ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು; ಖಾಲಿ ಇರುವ ವಿಧಾನಪರಿಷತ್ ಸದಸ್ಯ ಸ್ಥಾನ ತುಂಬುವ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರ ಬಳಿ ಈ ಬಗ್ಗೆ ಮನವಿ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ರಾಹುಲ್ ಗಾಂಧಿ ಅವರೊಂದಿಗೆ ಈ ಸಂಬಂಧ ಚರ್ಚೆ ನಡೆಸಿದ್ದಾರೆ. ಸಮುದಾಯದ ನಾಯಕರುಗಳಿಗೆ ಪರಿಷತ್ ಸದಸ್ಯತ್ವ ಸ್ಥಾನ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಹಾಗಾದ್ರೆ ಸಿಎಂ ಹೆಸರಿಟ್ಟಿರೋ ಆ ಮಂದಿ ಯಾರ್ಯಾರು ಎಂಬ ಡಿಟೈಲ್ ಇಲ್ಲಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಜೊತೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದು, ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಮುಖ್ಯವಾಗಿ ಈ ಸಮುದಾಯದ ನಾಯಕರನ್ನೇ ಪರಿಗಣಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಸಂಭಾವ್ಯರ ಪಟ್ಟಿಯನ್ನು ನೀಡಲಾಗಿದೆ ಎನ್ನಲಾಗಿದೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದ್ಯಕ್ಕೆ 33 ಸ್ಥಾನಗಳನ್ನು ಹೊಂದಿದೆ. ಈ ನಾಲ್ವರು ನಾಮನಿರ್ದೇಶನಗೊಂಡ ಬಳಿಕ 37 ಸ್ಥಾನಗಳಾಗಲಿವೆ. ಈ ಮೂಲಕ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಗಲಿದೆ.

ಒಕ್ಕಲಿಗ ಸಮುದಾಯದಿಂದ ಬಿ.ಎಲ್.ಶಂಕರ್, ರಘುನಂದನ್ ರಾಮಣ್ಣ, ವಿನಯ್ ಕಾರ್ತಿಕ್ ಅವರ ಹೆಸರುಗಳು ಮುನ್ನೆಲೆಗೆ ಬಂದಿವೆ. ಬಿ.ಎಲ್.ಶಂಕರ್ ಅವರನ್ನು ಪರಿಷತ್ಗೆ ನಾಮನಿರ್ದೇಶನ ಮಾಡಿ, ಸಭಾಪತಿ ಸ್ಥಾನ ಕೊಡಬೇಕು ಎಂಬ ಚಿಂತನೆಯಲ್ಲಿ ಸಿದ್ದರಾಮಯ್ಯ ಅವರು ಇದ್ದಾರಂತೆ. ಈ ವಿಚಾರದಲ್ಲಿ ಒಕ್ಕಲಿಗ ಸಮುದಾಯದ ಕೋಟಾ ಬಿಟ್ಟುಕೊಡಲು ಡಿ.ಕೆ.ಶಿವಕುಮಾರ್ ಅವರೂ ರೆಡಿ ಇಲ್ಲ ಎಂದು ತಿಳಿದುಬಂದಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್