಡುಗ. ನಾನು ವಿದೇಶಿಗರನ್ನೆಲ್ಲಾ ನೋಡಲ್ಲ. ಇಲ್ಲೆ ಆರ್ ಆರ್ ನಗರದ ಹುಡುಗ. ಮದುವೆಯನ್ನ ಗುಟ್ಟಾಗಿ ಏನು ಆಗಿಲ್ಲ. ಮೂರ್ನಾಲ್ಕು ತಿಂಗಳ ತಯಾರಿ ಅದು. ನಾನು ದೀಪಕ್ ಹಲವು ವರ್ಷಗಳಿಂದ ಪರಿಚಯ ಇದ್ದೆವು. ಕಳೆದ ವರ್ಷ ಮದುವೆ ವಿಚಾರ ಅಂತ ಬಂದಾಗ, ಮೊದಲು ಒಂದು ವರ್ಷ ಡೇಟ್ ಮಾಡೊಣಾ. ಇಬ್ಬರಿಗೂ ಹೊಂದಾಣಿಕೆಯಾಗುತ್ತೆ ಎಂದರೆ ಮದುವೆಯಾಗೋಣಾ ಎಂದು ತೀರ್ಮಾನ ಮಾಡಿದೆವು. ಅದರಂತೆ ಇಬ್ಬರಿಗೂ ಹೊಂದಾಣಿಕೆ ಆಯ್ತು. ಮದುವೆ ಯಾಕೆ ತಡ ಮಾಡಬೇಕು ಅಂತ ಮದುವೆ ಆದೆವು’ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾಳೆಯಿಂದ ಮೇ.17ರವರೆಗೂ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಬ್ಬರ..!

ಕಳೆದ ಮೂರ್ನಾಲ್ಕು ದಿನದಿಂದ ವರುಣರಾಯನ ದರ್ಶನವಾಗುತ್ತಿದೆ. ಆದರೂ ಕೆಲವೊಂದು ಕಡೆ ಬಿಸಿ ಗಾಳಿಯ ಅನುಭವ ಮಾತ್ರ ಕಡಿಮೆಯಾಗಿಲ್ಲ. ಇಂದು ಸಂಜೆ ವೇಳೆಗೆ ಬೆಂಗಳೂರು ಸೇರಿದಂತೆ ಹಲವೆಡೆ ಜೋರು ಮಳೆಯಾಗಿದೆ. ಇದರಿಂದ ವಾಹನ ಸವಾರರು, ಕೆಲಸಕ್ಕೆ

ಚಿತ್ರದುರ್ಗ | ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಎಸ್‌ಎಸ್‌ಎಲ್‌ಸಿ ಫಲಿತಾಂಶ : 100 ಕ್ಕೆ 100 ಫಲಿತಾಂಶ ಪಡೆದ 13 ಶಾಲೆಗಳು

ಸುದ್ದಿಒನ್, ಚಿತ್ರದುರ್ಗ, ಮೇ. 09 :   ಜಿಲ್ಲೆಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ 35 ಮೊರಾರ್ಜಿ ದೇಸಾಯಿ/ಕಿತ್ತೂರು ರಾಣಿ ಚೆನ್ನಮ್ಮ/ಏಕಲವ್ಯ ಮಾದರಿ ವಸತಿ ಶಾಲೆಗಳ 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ : 620 ಅಂಕಗಳೊಂದಿಗೆ ನಾಲ್ವರು ವಿದ್ಯಾರ್ಥಿಗಳು ಪ್ರಥಮ : ಜಿಲ್ಲೆಯ ಸಂಪೂರ್ಣ ಮಾಹಿತಿ ಇಲ್ಲಿದೆ….!

ಚಿತ್ರದುರ್ಗ. ಮೇ.09:  2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಚಿತ್ರದುರ್ಗ ಜಿಲ್ಲೆಗೆ ಶೇ.72.85 ಫಲಿತಾಂಶ ಲಭಿಸಿದೆ. ಜಿಲ್ಲೆಯ 14 ವಿದ್ಯಾರ್ಥಿಗಳು ಟಾಪರ್‌ಗಳಾಗಿ ಹೊರಹೊಮ್ಮಿದ್ದಾರೆ. ಚಿತ್ರದುರ್ಗ ನಗರದ ವಿದ್ಯಾವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಅಭಯ್.ಸಿ.ಐ, ಹಿರಿಯೂರಿನ

error: Content is protected !!