ವಿಧಾನಪರಿಷತ್ ಸ್ಥಾನಕ್ಕೆ ಡಿಮ್ಯಾಂಡ್ ; ಸಿದ್ದರಾಮಯ್ಯ ನೀಡಿದ ಹೆಸರುಗಳು ಯಾವು..?

ಬೆಂಗಳೂರು; ಖಾಲಿ ಇರುವ ವಿಧಾನಪರಿಷತ್ ಸದಸ್ಯ ಸ್ಥಾನ ತುಂಬುವ ಬಗ್ಗೆ ಮಹತ್ವದ ಚರ್ಚೆಗಳು ನಡೆದಿವೆ. ಸಿಎಂ ಸಿದ್ದರಾಮಯ್ಯ ಈಗಾಗಲೇ ದೆಹಲಿಯಲ್ಲಿ ಬೀಡು ಬಿಟ್ಟಿದ್ದು, ಹೈಕಮಾಂಡ್ ನಾಯಕರ ಬಳಿ ಈ ಬಗ್ಗೆ ಮನವಿ ಮಾಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕೆಸಿ ವೇಣುಗೋಪಾಲ್, ರಾಹುಲ್ ಗಾಂಧಿ ಅವರೊಂದಿಗೆ ಈ ಸಂಬಂಧ ಚರ್ಚೆ ನಡೆಸಿದ್ದಾರೆ. ಸಮುದಾಯದ ನಾಯಕರುಗಳಿಗೆ ಪರಿಷತ್ ಸದಸ್ಯತ್ವ ಸ್ಥಾನ ನೀಡಬೇಕೆಂದು ಸೂಚನೆ ನೀಡಿದ್ದಾರೆ. ಹಾಗಾದ್ರೆ ಸಿಎಂ ಹೆಸರಿಟ್ಟಿರೋ ಆ ಮಂದಿ ಯಾರ್ಯಾರು ಎಂಬ ಡಿಟೈಲ್ ಇಲ್ಲಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರ ಜೊತೆಗೆ ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದ್ದು, ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಮುಖ್ಯವಾಗಿ ಈ ಸಮುದಾಯದ ನಾಯಕರನ್ನೇ ಪರಿಗಣಿಸಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ ಎನ್ನಲಾಗಿದೆ. ಸಂಭಾವ್ಯರ ಪಟ್ಟಿಯನ್ನು ನೀಡಲಾಗಿದೆ ಎನ್ನಲಾಗಿದೆ. ವಿಧಾನ ಪರಿಷತ್ ನಲ್ಲಿ ಕಾಂಗ್ರೆಸ್ ಸದ್ಯಕ್ಕೆ 33 ಸ್ಥಾನಗಳನ್ನು ಹೊಂದಿದೆ. ಈ ನಾಲ್ವರು ನಾಮನಿರ್ದೇಶನಗೊಂಡ ಬಳಿಕ 37 ಸ್ಥಾನಗಳಾಗಲಿವೆ. ಈ ಮೂಲಕ ಪರಿಷತ್ ನಲ್ಲಿ ಕಾಂಗ್ರೆಸ್ ಗೆ ಬಹುಮತ ಸಿಗಲಿದೆ.

 

ಒಕ್ಕಲಿಗ ಸಮುದಾಯದಿಂದ ಬಿ.ಎಲ್‌.ಶಂಕರ್‌, ರಘುನಂದನ್‌ ರಾಮಣ್ಣ, ವಿನಯ್‌ ಕಾರ್ತಿಕ್‌ ಅವರ ಹೆಸರುಗಳು ಮುನ್ನೆಲೆಗೆ ಬಂದಿವೆ. ಬಿ.ಎಲ್‌.ಶಂಕರ್ ಅವರನ್ನು ಪರಿಷತ್‌ಗೆ ನಾಮನಿರ್ದೇಶನ ಮಾಡಿ, ಸಭಾಪತಿ ಸ್ಥಾನ ಕೊಡಬೇಕು ಎಂಬ ಚಿಂತನೆಯಲ್ಲಿ ಸಿದ್ದರಾಮಯ್ಯ ಅವರು ಇದ್ದಾರಂತೆ. ಈ ವಿಚಾರದಲ್ಲಿ ಒಕ್ಕಲಿಗ ಸಮುದಾಯದ ಕೋಟಾ ಬಿಟ್ಟುಕೊಡಲು ಡಿ.ಕೆ.ಶಿವಕುಮಾರ್ ಅವರೂ ರೆಡಿ ಇಲ್ಲ ಎಂದು ತಿಳಿದುಬಂದಿದೆ.

suddionenews

Recent Posts

ಆಲಪ್ಪುಳ ಜಿಮ್ಖಾನಾ’ ಕರ್ನಾಟಕ ಜನರ ಮನಸ್ಸು ಗೆದ್ದ ಕ್ರೀಡಾ ಹಾಸ್ಯ ಚಿತ್ರ!

  ಅಲಪ್ಪುಳ ಜಿಮ್ಖಾನಾ ಎಂಬುದು ಮಲಯಾಳಂ ಆಕ್ಷನ್ ಚಿತ್ರ, ಖಲೀದ್ ರೆಹಮಾನ್ ನಿರ್ದೇಶಿಸಿದ್ದಾರೆ, ಇದರಲ್ಲಿ ನಾಸ್ಲಿನ್ ಗಫೂರ್ ಮತ್ತು ಲುಕ್ಮಾನ್…

39 minutes ago

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ

ಈ ರಾಶಿಯವರು ಮದುವೆಗೆ ತುಂಬಾ ಹಠ ಮಾಡುವವರು ಹೇಳಿದ ಮಾತು ಕೇಳುವುದೇ ಇಲ್ಲ, ಈ ರಾಶಿಯವರ ಭಾಗ್ಯ ಎನ್ನಬೇಕೋ ಪುಣ್ಯ…

7 hours ago

ಪೋಕ್ಸೋ ಹಾಗೂ ಬಾಲ್ಯ ವಿವಾಹ ತಡೆಗೆ ನಾಲ್ಕು ಹಂತದಲ್ಲಿ ಜಾರಿ ತಂಡಗಳ ರಚನೆ : ಜಿಲ್ಲಾಧಿಕಾರಿ ಸೂಚನೆ

ಚಿತ್ರದುರ್ಗ.ಎಪ್ರಿಲ್.11: ಜಿಲ್ಲೆಯಲ್ಲಿ ಪೋಕ್ಸೋ ಹಾಗೂ ಬಾಲ್ಯ ವಿವಾಹ ಪ್ರಕರಣಗಳ ತಡೆಗೆ ಸಮಗ್ರ ಯೋಜನೆ ರೂಪಿಸುವುದರೊಂದಿಗೆ ಹಳ್ಳಿ, ಗ್ರಾಮ ಪಂಚಾಯಿತಿ, ತಾಲ್ಲೂಕು…

17 hours ago

ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿ ಹೇಳಿಕೆ : ಸೂಕ್ತ ಕ್ರಮಕ್ಕೆ ಬಿಜೆಪಿ ಒತ್ತಾಯ

ಸುದ್ದಿಒನ್, ದಾವಣಗೆರೆ, ಏಪ್ರಿಲ್. 11 : ಮಹಾನಗರ ಪಾಲಿಕೆಯ ಕಾಂಗ್ರೆಸ್ ಮಾಜಿ ಕಾರ್ಪೊರೇಟರ್ ವಕ್ಫ್ ಬಿಲ್ ವಿರೋಧಿಸಿ ಪ್ರಚೋದನಕಾರಿಯಾಗಿ ಆಡಿದ…

17 hours ago

ಯತ್ನಾಳ್ ಪರವಾಗಿ ಮಾತನಾಡಿದ್ದ ಜಯಮೃತ್ಯುಂಜಯ ಸ್ವಾಮೀಜಿ; ಎಚ್ಚರಿಕೆ ನೀಡಿದ ಪಂಚಮಸಾಲಿ ಟ್ರಸ್ಟ್

ಹುಬ್ಬಳ್ಳಿ; ಇತ್ತೀಚೆಗಷ್ಟೇ ಶಾಸಕ ಯತ್ನಾಳ್ ಅವರನ್ನು ಬಿಜೆಪಿ ಉಚ್ಛಾಟನೆ ಮಾಡಿದೆ. ಆರು ವರ್ಷಗಳ ಕಾಲ ಪಕ್ಷದಿಂದ ಹೊರಗಿಟ್ಟಿದೆ. ಹೀಗಾಗಿ ಪಂಚಮಸಾಲಿ…

18 hours ago

ಹಿರಿಯೂರಿನಲ್ಲಿ ಆಲಿಕಲ್ಲು ಸಹಿತ ಮಳೆಯ ಆರ್ಭಟ : ಬೆಳೆ ಹಾನಿ

ಸುದ್ದಿಒನ್, ಹಿರಿಯೂರು, ಏಪ್ರಿಲ್. 11 : ನಗರ ಪ್ರದೇಶ ಹಾಗೂ ತಾಲೂಕಿನ ವಿವಿಧ ಕಡೆಗಳಲ್ಲಿ ಗಾಳಿ, ಗುಡುಗು, ಮಿಂಚು ಸೇರಿದಂತೆ…

18 hours ago