Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಬಂಧನ…!

---Advertisement---

 

ನವದೆಹಲಿ : ಮದ್ಯ ಹಗರಣ ಪ್ರಕರಣದಲ್ಲಿ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಬಂಧಿಸಿದೆ.

ಇಂದು ಮಧ್ಯಾಹ್ನ ಸಿಬಿಐ ತನಿಖೆಗೆ ಹಾಜರಾಗಿದ್ದ ಮನೀಶ್ ಸಿಸೋಡಿಯಾ ಅವರನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಸಿಬಿಐ ಅಧಿಕಾರಿಗಳು ಮನೀಶ್ ಸಿಸೋಡಿಯಾ ಅವರನ್ನು ಬಂಧಿಸುವ ಮೊದಲು ಸುಮಾರು 8 ಗಂಟೆಗಳ ಕಾಲ ವಿಚಾರಣೆ ನಡೆಸಿದರು.

ಅದರ ನಂತರ, ಅಧಿಕಾರಿಗಳು ಬಂಧನವನ್ನು ಘೋಷಿಸಿದರು.ಅಧಿಕಾರಿಗಳು ಸಿಸೋಡಿಯಾ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದಾರೆ.
ನಾಳೆ ಸಿಸೋಡಿಯಾ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.

ಸಿಸೋಡಿಯಾ ಬಂಧನದ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಿಬಿಐ ಕಚೇರಿಯ ಸುತ್ತಮುತ್ತ ಸೆಕ್ಷನ್ 144 ಜಾರಿಗೊಳಿಸಿದ್ದಾರೆ. ಯಾವುದೇ ರೀತಿಯ ಆತಂಕ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ದೆಹಲಿ ಮದ್ಯ ಹಗರಣದಲ್ಲಿ ಸಿಬಿಐ ಮತ್ತು ಇಡಿ ಅಧಿಕಾರಿಗಳು ಈಗಾಗಲೇ 12 ಜನರನ್ನು ಬಂಧಿಸಿದ್ದಾರೆ. ನಿಯಮಗಳಿಗೆ ವಿರುದ್ಧವಾಗಿ ಟೆಂಡರ್‌ಗಳನ್ನು ಕರೆಯಲಾಗಿದೆ ಎಂಬ ಆರೋಪಗಳು ಸಿಸೋಡಿಯಾ ವಿರುದ್ಧ ಇವೆ.

ಈ ಕ್ರಮದಲ್ಲಿ.. ಸಿಬಿಐ ತನಿಖೆಗೂ ಮುನ್ನ ಮನೀಶ್ ಸಿಸೋಡಿಯಾ ಮಾಡಿರುವ ಟ್ವೀಟ್ ಇದೀಗ ವೈರಲ್ ಆಗಿದೆ. “ಇವತ್ತು ಮತ್ತೆ ಸಿಬಿಐ ವಿಚಾರಣೆಗೆ ಹೋಗುತ್ತಿದ್ದೇನೆ. ವಿಚಾರಣೆಗೆ ಸಂಪೂರ್ಣ ಸಹಕಾರ ನೀಡುತ್ತೇನೆ. ಆದರೆ… ಈ ವಿಚಾರಣೆಯ ನಂತರ ಕೆಲವು ತಿಂಗಳು ಜೈಲಿನಲ್ಲಿ ಇರಬೇಕಾಗಿ ಬಂದರೂ ಲೆಕ್ಕ ಹಾಕುವುದಿಲ್ಲ. ಸಿಸೋಡಿಯಾ ಅವರು ಟ್ವಿಟರ್‌ನಲ್ಲಿ ಉಲ್ಲೇಖಿಸಿರುವುದು ಸಂಚಲನ ಮೂಡಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...