Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಒಳ ಮೀಸಲಾತಿ ಜಾರಿ ವಿಳಂಬ : ದಲಿತ ಸಂಘಟನೆಗಳಿಂದ ಅಕ್ಟೋಬರ್ 16 ರಂದು ಬೃಹತ್ ಪ್ರತಿಭಟನಾ ರ್ಯಾಲಿ : ಎಂ. ಶಿವಮೂರ್ತಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 14 : ಒಳ ಮೀಸಲಾತಿ ಜಾರಿಗೊಳಿಸುವ ಅಧಿಕಾರ ಆಯಾ ರಾಜ್ಯಗಳಿಗಿದೆ ಎಂದು ಸುಪ್ರೀಂಕೋರ್ಟ್ ಮಹತ್ತರ ತೀರ್ಪು ನೀಡಿದ್ದರೂ ರಾಜ್ಯ ಸರ್ಕಾರ ಮೀನಾಮೇಷ ಎಣಿಸುತ್ತಿರುವುದನ್ನು ವಿರೋಧಿಸಿ ದಲಿತ ಸಂಘಟನೆಗಳ ವತಿಯಿಂದ ಅ.16 ರಂದು ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದೆಂದು ಎಂ.ಶಿವಮೂರ್ತಿ ಚಳ್ಳಕೆರೆ ಇವರು ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನೀಲಕಂಠೇಶ್ವರಸ್ವಾಮಿ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಲಾಗುವುದು. ವಿವಿಧ ದಲಿತ ಸಂಘಟನೆಗಳ ಮುಖಂಡರು, ಚಿಂತಕರು, ಸಾಹಿತಿಗಳು, ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ
ಎಂ.ಶಿವಮೂರ್ತಿ ಮನವಿ ಮಾಡಿದರು.

ಕೆ.ಟಿ.ಶಿವಕುಮಾರ್ ಮಾತನಾಡುತ್ತ ಒಳ ಮೀಸಲಾತಿ ನಮ್ಮ ಹಕ್ಕು. ತಡ ಮಾಡದೆ ಜಾರಿಗೊಳಿಸಬೇಕು. ಇಲ್ಲವಾದಲ್ಲಿ ಬೀದಿಗಿಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ. ಮಾದಿಗರ ಪರವಾಗಿರುವುದಾಗಿ ಹೇಳಿಕೊಳ್ಳುತ್ತಿರುವ ಅಹಿಂದಾ ವರ್ಗದ ನಾಯಕ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿಗೆ ತಂದು ಜಿಲ್ಲೆಗೆ ಕಾಲಿಡಬೇಕು. ಇಲ್ಲವಾದಲ್ಲಿ ವಿದ್ಯಾವಂತನಿಂದ ಹಿಡಿದು ಅನಕ್ಷರಸ್ಥರು ಎಲ್ಲಿ ಯಾವಾಗ ಘೇರಾವ್ ಹಾಕುತ್ತಾರೋ ಗೊತ್ತಿಲ್ಲ ಎಂದು ಸರ್ಕಾರವನ್ನು ಎಚ್ಚರಿಸಿದರು.

ಕೆ.ರಾಜಣ್ಣ ಮಾತನಾಡಿ ಕಳೆದ ಮೂವತ್ತು ವರ್ಷಗಳಿಂದಲೂ ಒಳ ಮೀಸಲಾತಿಗಾಗಿ ಹೋರಾಟ ನಡೆಯುತ್ತಿದೆ. ಪರಿಶಿಷ್ಟ ಜಾತಿಯಲ್ಲಿನ 101 ಉಪಜಾತಿಗಳಿಗೆ ಅನ್ಯಾಯವಾಗಬಾರದೆಂದು. ಪ್ರತಿ ಹಳ್ಳಿ ಹಳ್ಳಿಗೆ ಹೋಗಿ ಒಳ ಮೀಸಲಾತಿ ಕುರಿತು ದಲಿತರಲ್ಲಿ ಜಾಗೃತಿ ಮೂಡಿಸಲಾಗುವುದೆಂದರು. ಕುಂಚಿಗನಹಾಳ್ ಮಹಾಲಿಂಗಪ್ಪ, ಚಿಕ್ಕಗೊಂಡನಹಳ್ಳಿ ಮಲ್ಲಿಕಾರ್ಜುನ್, ಎಂ.ಆರ್.ಶಿವರಾಜ್, ಬಸಮ್ಮ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment