Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ದೆಹಲಿ ಪ್ರವಾಹ : ಕೆಂಪು ಕೋಟೆ ಅಂಗಳಕ್ಕೆ ಹರಿದು ಬಂದ ಯಮುನೆ : ವಿಡಿಯೋ ನೋಡಿ…!

Facebook
Twitter
Telegram
WhatsApp

ಸುದ್ದಿಒನ್

ದೆಹಲಿ : ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಮಳೆಯಾಗದಿದ್ದರೂ ಯಮುನಾ ನದಿ ಉಕ್ಕಿ ಹರಿಯುತ್ತಿದೆ. ದೆಹಲಿ ಪ್ರವಾಹಕ್ಕೆ ಸಿಲುಕಿದೆ. ಎತ್ತರದ ಪ್ರದೇಶಗಳಿಂದ ಬರುತ್ತಿರುವ ಪ್ರವಾಹದಿಂದಾಗಿ ದೆಹಲಿಯು ಪ್ರವಾಹ ಭೀತಿ ಎದುರಿಸುತ್ತಿದೆ. ಹತ್ನಿಕುಂಡ್ ಬ್ಯಾರೇಜ್ ಗೇಟ್ ಗಳನ್ನು ಮೇಲೆತ್ತಿರುವುದರಿಂದ ಯಮುನಾ ನದಿಯಲ್ಲಿ ನೀರಿನ ಮಟ್ಟ ಸಾರ್ವಕಾಲಿಕ ದಾಖಲೆಯ ಮಟ್ಟಕ್ಕೆ ಏರುತ್ತಿದೆ.

ಮಳೆಯಿಂದಾಗಿ ಪ್ರವಾಹದ ನೀರಿನಿಂದ ದೆಹಲಿಯ ತಗ್ಗು ಪ್ರದೇಶಗಳು ಸಂಪೂರ್ಣವಾಗಿ ಜಲಾವೃತವಾಗಿವೆ. ಮುಖ್ಯ ರಸ್ತೆಗಳು ಮತ್ತು ಬೀದಿಗಳು ನದಿಗಳಂತೆ ಕಾಣುತ್ತಿವೆ. ಈ ಪ್ರವಾಹ ದೆಹಲಿಯ ಐತಿಹಾಸಿಕ ಕಟ್ಟಡವಾದ ಕೆಂಪುಕೋಟೆಗೂ ಅಪ್ಪಳಿಸಿದೆ. ಇದರಿಂದ ಕೆಂಪು ಕೋಟೆಯ ಸುತ್ತಮುತ್ತಲಿನ ರಸ್ತೆಗಳೆಲ್ಲ ಮೊಣಕಾಲುದ್ದದಷ್ಟು ನೀರಿನಿಂದ ತುಂಬಿಕೊಂಡಿವೆ. ಕಣ್ಣು ಹಾಯಿಸಿದಷ್ಟು ನೀರು ಬಿಟ್ಟರೆ ರಸ್ತೆಯೇ ಕಾಣದಂತಾಗಿದೆ ದೆಹಲಿಯ ಸ್ಥಿತಿ.

ಯಮುನಾ ನದಿಯು ಗರಿಷ್ಠ ನೀರಿನ ಮಟ್ಟದಲ್ಲಿ ಹರಿಯುತ್ತಿದೆ. 208.66 ಮೀಟರ್ ಗರಿಷ್ಠ ನೀರಿನ ಮಟ್ಟದೊಂದಿಗೆ ಹರಿಯುತ್ತಿದ್ದು, 45 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದಿದೆ. ಅಪಾಯಕಾರಿ ಮಟ್ಟಕ್ಕಿಂತ ಮೂರು ಮೀಟರ್ ಎತ್ತರದಲ್ಲಿ ಹರಿಯುತ್ತದೆ. 1978ರಲ್ಲಿ ನೀರಿನ ಮಟ್ಟ 207.49 ಮೀಟರ್ ತಲುಪಿದಾಗ ದೆಹಲಿ ಪ್ರವಾಹಕ್ಕೆ ತುತ್ತಾಗಿತ್ತು. ಮತ್ತೊಂದೆಡೆ ಭಾರಿ ಮಳೆ ಜತೆಗೆ ಪ್ರವಾಹ ಭೀತಿ ಎದುರಾಗಿದ್ದು, ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

ಪರಿಹಾರ ಕಾರ್ಯಾಚರಣೆಗಾಗಿ ಈಗಾಗಲೇ 12 ಎನ್‌ಡಿಆರ್‌ಎಫ್ ತಂಡಗಳನ್ನು ನಿಯೋಜಿಸಲಾಗಿದೆ. ತಗ್ಗು ಪ್ರದೇಶದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ. ದೆಹಲಿಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ-ಕಾಲೇಜುಗಳಿಗೆ ಭಾನುವಾರದವರೆಗೆ ರಜೆ ಘೋಷಿಸಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿದ್ದರಾಮಯ್ಯ ಸರ್ಕಾರಕ್ಕೆ ವರ್ಷದ ಸಂಭ್ರಮ : ಬಿಜೆಪಿಯ ಪ್ಲ್ಯಾನ್ ಏನು ಗೊತ್ತಾ..?

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ 135 ಕ್ಷೇತ್ರದಲ್ಲಿ ಭರ್ಜರಿಯಾಗಿ ಗೆಲುವು ಸಾಧಿಸಿ, ಸ್ವತಂತ್ರವಾಗಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿತ್ತು. ಇದೀಗ ಆ ಸಂತಸದ ಗಳಿಗೆಗೆ ಭರ್ತಿ ಒಂದು ವರ್ಷವಾಗುತ್ತಿದೆ. ಮೇ20ಕ್ಕೆ ಸರ್ಕಾರ ರಚನೆ ಮಾಡಿ

ಬಿಜೆಪಿ – ಜೆಡಿಎಸ್ ಪಕ್ಷದಿಂದ 25 ರಿಂದ 30 ಜನ  ನಮ್ಮ ಪಕ್ಷಕ್ಕೆ ಬರುತ್ತಾರೆ : ಚಿತ್ರದುರ್ಗದಲ್ಲಿ ಸಚಿವ ಸುಧಾಕರ್ ಹೇಳಿಕೆ

ವರದಿ ಮತ್ತು ಫೋಟೋ ಕೃಪೆ,  ಸುರೇಶ್ ಪಟ್ಟಣ್,                         ಮೊ : 98862 95817 ಸುದ್ದಿಒನ್, ಚಿತ್ರದುರ್ಗ ಮೇ. 17

ಮಳೆರಾಯನನ್ನೇ ಬೇಡಿದ ಅಭಿಮಾನಿಗಳು : RCB ಗೆಲುವಿಗಾಗಿ ವಿಶೇಷ ಪೂಜೆ

RCB ಅಭಿಮಾನಿಗಳು ಕಡೆಯ ತನಕ ತಮ್ಮ ಟೀಂ ಬಗ್ಗೆ ಹೋಪ್ ಕಳೆದುಕೊಳ್ಳುವುದೇ ಇಲ್ಲ. ಯಾಕಂದ್ರೆ ಆರ್ಸಿಬಿ ಆಟಗಾರರು ಸಹ ಅದೇ ಥರ ಕೊನೆಯಲ್ಲಿ ಚೋಕ್ ಕೊಡ್ತಾರೆ. ಈ ಬಾರಿಯ ಐಪಿಎಲ್ ನಲ್ಲಿ ಆರಂಭದ ಅಷ್ಟು

error: Content is protected !!