Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಮಾರ್ಚ್ 4 ರಂದು ದಾವಣಗೆರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ : ಬಿ.ಇ.ಜಗದೀಶ

---Advertisement---

ವರದಿ ಮತ್ತು ಫೋಟೋ ಕೃಪೆ                          ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರಕ್ಕಾಗಿ ಮಾ.4 ರಂದು ದಾವಣಗೆರೆಗೆ ಆಗಮಿಸಲಿದ್ದು, ಚಿತ್ರದುರ್ಗ ಜಿಲ್ಲೆಯಿಂದ ಐದರಿಂದ ಹತ್ತು ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆಂದು ಕರ್ನಾಟಕ ಆಮ್ ಆದ್ಮಿ ಪಕ್ಷದ ರಾಜ್ಯ ಜಂಟಿ ಕಾರ್ಯದರ್ಶಿ ಬಿ.ಇ.ಜಗದೀಶ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಂಜಾಬ್ ಮುಖ್ಯಮಂತ್ರಿ ಭಗವಂತ್‍ಸಿಂಗ್ ಮಾನ್‍ರವರು ಪ್ರಚಾರದಲ್ಲಿ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕವನ್ನು ಭ್ರಷ್ಟಾಚಾರ ಮುಕ್ತ ರಾಜ್ಯವನ್ನಾಗಿ ಮಾಡಬೇಕೆಂಬುದು ಆಮ್ ಆದ್ಮಿ ಪಾರ್ಟಿಯ ಉದ್ದೇಶ.

ದೆಹಲಿ ಮಾದರಿಯಲ್ಲಿ ರಾಜ್ಯದಲ್ಲಿಯೂ ಆರೋಗ್ಯ ಶಿಕ್ಷಣ, ಆಹಾರ ಪ್ರತಿಯೊಬ್ಬರಿಗೂ ಸಿಗುವಂತಾಗಬೇಕು. ಅಂಬೇಡ್ಕರ್ ಸಂವಿಧಾನದಂತೆ ದೇಶ ಅಭಿವೃದ್ದಿಯಾಗುತ್ತಿಲ್ಲ. ಬಿಜೆಪಿ.ಯವರು ಐ.ಡಿ. ಮತ್ತು ಇ.ಡಿ.ಯನ್ನು ದುರುಪಯೋಗಪಡಿಸಿಕೊಂಡು ದೆಹಲಿ ಉಪ ಮುಖ್ಯಮಂತ್ರಿಯನ್ನು ಬಂಧಿಸಿರುವುದನ್ನು ವಿರೋಧಿಸಿ ಹೋರಾಟ ಮಾಡುತ್ತೇವೆ. ಆಮ್ ಆದ್ಮಿ ಪಕ್ಷ ಅಧಿಕಾರದಲ್ಲಿರುವುದನ್ನು ಕಂಡು ಸಹಿಸಿಕೊಳ್ಳಲು ಆಗದ ಬಿಜೆಪಿ. ವಿನಾ ಕಾರಣ ತೊಂದರೆ ಕೊಡುತ್ತಿದೆ ಎಂದು ಕಿಡಿ ಕಾರಿದರು.

ಮುಂದುವರೆದವರಿಗೆ ಅನುಕೂಲ ಮಾಡಿ ಹಿಂದುಳಿದವರನ್ನು ತುಳಿಯುತ್ತಿರುವ ಬಿಜೆಪಿ.ಪಕ್ಷಪಾತ ರಾಜಕಾರಣ ಮಾಡುತ್ತಿರುವುದನ್ನು ಜನತೆಗೆ ತಿಳಿಸುವುದಕ್ಕಾಗಿ ಅರವಿಂದ ಕ್ರೇಜಿವಾಲರವರು ದಾವಣಗೆರೆಗೆ ಆಗಮಿಸುತ್ತಿದ್ದು, ಪ್ರದಾನಿ ಮೋದಿರವರ ಸಣ್ಣತನದ ರಾಜಕಾರಣವನ್ನು ಮತದಾರರಿಗೆ ಮನವರಿಕೆ ಮಾಡಿಕೊಡಲಾಗುವುದು.

ಶಿವಮೊಗ್ಗಕ್ಕೆ ಆಗಮಿಸಿದ್ದ ನರೇಂದ್ರ ಮೋದಿರವರು ಅಭಿವೃದ್ದಿ ಬಗ್ಗೆ ಮಾತನಾಡುವುದನ್ನು ಬಿಟ್ಟು ಲಿಂಗಾಯಿತ ಮತಗಳನ್ನು ಸೆಳೆಯುವುದಕ್ಕಾಗಿ ಎಸ್.ನಿಜಲಿಂಗಪ್ಪ ಹಾಗೂ ವೀರೇಂದ್ರಪಾಟಿಲ್‍ರನ್ನು ಬಣ್ಣಿಸುವ ಅಗತ್ಯವಿರಲಿಲ್ಲ ಎಂದು ವ್ಯಂಗ್ಯವಾಡಿದರು.

ನಗರದ ಸ್ಲಂಗಳಲ್ಲಿರುವ ಹದಿನೈದರಿಂದ ಇಪ್ಪತ್ತು ಸಾವಿರ ಕುಟುಂಬಗಳಿಗೆ ವಾಸಿಸಲು ಸ್ವಂತ ಮನೆಗಳಿಲ್ಲ. ಶಾಸಕರು ತಮ್ಮ ಹಿಂಬಾಲಕರುಗಳಿಗೆ ಮನೆಗಳನ್ನು ನೀಡಿದ್ದಾರೆಯೇ ವಿನಃ ನಿಜವಾದ ಬಡವರಿಗಲ್ಲ. ನಾವುಗಳು ಬಡತನವನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ಬುಲೆಟ್ ಟ್ರೈನ್, ವಿಮಾನ ನಿಲ್ದಾಣ, ಸ್ಮಾರ್ಟ್ ಸಿಟಿ ಇವುಗಳೆಲ್ಲಾ ಸಿರಿವಂತರಿಗೆ ಬೇಕು. ಬಡವರಿಗಲ್ಲ. ಬಂಡವಾಳಶಾಹಿಗಳು, ಉದ್ಯಮಿಗಳ ಪರವಾಗಿರುವ ಕೋಮುವಾದಿ ಬಿಜೆಪಿ.ಯಿಂದ ದೇಶ ಹೇಗೆ ಅಭಿವೃದ್ದಿ ಕಾಣಲು ಸಾಧ್ಯ ಎಂದು ಪ್ರಶ್ನಿಸಿದರು.

ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಫಾರೂಖ್, ಜಿಲ್ಲಾ ಜಂಟಿ ಕಾರ್ಯದರ್ಶಿ ಕೆಂಚಪ್ಪ, ಉಪಾಧ್ಯಕ್ಷ ಲಕ್ಷ್ಮಿಕಾಂತರೆಡ್ಡಿ ಪತ್ರಿಕಾಗೋಷ್ಠಿಯಲ್ಲಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...