Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೀಪಿಕಾ ದಾಸ್ ಅದ್ದೂರಿ ಆರತಕ್ಷತೆ : ಯಾರೆಲ್ಲಾ ಬಂದಿದ್ರು..? ಗುಟ್ಟಾಗಿ ಆದ ಮದುವೆ ಬಗ್ಗೆ ಹೇಳಿದ್ದೇನು..?

---Advertisement---

ಬೆಂಗಳೂರು: ನಾಗಿಣಿ ಧಾರಾವಾಹಿ ಹಾಗೂ ಬಿಗ್ ಬಾಸ್ ಖ್ಯಾತಿಯ ದೀಪಿಕಾ ದಾಸ್ ಇಂದು ಅದ್ದೂರಿಯಾಗಿ ರಿಸೆಪ್ಶನ್ ಮಾಡಿಕೊಂಡಿದ್ದಾರೆ. ಕಳೆದ ಕೆಲವು ದಿನಗಳ ಹಿಂದಷ್ಟೇ ಯಾರಿಗೂ ಮಾಹಿತಿಯೇ ತಿಳಿಸದೆ ಮದುವೆಯಾಗಿದ್ದರು. ಕುಟುಂಬಸ್ಥರ ಸಮ್ಮುಖದಲ್ಲಷ್ಟೇ ಮದುವೆ ನಡೆದಿತ್ತು. ದೀಪಿಕಾ ದಾಸ್ ಈ ರೀತಿ ಗುಟ್ಟಾಗಿ ಮದುವೆಯಾಗಿದ್ದೇಕೆ ಎಂಬುದು ಎಲ್ಲರಿಗೂ ಪ್ರಶ್ನೆಯಾಗಿ ಕಾಡಿತ್ತು. ಹುಡುಗ ದುಬೈ ಎಂದೇ ಹೇಳಲಾಗಿತ್ತು. ಕನ್ನಡ ಬರುತ್ತಾ ಎಂಬೆಲ್ಲಾ ಚರ್ಚೆಗಳು ಹುಟ್ಟುಕೊಂಡಿದ್ದವು‌. ಇದೀಗ ದೀಪಿಕಾ ದಾಸ್ ಪತಿಯ ಬಗ್ಗೆ ಇದೀಗ ಎಲ್ಲಾ ಪ್ರಶ್ನೆಗಳಿಗೂ ಉತ್ತರ ಸಿಕ್ಕಿದೆ.

 

ಇಂದು ದೀಪಿಕಾ ದಾಸ್ ಹಾಗೂ ದೀಪಕ್ ಅದ್ದೂರಿ ಆರತಕ್ಷತಾ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮಕ್ಕೆ ಬಿಗ್ ಬಾಸ್ ಸ್ಪರ್ಧಿಗಳು ಕೂಡ ಭಾಗಿಯಾಗಿ, ನವದಂಪತಿಗೆ ಶುಭ ಹಾರೈಸಿದ್ದಾರೆ. ಸ್ಯಾಂಡಲ್ ವುಡ್ ನ ಹಲವು ಕಲಾವಿದರು ಕೂಡ ಆಗಮಿಸಿದ್ದರು.

ಇನ್ನು ದೀಪಿಕಾ ದಾಸ್ ಎಲ್ಲಾ ಪ್ರಶ್ನೆಗಳಿಗೂ ತೆರೆ ಎಳೆದಿದ್ದಾರೆ. ‘ನಾನು ಮದುವೆಯಾಗಿರುವ ಹುಡುಗ ಅಪ್ಪಟ ಕನ್ನಡದ ಹುಡುಗ, ಗೌಡ್ರ ಹುಡುಗ. ನಾನು ವಿದೇಶಿಗರನ್ನೆಲ್ಲಾ ನೋಡಲ್ಲ. ಇಲ್ಲೆ ಆರ್ ಆರ್ ನಗರದ ಹುಡುಗ. ಮದುವೆಯನ್ನ ಗುಟ್ಟಾಗಿ ಏನು ಆಗಿಲ್ಲ. ಮೂರ್ನಾಲ್ಕು ತಿಂಗಳ ತಯಾರಿ ಅದು. ನಾನು ದೀಪಕ್ ಹಲವು ವರ್ಷಗಳಿಂದ ಪರಿಚಯ ಇದ್ದೆವು. ಕಳೆದ ವರ್ಷ ಮದುವೆ ವಿಚಾರ ಅಂತ ಬಂದಾಗ, ಮೊದಲು ಒಂದು ವರ್ಷ ಡೇಟ್ ಮಾಡೊಣಾ. ಇಬ್ಬರಿಗೂ ಹೊಂದಾಣಿಕೆಯಾಗುತ್ತೆ ಎಂದರೆ ಮದುವೆಯಾಗೋಣಾ ಎಂದು ತೀರ್ಮಾನ ಮಾಡಿದೆವು. ಅದರಂತೆ ಇಬ್ಬರಿಗೂ ಹೊಂದಾಣಿಕೆ ಆಯ್ತು. ಮದುವೆ ಯಾಕೆ ತಡ ಮಾಡಬೇಕು ಅಂತ ಮದುವೆ ಆದೆವು’ ಎಂದಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment