Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಸಭೆಯಲ್ಲೂ ಸಿಎಂ ಸ್ವಕ್ಷೇತ್ರದಲ್ಲಿ ಬಿಜೆಪಿಗೆ ಸೋಲು : ಮುಂದಿನ ಚುನಾವಣೆಗೆ ಇದರಿಂದ ಎಫೆಕ್ಟ್ ಆಗುತ್ತಾ..?

Facebook
Twitter
Telegram
WhatsApp

ಹಾವೇರಿ: ರಾಜ್ಯದ 19 ಜಿಲ್ಲೆಗಳಲ್ಲಿ ನಡೆದ 58 ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣೆಯ ಮತ ಏಣಿಕೆ ಕಾರ್ಯ ಶುರುವಾಗಿದೆ. ಈಗಾಗಲೇ ಕೆಲವು ಕಡೆ ಗೆಲುವಿನ ನಗೆ ಬೀರಿದ್ದಾರೆ ಅಭ್ಯರ್ಥಿಗಳು.

ಅದರಲ್ಲೂ ಶಿಗ್ಗಾಂವಿ ಕ್ಷೇತ್ರದಲ್ಲಿ ಬರೋ ಬಂಕಾಪುರ ಪುರಸಭೆಯ ಮತ ಏಣಿಕೆ ನಡೆದಿದ್ದು, ಬಂಕಾಪುರ ಪುರಸಭೆ ಇದೀಗ ಕಾಂಗ್ರೆಸ್ ತೆಕ್ಕೆಗೆ ಸಿಕ್ಕಿದೆ.10 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇದು ಸಿಎಂ ಬೊಮ್ಮಾಯಿ ಅವರ ಸ್ವಕ್ಷೇತ್ರವಾಗಿದೆ. ಇಲ್ಲಿ ಸೋಲು ಕಂಡಿದ್ದು ಬಿಜೆಪಿಗೆ ಮುಖಭಂಗವಾದಂತಾಗಿದೆ. ಸಿಎಂ ಬೊಮ್ಮಾಯಿ ಅವರ ಸ್ವಕ್ಷೇತ್ರದಲ್ಲೇ ಜನ ಸಿಎಂ ಅವರನ್ನ ಒಪ್ಪಿಕೊಳ್ಳುತ್ತಿಲ್ಲವಾ ಎಂಬ ಪ್ರಶ್ನೆ ಇಂದಿನ ಗೆಲುವಿನಿಂದ ಮೂಡಿದೆ.

ಕಳೆದ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲೂ ತಮ್ಮದೇ ತವರು ಜಿಲ್ಲೆಯಲ್ಲಿ ಬೊಮ್ಮಾಯಿ ಅವರು ಸೋತಿದ್ರು. ಇದೀಗ ಪುರಸಭೆಯಲ್ಲೂ ತಮ್ಮ ಸ್ವಕ್ಷೇತ್ರದಲ್ಲೇ ಸೋಲಿನ ರುಚಿ ಕಂಡಿದ್ದಾರೆ. ಸಿಎಂ ಸ್ಥಾನ ಅಲಂಕರಿಸಿ ನೂರು ದಿನಗಳ ಯಶಸ್ವಿ ಪಯಣದಿಂದ ಮುಂದೆ ಸಾಗುತ್ತಿದ್ದಾರೆ ಬೊಮ್ಮಾಯಿ‌ ಅವರು. ಇದರ ನಡು ನಡುವೆ ಸಿಎಂ ಬೊಮ್ಮಾಯಿ ಅವರು ಬದಲಾಗ್ತಾರೆ ಅನ್ನೊ ಗಾಳಿ ಸುದ್ದಿ ಕೂಡ ಕೇಳಿ ಬರುತ್ತಿದೆ. ಇದೆಲ್ಲೆದರ ನಡುವೆ ಮುಂದಿನ 2023ರ ವಿಧಾನಸಭಾ ಚುನಾವಣೆ ಕೂಡ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ ಎಂದು ಹಲವರು ವಾದ ಮಾಡ್ತಿದ್ದಾರೆ. ಇದೆಲ್ಲದರ ನಡುವೆ ಹೀಗೆ ಸ್ವಕ್ಷೇತ್ರದ ಸಪೋರ್ಟ್ ಸಿಗದೇ ಹೋದಲ್ಲಿ ಸಿಎಂ ಅವರ ಮುಂದಿನ ಚುನಾವಣೆಗೆ ಎಪೆಕ್ಟ್ ಹೊಡೆಯಬಹುದು ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬ್ಯಾಂಕ್ ನಿರ್ಲಕ್ಷ್ಯ : ಬಡ್ಡಿ ಸಮೇತ ಪರಿಹಾರ ನೀಡಲು ಗ್ರಾಹಕರ ನ್ಯಾಯಾಲಯ ಆದೇಶ

   ದಾವಣಗೆರೆ ಅ.18 : ನಗರದ ಎ.ವಿ.ಕೆ. ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕಿನ ನಿಲ್ಯಕ್ಷದಿಂದ ಗ್ರಾಹಕರೊಬ್ಬರಿಗೆ ತೊಂದರೆಯಾಗಿದ್ದು, ಈ ಬಗ್ಗೆ ಜಿಲ್ಲಾ ಗ್ರಾಹಕ ನ್ಯಾಯಾಲಯದ ಮೂಲಕ ಗ್ರಾಹಕರಿಗೆ ಬಡ್ಡಿ ಸಮೇತ ಪರಿಹಾರ

ಪೊಲೀಸರಿಗೆ ಗುಡ್ ನ್ಯೂಸ್ : ವಿಮಾ ಹಣ 50 ಲಕ್ಷಕ್ಕೆ ಏರಿಕೆ..!

  ಪೊಲೀಸರಿಗೆಂದೆ ಗುಂಪು ವಿಮಾ ಯೋಜನೆ ಇದೆ‌. ಅದರಲ್ಲಿ ಪೊಲೀಸರಿಗೆ 20 ಲಕ್ಷ ಹಣ ಸಿಗಲಿದೆ. ಆದರೆ ಆ ಮೊತ್ತ ಏರಿಕೆಯಾಗಿದ್ದು, ಪೊಲೀಸರಿಗೆ ಸಂತಸ ತಂದಿದೆ. ಈ ಸಂಬಂಧ ಪೊಲೀಸ್ ಮಹಾನಿರ್ದೇಶಕ ಇಲಾಖೆ ಇಂದು

ಟಿಕೆಟ್ ವಂಚನೆ ಪ್ರಕರಣ: ಪ್ರಹ್ಲಾದ್ ಜೋಶಿಗೆ ರಾಜೀನಾಮೆ ನೀಡುವಂತೆ ಒತ್ತಾಯ

  ಬೆಂಗಳೂರು: ಗೋಪಾಲ್ ಜೋಶಿಯವರ ವಿರುದ್ಧ ದಾಖಲಾದ ಕೇಸ್ ಸಂಬಂಧ ಸಚಿವ ದಿನೇಶ್ ಗುಂಡೂರಾವ್, ಇದೀಗ ಪ್ರಹ್ಲಾದ್ ಜೋಶಿ ವಿರುದ್ಧ ತಿರುಗಿ ಬಿದ್ದಿದ್ದಾರೆ. ನೀವೂ ಮೊದಲು ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದೇ

error: Content is protected !!