Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೆಹಲಿ ಸಿಎಂ ಕೇಜ್ರಿವಾಲ್ ಜೈಲಿನಿಂದ ಬಿಡುಗಡೆ : ಸತ್ಯಕ್ಕೆ ಸಿಕ್ಕ ಜಯ : ಎಎಪಿ ಜಿಲ್ಲಾಧ್ಯಕ್ಷ ಬಿ.ಇ. ಜಗದೀಶ್

---Advertisement---

ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್.14 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 156 ದಿನಗಳ ನಂತರ ತಿಹಾರ್ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ತಿಹಾರ್ ಜೈಲಿನಿಂದ ಬಿಡುಗಡೆಯಾದ ನಂತರ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅಭಿನಂದನೆಗಳನ್ನು ಸಲ್ಲಿಸುತ್ತಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಚಿತ್ರದುರ್ಗ ಎಎಪಿ ಜಿಲ್ಲಾಧ್ಯಕ್ಷ ಬಿ.ಇ. ಜಗದೀಶ್ ಅವರು ಕೂಡಾ ಸುಪ್ರೀಂ ಕೋರ್ಟ್ ತೀರ್ಪನ್ನು ಸ್ವಾಗತಿಸಿದ್ದಾರೆ ಮತ್ತು ಕೇಜ್ರಿವಾಲ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ತೀರ್ಪಿನಿಂದ ಪಕ್ಷದ ಅಭಿಮಾನಿಗಳಿಗೆ ಸಂತಸ ತಂದಿದೆ. ಪಂಜರದ ಗಿಳಿಯಾಗಿ ಕೆಲಸ ಮಾಡಬಾರದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ರಾಜಕೀಯ ಪಕ್ಷದವರು ಅಧಿಕಾರಿಗಳು ತಪ್ಪು ಹೆಜ್ಜೆಗಳನ್ನು ಇಡಬಾರದು.ಕಾನೂನು ಎಲ್ಲರಿಗೂ ಒಂದೇ. ಮುಂದಿನ ದಿನಗಳಲ್ಲಿ ಕೇಜ್ರಿವಾಲ್ ರವರು ಪಕ್ಷವನ್ನು ಬಲಪಡಿಸುತ್ತಾರೆ. ರಾಜ್ಯ ಸೇರಿದಂತೆ ದೇಶದೆಲ್ಲೆಡೆ ನಮ್ಮ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ್ದಾರೆ.

ಜೈಲಿನಿಂದ ಹೊರಬಂದ ಅವರನ್ನು ಪಕ್ಷದ ಮುಖಂಡರು ತಿಹಾರ್ ಜೈಲಿನ ಹೊರಗೆ ಮುಖ್ಯಮಂತ್ರಿಯನ್ನು ಸ್ವಾಗತಿಸಿದ್ದರು. ಈ ಸಂದರ್ಭದಲ್ಲಿ ಸಿಎಂ ಪತ್ನಿ ಸುನೀತಾ ಕೇಜ್ರಿವಾಲ್ ಹಾಗೂ ಅವರ ಪುತ್ರಿ ಉಪಸ್ಥಿತರಿದ್ದರು. ಪಂಜಾಬ್ ಸಿಎಂ ಮಾನ್ ಕೂಡ ಕೇಜ್ರಿವಾಲ್ ಅವರನ್ನು ಸ್ವಾಗತಿಸಲು ಬಂದಿದ್ದರು. ಸಿಎಂ ಕೇಜ್ರಿವಾಲ್ ಅವರು ತಿಹಾರ್ ನಿಂದ ರೋಡ್ ಶೋ ಮೂಲಕ ಅವರ ಮನೆಗೆ ತೆರಳಿದರು.

ಶುಕ್ರವಾರ (ಸೆಪ್ಟೆಂಬರ್ 13) ಬೆಳಗ್ಗೆ ಕೇಜ್ರಿವಾಲ್‌ಗೆ 10 ಲಕ್ಷ ರೂಪಾಯಿ ಬಾಂಡ್‌ನಲ್ಲಿ ಸುಪ್ರೀಂ ಕೋರ್ಟ್ ನಿಯಮಿತ ಜಾಮೀನು ನೀಡಿತು. ಇಡಿ ಪ್ರಕರಣದಲ್ಲಿ ಕೇಜ್ರಿವಾಲ್‌ಗೆ ಸುಪ್ರೀಂ ಕೋರ್ಟ್ ಈಗಾಗಲೇ ಮಧ್ಯಂತರ ಜಾಮೀನು ನೀಡಿದೆ. ಅಬಕಾರಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಅವರನ್ನು ಈ ವರ್ಷ ಮಾರ್ಚ್ 21 ರಂದು ಇಡಿ ಮತ್ತು ಜೂನ್ 26 ರಂದು ಸಿಬಿಐ ಬಂಧಿಸಿತ್ತು.

ಜೈಲಿನಿಂದ ಹೊರಬಂದ ನಂತರ ಅರವಿಂದ ಕೇಜ್ರಿವಾಲ್, ನಾನು ಜೀವನದಲ್ಲಿ ಸಾಕಷ್ಟು ಹೋರಾಟ ಮಾಡಿದ್ದೇನೆ, ಅನೇಕ ಕಷ್ಟಗಳನ್ನು ಎದುರಿಸಿದ್ದೇನೆ, ಆದರೆ ದೇವರು ನನಗೆ ಪ್ರತಿ ಹೆಜ್ಜೆಗೂ ಬೆಂಬಲ ನೀಡಿದ್ದಾನೆ. ಸಮಾಜದ ಎಲ್ಲಾ ವರ್ಗದ ಜನರು ಬೆಂಬಲಿಸಿದ್ದಾರೆ. ಜನರ ಪ್ರಾರ್ಥನೆಯಿಂದ ಜೈಲಿನಿಂದ ಹೊರಬಂದಿದ್ದೇನೆ ಎಂದು ಕೇಜ್ರಿವಾಲ್ ಹೇಳಿದ್ದಾರೆ. ಇದೀಗ ನನ್ನ ಧೈರ್ಯ 100 ಪಟ್ಟು ಹೆಚ್ಚಾಯಿತು. ದೇಶವನ್ನು ದುರ್ಬಲಗೊಳಿಸಲು ದೇಶವಿರೋಧಿ ಶಕ್ತಿಗಳು ಕೆಲಸ ಮಾಡುತ್ತಿವೆ.. ಅವರ ವಿರುದ್ಧ ಹೋರಾಟ ಮುಂದುವರಿಸುವುದಾಗಿ ಹೇಳಿದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment