Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪರಸಭೆಯಲ್ಲೂ ಸಿಎಂ ಸ್ವಕ್ಷೇತ್ರದಲ್ಲಿ ಬಿಜೆಪಿಗೆ ಸೋಲು : ಮುಂದಿನ ಚುನಾವಣೆಗೆ ಇದರಿಂದ ಎಫೆಕ್ಟ್ ಆಗುತ್ತಾ..?

Facebook
Twitter
Telegram
WhatsApp

ಹಾವೇರಿ: ರಾಜ್ಯದ 19 ಜಿಲ್ಲೆಗಳಲ್ಲಿ ನಡೆದ 58 ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಅವಧಿ ಮುಗಿದ ಗ್ರಾಮ ಪಂಚಾಯತಿಗಳಿಗೆ ನಡೆದ ಚುನಾವಣೆಯ ಮತ ಏಣಿಕೆ ಕಾರ್ಯ ಶುರುವಾಗಿದೆ. ಈಗಾಗಲೇ ಕೆಲವು ಕಡೆ ಗೆಲುವಿನ ನಗೆ ಬೀರಿದ್ದಾರೆ ಅಭ್ಯರ್ಥಿಗಳು.

ಅದರಲ್ಲೂ ಶಿಗ್ಗಾಂವಿ ಕ್ಷೇತ್ರದಲ್ಲಿ ಬರೋ ಬಂಕಾಪುರ ಪುರಸಭೆಯ ಮತ ಏಣಿಕೆ ನಡೆದಿದ್ದು, ಬಂಕಾಪುರ ಪುರಸಭೆ ಇದೀಗ ಕಾಂಗ್ರೆಸ್ ತೆಕ್ಕೆಗೆ ಸಿಕ್ಕಿದೆ.10 ವಾರ್ಡ್ ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಇದು ಸಿಎಂ ಬೊಮ್ಮಾಯಿ ಅವರ ಸ್ವಕ್ಷೇತ್ರವಾಗಿದೆ. ಇಲ್ಲಿ ಸೋಲು ಕಂಡಿದ್ದು ಬಿಜೆಪಿಗೆ ಮುಖಭಂಗವಾದಂತಾಗಿದೆ. ಸಿಎಂ ಬೊಮ್ಮಾಯಿ ಅವರ ಸ್ವಕ್ಷೇತ್ರದಲ್ಲೇ ಜನ ಸಿಎಂ ಅವರನ್ನ ಒಪ್ಪಿಕೊಳ್ಳುತ್ತಿಲ್ಲವಾ ಎಂಬ ಪ್ರಶ್ನೆ ಇಂದಿನ ಗೆಲುವಿನಿಂದ ಮೂಡಿದೆ.

ಕಳೆದ ಬಾರಿಯ ವಿಧಾನ ಪರಿಷತ್ ಚುನಾವಣೆಯಲ್ಲೂ ತಮ್ಮದೇ ತವರು ಜಿಲ್ಲೆಯಲ್ಲಿ ಬೊಮ್ಮಾಯಿ ಅವರು ಸೋತಿದ್ರು. ಇದೀಗ ಪುರಸಭೆಯಲ್ಲೂ ತಮ್ಮ ಸ್ವಕ್ಷೇತ್ರದಲ್ಲೇ ಸೋಲಿನ ರುಚಿ ಕಂಡಿದ್ದಾರೆ. ಸಿಎಂ ಸ್ಥಾನ ಅಲಂಕರಿಸಿ ನೂರು ದಿನಗಳ ಯಶಸ್ವಿ ಪಯಣದಿಂದ ಮುಂದೆ ಸಾಗುತ್ತಿದ್ದಾರೆ ಬೊಮ್ಮಾಯಿ‌ ಅವರು. ಇದರ ನಡು ನಡುವೆ ಸಿಎಂ ಬೊಮ್ಮಾಯಿ ಅವರು ಬದಲಾಗ್ತಾರೆ ಅನ್ನೊ ಗಾಳಿ ಸುದ್ದಿ ಕೂಡ ಕೇಳಿ ಬರುತ್ತಿದೆ. ಇದೆಲ್ಲೆದರ ನಡುವೆ ಮುಂದಿನ 2023ರ ವಿಧಾನಸಭಾ ಚುನಾವಣೆ ಕೂಡ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ ಎಂದು ಹಲವರು ವಾದ ಮಾಡ್ತಿದ್ದಾರೆ. ಇದೆಲ್ಲದರ ನಡುವೆ ಹೀಗೆ ಸ್ವಕ್ಷೇತ್ರದ ಸಪೋರ್ಟ್ ಸಿಗದೇ ಹೋದಲ್ಲಿ ಸಿಎಂ ಅವರ ಮುಂದಿನ ಚುನಾವಣೆಗೆ ಎಪೆಕ್ಟ್ ಹೊಡೆಯಬಹುದು ಎನ್ನಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ

ಈ ರಾಶಿಯ ಇಂಟೀರಿಯರ್ ಡಿಸೈನ್ ಮಾಡುವವರಿಗೆ ಧನ ಲಾಭ, ಈ ಪಂಚ ರಾಶಿಗಳಿಗೆ ಆಕಸ್ಮಿಕ ಧನ ಲಾಭ ಪ್ರಾಪ್ತಿ,   ಗುರುವಾರ ರಾಶಿ ಭವಿಷ್ಯ ಏಪ್ರಿಲ್-25,2024 ಸೂರ್ಯೋದಯ: 05:57, ಸೂರ್ಯಾಸ್ತ : 06:30 ಶಾಲಿವಾಹನ

ಅಣ್ಣಾವ್ರಿಗೆ ಅಣ್ಣಾವ್ರೇ ಸಾಟಿ, ಹಿರಿಯೂರಲ್ಲಿ ಬಿ.ಎನ್.ಚಂದ್ರಪ್ಪ ಬಣ್ಣನೆ

ಸುದ್ದಿಒನ್, ಚಿತ್ರದುರ್ಗ, ಏ. 24 :  ಮುಖ್ಯಮಂತ್ರಿ ಸ್ಥಾನವನ್ನು ಸುಲಭವಾಗಿ ಅಲಂಕರಿಸುವ ಬಂದಿದ್ದ ಅವಕಾಶವನ್ನು ನಿರಾಕರಿಸಿ, ಕನ್ನಡ ನಾಡು-ನುಡಿಗೆ ಬದುಕು ಮಿಸಲಿಟ್ಟ ಡಾ.ರಾಜಕುಮಾರ್ ಅವರಿಗೆ ಅವರೇ ಸಾಟಿ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಬಣ್ಣಿಸಿದರು.

ಭದ್ರಾ ಮೇಲ್ದಂಡೆ ಯೋಜನೆ ಬಗ್ಗೆ ಸುಳ್ಳು ಹೇಳಿದರೆ ತಾಯಿ ಭದ್ರೆ ಸಹಿಸುವುದಿಲ್ಲ : ಕಮಲ ಪಡೆಗೆ ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ತಿರುಗೇಟು

ಸುದ್ದಿಒನ್, ಚಿತ್ರದುರ್ಗ, ಏ. 24 : ಭದ್ರಾ ಮೇಲ್ದಂಡೆ ಯೋಜನೆ ವಿಷಯದಲ್ಲಿ ನಿರಂತರ ಸುಳ್ಳು ಹೇಳಿಕೊಂಡು ಬರುತ್ತಿರುವ ಬಿಜೆಪಿಯವರಿಗೆ ಭದ್ರಾ ಮೇಲ್ದಂಡೆ ಯೋಜನೆ ಜಾರಿ, ಅದಕ್ಕಾಗಿ ನಡೆದ ಹೋರಾಟದ ಮಾಹಿತಿ ಕೊರತೆ ಇದೆ ಅಥವಾ

error: Content is protected !!