Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜಕಾಲುವೆಯನ್ನು ಅಕ್ರಮವಾಗಿ ಬಂದ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜನವರಿ.14 : ನಗರದ ಹೊಳಲ್ಕೆರೆ ಟೋಲ್‍ಗೇಟ್ ಸಮೀಪವಿರುವ 150 ವರ್ಷ ಹಳೆಯದಾದ ರಾಜಕಾಲುವೆಯನ್ನು ಅರಣ್ಯ ಇಲಾಖೆಯ ನಿವೃತ್ತ ನೌಕರನೋರ್ವ ಅಕ್ರಮವಾಗಿ ಮುಚ್ಚಿರುವುದರಿಂದ ನೀರು ಹರಿಯದೆ ನಿಂತಿದ್ದು, ನಲವತ್ತು ವರ್ಷಗಳಿಂದಲೂ ಇಲ್ಲಿ ವಾಸಿಸುತ್ತಿರುವ 140 ಬಡ ಕುಟುಂಬಗಳು ದುರ್ವಾಸನೆಯಿಂದ ಸಹಿಸಿಕೊಂಡು ಕಾಲ ಕಳೆಯುವಂತಾಗಿದೆ.

ಅರಣ್ಯ ಇಲಾಖೆಯ ನಿವೃತ್ತ ನೌಕರ ತನ್ನ ಹೆಂಡತಿ ಹೆಸರಿನಲ್ಲಿ ಜಮೀನಿದೆ ಎಂದು ದೌರ್ಜನ್ಯವೆಸಗಿ ರಾಜಕಾಲುವೆಯ ಒಂದು ಭಾಗವನ್ನು ಮಣ್ಣಿನಿಂದ ಮುಚ್ಚಿ ಚರಂಡಿ ಹೊಡೆದು ರಾಜಕಾಲುವೆಯ ಹಳ್ಳದೆ ದಿಕ್ಕನ್ನೆ ಬದಲಾಯಿಸಿದ್ದಾನೆ. ಅಕ್ರಮವಾಗಿ ಇಲ್ಲಿ ಪ್ರವೇಶಿಸಲು ಯಾರಿಗೂ ಅಧಿಕಾರವಿಲ್ಲದಿದ್ದರೂ ಗೂಂಡಾಗಿರಿ ತೋರಿ ರಾಜಕಾಲುವೆಯನ್ನು ಬಂದ್ ಮಾಡಿರುವುದರಿಂದ ಕೊಳಚೆ ನೀರು ಹರಿಯಲು ಜಾಗವಿಲ್ಲದಂತಾಗಿ ಬಡಪಾಯಿಗಳ ಮನೆ ಎದುರು ನಿಂತಿದೆ. ಇದರಿಂದ ಸೊಳ್ಳೆಗಳ ತಾಣವಾಗಿ ವಾಸಿಸಲು ಆಗದೆ ಬೇರೆ ಕಡೆ ಹೋಗಲು ಆಗದಂತ ಅತಂತ್ರ ಸ್ಥಿತಿಯಲ್ಲಿ ಹಳ್ಳದ ಏರಿಯಾ ಕೊಳಚೆ ಪ್ರದೇಶದ ನಿವಾಸಿಗಳು ಮಮ್ಮಲ ಮರುಗುತ್ತಿದ್ದಾರೆ.

ಹೊಳಲ್ಕೆರೆ ರಸ್ತೆ, ಬಸವೇಶ್ವರ ಬಾಡಿ ಬಿಲ್ಡಿಂಗ್ ಹಿಂಭಾಗದ ನಿವಾಸಿಗಳಾದ ಅನ್ವರ್‍ಭಾಷ ಮತ್ತಿತರರು ರಾಜಕಾಲುವೆಯನ್ನು ಬಂದ್ ಮಾಡಿರುವ ವ್ಯಕ್ತಿ ವಿರುದ್ದ ಕಾನೂನು ರೀತಿಯ ಕ್ರಮ ಕೈಗೊಂಡು ಸರಾಗವಾಗಿ ನೀರು ಹರಿದು ಹೋಗುವಂತೆ ಮಾಡಬೇಕೆಂದು ಕಳೆದ ಕೆಲವು ದಿನಗಳ ಹಿಂದೆ ಜಿಲ್ಲಾಧಿಕಾರಿಗೆ ಮನವಿ ಮಾಡಿಕೊಂಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹೆಚ್ ಡಿ ರೇವಣ್ಣಗೆ ಬಿಗ್ ರಿಲೀಫ್..!

ಬೆಂಗಳೂರು: ಮಾಜಿ ಸಚಿವ ಹೆಚ್ ಡಿ ರೇವಣ್ಣಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ನಿಂದ ಜಾಮೀನು ಮಂಜೂರಾಗಿದೆ. ಯುವತಿಯ ಕಿಡ್ನ್ಯಾಪ್ ಪ್ರಕರಣ ಸಂಬಂಧ ಜೈಲು ಪಾಲಾಗಿದ್ದ ರೇವಣ್ಣ ಅವರು ಮಧ್ಯಂತರ

ಚಿತ್ರದುರ್ಗದಲ್ಲಿ ಹೊಸ ಡಯಾಲಿಸಿಸ್ ಕೇಂದ್ರ ಪ್ರಾರಂಭ : ನೊಂದಾಯಿತ ರೋಗಿಗಳಿಗೆ ಉಚಿತ ಸೇವೆ

ಚಿತ್ರದುರ್ಗ. ಮೇ.20: ನಗರದ ಜಿಲ್ಲಾಸ್ಪತ್ರೆಯಲ್ಲಿ ಫೆಬ್ರುವರಿ 5 ರಿಂದ ಅಂತರಾಷ್ಟ್ರೀಯ ಗುಣಮಟ್ಟದ 15 ಹೊಸ ಡಯಾಲಿಸೀಸ್ ಯಂತ್ರಗಳೊಂದಿಗೆ ಡಯಾಲಿಸೀಸ್ ಕೇಂದ್ರವನ್ನು ಪ್ರಾರಂಭಿಸಲಾಗಿದೆ. ಎಲ್ಲಾ ನೊಂದಾಯಿತ ರೋಗಿಗಳಿಗೆ ಉಚಿತವಾಗಿ ಹಾಗೂ ಪ್ರತಿಯೊಬ್ಬ ರೋಗಿಗೂ ಪ್ರತ್ಯೇಕಾವಾದ ಡಿಸ್ಪೋಸಿಬಲ್

error: Content is protected !!