Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಉತ್ತರ ಭಾರತದಲ್ಲಿ ಭೂಕಂಪ : ಟರ್ಕಿಯಂತೆ ಭಾರತದಲ್ಲೂ ಭಾರಿ ಭೂಕಂಪ ಸಾಧ್ಯತೆ…!

---Advertisement---

ನವದೆಹಲಿ : ಉತ್ತರ ಭಾರತದ ಹಲವೆಡೆ ಬುಧವಾರ ಮಧ್ಯಾಹ್ನ ಭೂಕಂಪ ಸಂಭವಿಸಿದೆ. ರಾಷ್ಟ್ರ ರಾಜಧಾನಿ ದೆಹಲಿ, ಉತ್ತರ ಪ್ರದೇಶ ಮತ್ತು ಹರಿಯಾಣದ ಹಲವು ಸ್ಥಳಗಳಲ್ಲಿ ಭೂಕಂಪನದ ಅನುಭವವಾಗಿದೆ.

ನೆರೆಯ ನೇಪಾಳದಲ್ಲೂ ಭೂಕಂಪ ಸಂಭವಿಸಿದೆ. ನೇಪಾಳದ ರಾಷ್ಟ್ರೀಯ ಭೂಕಂಪನ ಕೇಂದ್ರವು ಬುಧವಾರ ಮಧ್ಯಾಹ್ನ 1.45 ರ ಸುಮಾರಿಗೆ ಬಜುರಾದಲ್ಲಿ ರಿಕ್ಟರ್ ಮಾಪಕದಲ್ಲಿ 5.2 ರ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ವರದಿ ಮಾಡಿದೆ.
ಭೂಕಂಪದ ಕೇಂದ್ರವು 10 ಕಿ.ಮೀ ಆಳದಲ್ಲಿದೆ ಎಂದು ತಿಳಿಸಿದೆ.

ಮತ್ತೊಂದೆಡೆ, ದಕ್ಷಿಣ ಭಾರತದಲ್ಲಿಯೂ ಭೂಕಂಪನದ ಅನುಭವವಾಗಿದೆ. ಚೆನ್ನೈ ನಗರದಲ್ಲಿ ​​ಸ್ವಲ್ಪ ಪ್ರಮಾಣದ ಕಂಪನ ಉಂಟಾಗಿದೆ. ಅಣ್ಣಾ ಸಲೈ ಮತ್ತು ವೈಟ್ಸ್ ರಸ್ತೆಯಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವ ಆಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ವೇಳೆ ಜನರು ಗಾಬರಿಯಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ‌. ಈ ಭಾಗದಲ್ಲಿ ನಡೆಯುತ್ತಿರುವ ಮೆಟ್ರೋ ಕಾಮಗಾರಿಯಿಂದ ಈ ರೀತಿಯ ಭೂ ಕಂಪನ ಆಗಿದೆ ಎನ್ನಲಾಗಿದೆ. ಆದರೆ, ಮೆಟ್ರೋ ಅಧಿಕಾರಿಗಳು ಇದನ್ನು ಸಂಪೂರ್ಣವಾಗಿ ನಿರಾಕರಿಸಿದ್ದಾರೆ.
ಕಂಪನ ಅಥವಾ ಭೂಕಂಪವನ್ನು ಉಂಟುಮಾಡುವಂತಹ ಯಾವುದೇ ಕೆಲಸವನ್ನು ಪ್ರಸ್ತುತ ಮಾಡಲಾಗುತ್ತಿಲ್ಲ ಎಂದು ಅವರು ಹೇಳಿದರು. ಚೆನ್ನೈನಲ್ಲಿ ಯಾವುದೇ ಭೂಕಂಪ ಸಂಭವಿಸಿಲ್ಲ ಎಂದು ರಾಷ್ಟ್ರೀಯ ಭೂಕಂಪನ ಕೇಂದ್ರವೂ ತಿಳಿಸಿದೆ.

ಚೆನ್ನೈನಲ್ಲಿ ಅಲ್ಪಸ್ವಲ್ಪ ಭೂಕಂಪವಾಗಿದೆ ಎಂದು ದೆಹಲಿಯ ರಾಷ್ಟ್ರೀಯ ಭೂಕಂಪ ಸಂಶೋಧನಾ ಕೇಂದ್ರ ಮಾಹಿತಿ ನೀಡಿದೆ. ಆದರೆ ಅಂತಹ ದತ್ತಾಂಶವನ್ನು ತಮ್ಮ ಕಚೇರಿಯಲ್ಲಿ ದಾಖಲಿಸಿಲ್ಲ’ ಎಂದು ದಕ್ಷಿಣ ಹವಾಮಾನ ಸಂಶೋಧನಾ ಕೇಂದ್ರದ ಮುಖ್ಯಸ್ಥ ಬಾಲಚಂದ್ರನ್ ಹೇಳಿದ್ದಾರೆ.

ಏತನ್ಮಧ್ಯೆ, ಇತ್ತೀಚೆಗೆ ಹೈದರಾಬಾದ್‌ನ ಎನ್‌ಜಿಆರ್‌ಐ ವಿಜ್ಞಾನಿಗಳು ಟರ್ಕಿಯಂತೆಯೇ ಭಾರತದಲ್ಲೂ ಭಾರಿ ಭೂಕಂಪ ಸಂಭವಿಸುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಉತ್ತರಾಖಂಡದಲ್ಲಿ ಯಾವಾಗ ಬೇಕಾದರೂ ಪ್ರಬಲ ಭೂಕಂಪ ಸಂಭವಿಸಬಹುದು ಎಂದು ಅವರು ಎಚ್ಚರಿಸಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...