ಕೆ.ಅನ್ವರ್ ಭಾಷಾ ವಿರುದ್ಧ ಅಪಪ್ರಚಾರ : ಮುಸ್ಲಿಂ ಮುಖಂಡರಿಂದ ಪ್ರತಿಭಟನೆ

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 13 : ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಮಾಜಿ ಚೇರ್ಮನ್ ಹಾಲಿ ಸದಸ್ಯ ಕೆ.ಅನ್ವರ್‍ಬಾಷರವರ ಮೇಲೆ ಕೆಲವರು ವಿನಾ ಕಾರಣ ಅಕ್ರಮದ ಆಪಾದನೆ ಹೊರಿಸಿ ವಿವಿಧ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿ ತೊಂದರೆ ಕೊಡುತ್ತಿರುವುದನ್ನು ವಿರೋಧಿಸಿ ಮುಸ್ಲಿಂ ಸಮಾಜದ ಕೆಲವು ಮುಖಂಡರುಗಳು ಹಾಗೂ ಮಸೀದಿಯ ಮುತುವಲ್ಲಿಗಳು ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಕೆ.ಅನ್ವರ್‍ಬಾಷರವರು ವಕ್ಫ್ ಮಂಡಳಿ ಜಾಗವನ್ನು ಕಬಳಿಸಿದ್ದಾರೆಂದು ಕೆಲವು ಪಟ್ಟಭದ್ರರು ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿವಿಧ ಇಲಾಖೆಗೆ ದೂರು ನೀಡಿ ಸಮಾಜದಲ್ಲಿರುವ ಅವರ ಗೌರವಕ್ಕೆ ಧಕ್ಕೆ ತರುತ್ತಿವುದನ್ನು ನೋಡಿದರೆ ಇದರ ಹಿಂದೆ ರಾಜಕೀಯ ಪಿತೂರಿಯಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಕೆ.ಅನ್ವರ್‍ಬಾಷರವರು ವಕ್ಫ್ ಮಂಡಳಿ ಚೇರ್ಮನ್ ಆಗಿದ್ದಾಗ ಸರ್ಕಾರದ ವತಿಯಿಂದ ಪಿ.ಯು.ಕಾಲೇಜು ಮಂಜೂರಾತಿ ಮಾಡಿಸಿ ಶೈಕ್ಷಣಿಕವಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಶಾದಿ ಮಹಲ್ ನಿರ್ಮಾಣ ಹಂತದಲ್ಲಿದೆ. ಸುಸಜ್ಜಿತ ವೆಂಟಿಲೇಟರ್ ಸಹಿತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಉಚಿತ ಅಂಬ್ಯುಲೆನ್ಸ್‍ಗಳ ಸೌಲಭ್ಯ ಒದಗಿಸಿದ್ದಾರೆ. ಮತ್ತೊಮ್ಮೆ ಇವರು ವಕ್ಫ್ ಮಂಡಳಿ ಚೇರ್ಮನ್ ಆಗುವುದನ್ನು ತಡೆಯುವುದಕ್ಕಾಗಿ ಇಂತಹ ಕೃತ್ಯಗಳನ್ನು ಎಸಗುತ್ತಿರುವವರ ಮೇಲೆ ಕಾನೂನು ರೀತಿಯ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು ಜಿಲ್ಲಾಡಳಿತವನ್ನು ಒತ್ತಾಯಿಸಿದರು.

ಹಾಜಿ ನಯಾಜ್, ಇಲಾಹಿ ಮುನ್ನ, ಸೈಫುಲ್ಲಾ, ಹನೀಸ್, ಸೈಯದ್ ಖುದ್ದೂಸ್, ಹಾಜಿ ಆರ್.ದಾದಾಪೀರ್, ಸೈಯದ್ ಇಸ್ಮಾಯಿಲ್, ವರದ ಹಜರತ್, ನೂರುಲ್ಲಾ, ಹೆಚ್.ಪ್ಯಾರೆಜಾನ್, ಹಾಜಿ ಗೌಸ್‍ಪೀರ್, ಮುಹಿಬ್, ಬಾಷ, ನಜೀರ್, ಹುಸೇನ್‍ಪೀರ್, ಕೆ.ನಜೀರ್ ಅಹಮದ್ ಸೇರಿದಂತೆ ಜಿಲ್ಲೆಯ ಮಸೀದಿಯ ಮುತುವಲ್ಲಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

suddionenews

Recent Posts

ಸುಮಿತ್ರಮ್ಮ ನಿಧನ

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 13 : ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಗ್ರಾಮದ ನಿವಾಸಿ ಸುಮಿತ್ರಮ್ಮ (67 ವರ್ಷ) ಅವರು ಇಂದು…

3 hours ago

ಚಿತ್ರದುರ್ಗ : ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ

ಚಿತ್ರದುರ್ಗ. ಫೆ.13:   ನಗರದ ವಿ.ಪಿ. ಬಡಾವಣೆಯಲ್ಲಿರುವ ಜಿಲ್ಲಾ ತೋಟಗಾರಿಕೆ ಇಲಾಖೆ ಆವರಣದಲ್ಲಿ ಇದೇ ಫೆ.15 ರಿಂದ 17 ರವರೆಗೆ…

5 hours ago

ಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ

  ಚಿತ್ರದುರ್ಗ, ಫೆ. 13 : ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ಸಣ್ಣ ಫೈನಾನ್ಸ್ ಸಂಸ್ಥೆಗಳಲ್ಲಿ ಸಾಲ ಪಡೆದು…

5 hours ago

ಶ್ರೀ ತೇರು ಮಲ್ಲೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ : 26 ಲಕ್ಷಕ್ಕೆ ಹರಾಜಾದ ಮುಕ್ತಿ ಬಾವುಟ

  ಸುದ್ದಿಒನ್, ಹಿರಿಯೂರು, ಫೆಬ್ರವರಿ. 13 : ದಕ್ಷಿಣಕಾಶಿ ಎಂದೇ ಪ್ರಸಿದ್ದಿ ಪಡೆದಿರುವ ಹಿರಿಯೂರು ನಗರದ ಐತಿಹಾಸಿಕ ಶ್ರೀತೇರುಮಲ್ಲೇಶ್ವರ ಸ್ವಾಮಿಯ…

6 hours ago

ಮೊಳಕಾಲ್ಮೂರು : ಪಿಡಿಒ ಅಮಾನತು

  ಚಿತ್ರದುರ್ಗ. ಫೆ.13 : ಮೊಳಕಾಲ್ಮೂರು ತಾಲ್ಲೂಕು ಜೆ.ಬಿ. ಹಳ್ಳಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹೆಚ್.ಸುರೇಶ್ ಅವರನ್ನು ಕರ್ತವ್ಯ…

6 hours ago

ನಿನ್ನೆ ಇಳಿಕೆಯಾಗಿದ್ದ ಚಿನ್ನ ಇಂದು ಏರಿಕೆ : ಎಷ್ಟಿದೆ ಬೆಲೆ..?

ಬೆಂಗಳೂರು:  ಚಿನ್ನದ ದರದಲ್ಲಿ ಏರಿಳಿತ ಮುಂದುವರೆದಿದೆ. ಒಂದು ದಿನ ಏರಿಕೆಯಾದ್ರೆ ಮರು ದಿನವೇ ಏರಿಕೆಯಾಗುತ್ತಿದೆ. ನಿನ್ನೆಯಷ್ಟೇ 70 ರೂಪಾಯಿ ಅಷ್ಟು…

8 hours ago