Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದಾವಣಗೆರೆಯಲ್ಲೂ ಮತದಾರರ ಪಟ್ಟಿ ಡಿಲೀಟ್ : ಬಿಬಿಎಂಪಿ ಮುಂದೆ ಕಾಂಗ್ರೆಸ್ ಪ್ರತಿಭಟನೆ..!

Facebook
Twitter
Telegram
WhatsApp

ಬೆಂಗಳೂರು: ಲಕ್ಷಾಂತರ ಮತದಾರರ ಹೆಸರು ಪಟ್ಟಿಯಲ್ಲಿಯೇ ಇಲ್ಲದಂತೆ ಡಿಲಿಟ್ ಆಗಿದೆ. ಬದುಕಿದ್ದವರ ಹೆಸರನ್ನೇ ತೆಗೆದು ಹಾಕಿದ್ದಾರೆ. ಈ ಸಂಬಂಧ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು, ಇಂದು ಮಧ್ಯಾಹ್ನದ ಒಳಗೆ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಇನ್ನು ಇಂದು ಬೆಳಗ್ಗೆಯೇ ಕಾಂಗ್ರೆಸ್ ನಾಯಕರು ಬಿಬಿಎಂಪಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿದ್ದಾರೆ. ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದೆ.

ಇನ್ನು ಚಿಲುಮೆ ಸಂಸ್ಥೆಯಲ್ಲಿ ವೋಟರ್ ಐಡಿ ದುರ್ಬಳಕೆ ಮಾತ್ರವಲ್ಲ ಇನ್ನು ಹಲವು ದಂಧೆಗಳು ನಡೆಯುತ್ತಿದ್ದವು ಎಂದು ಆರೋಪ‌ ಮಾಡಿದ್ದಾರೆ. ಇದೊಂದು NGO ಮಾತ್ರ ಆಗಿತ್ತು. ಸಮಾಜಸೇವೆ ಮಾಡುವುದಕ್ಕೆ ಅಂತ ಇರುವ ಸಂಸ್ಥೆಯಲ್ಲಿ ನೋಟ್ ಮಷಿನ್ ಯಾಕೆ ಇತ್ತು ಎಂದು ಕಾಂಗ್ರೆಸ್ ಪ್ರಶ್ನಿಸಿದ್ದಾರೆ. ಬ್ಲಾಕ್ ಮನಿಯನ್ನು ವೈಟ್ ಮಾಡುವ ಕೆಲಸವನ್ನು ಚಿಲುಮೆ ಸಂಸ್ಥೆ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ. ಅಷ್ಟೇ ಅಲ್ಲ ಕಾಲೇಜು ವಿದ್ಯಾರ್ಥಿ ವೋಟರ್ ಐಡಿಯನ್ನು ಬಳಸಿ ವೋಟರ್ ಸರ್ವೆ ಮಾಡುತ್ತಿದ್ದರು. ಬಸವನಗುಡಿಯ ವ್ಯಕ್ತಿಯೊಬ್ಬ ಅನುಮಾನಗೊಂಡು ಪ್ರಶ್ನಿಸಿದಾಗ ಅಲ್ಲಿನ ಅಧಿಕಾರಿಗಳು ಕಾಲ್ಕಿತ್ತಿದ್ದಾರೆ.

ಇನ್ನು ದಾವಣಗೆರೆಯಲ್ಲೂ ಡಿಲೀಟ್ ಆಗಿರುವ ಘಟನೆ ಬೆಳಕಿಗೆ ಬಂದಿದೆ. ಹೋರಾಟಗಾರ ಹನೀಷ್ ಪಾಷ ಈ ಆರೋಪ ಮಾಡಿದ್ದಾರೆ. ಮುಸ್ಲಿಂ, ದಲಿತ ಸಮುದಾಯದವರ ಹೆಸರೇ ಡಿಲೀಟ್ ಆಗಿದೆ. ನನ್ನ ತಾಯಿ ಹೆಸರು ಕೂಡ ಡಿಲೀಟ್ ಆಗಿದೆ. ಪಾಲಿಕೆ ಸಿಬ್ಬಂದಿ ವಿಚಾರಿಸಿದರೆ ಮನೆಗೆ ಬಂದಾಗ ಅವರು ಇರಲಿಲ್ಲ ಎಂದು ಹೇಳುತ್ತಿದ್ದಾರೆ. ಚುನಾವಣಾ ಆಯೋಗ ಇದನ್ನು ಗಮನಹರಿಸಬೇಕಾಗಿದೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಒಂದು ತಿಂಗಳು ಬ್ರಶ್ ಮಾಡದಿದ್ದರೆ ಏನಾಗುತ್ತದೆ ಗೊತ್ತಾ

  ಸುದ್ದಿಒನ್ : ಅನೇಕ ಜನರು ಬಾಯಿಯ ನೈರ್ಮಲ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಾರೆ. ಹೀಗಾಗಿ ಅವರು ತಮ್ಮ ಹಲ್ಲು ಮತ್ತು ನಾಲಿಗೆಯನ್ನು ಎಲ್ಲ ರೀತಿಯಲ್ಲೂ ಸ್ವಚ್ಛವಾಗಿಟ್ಟುಕೊಳ್ಳುತ್ತಾರೆ. ಆದರೆ ಕೆಲವರಿಗೆ ಮುಂಜಾನೆ ಹಲ್ಲುಜ್ಜುವುದು ಮತ್ತು ಸ್ವಚ್ಛವಾಗಿಟ್ಟುಕೊಳ್ಳದಷ್ಟು

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ,

ಈ ರಾಶಿಗಳಿಗೆ ಕಂಕಣಬಲ ಆಗೇ ಆಗುವುದು, ಈ ರಾಶಿಗಳಿಗೆ ಉದ್ಯೋಗದಲ್ಲಿ ತೊಂದರೆ, ಶುಕ್ರವಾರ- ರಾಶಿ ಭವಿಷ್ಯ ಅಕ್ಟೋಬರ್-18,2024 ಸೂರ್ಯೋದಯ: 06:13, ಸೂರ್ಯಾಸ್ತ : 05:48 ಶಾಲಿವಾಹನ ಶಕೆ -1946 ಸಂವತ್-2080 ಕ್ರೋಧಿನಾಮ ಸಂವತ್ಸರ, ದಕ್ಷಿಣ

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..!

ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ..! ಬೆಂಗಳೂರು: ನಟಿ ಅಮೂಲ್ಯ ಜಗದೀಶ್ ಅವರ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಸ್ಯಾಂಡಲ್ ವುಡ್ ಗೆ ಈ ಸುದ್ದಿ ಬಿರುಗಾಳಿಯಂತೆ ಎದುರಾಗಿದೆ. ದೀಪಕ್ ಅರಸ್

error: Content is protected !!