Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗದಲ್ಲಿ ‘ದುರ್ಗೋತ್ಸವ’ ಆಚರಣೆಗೆ ಅಗ್ರಹ: ಸರ್ಕಾರದ ಗಮನಸೆಳೆಯಲು ಗಣೇಶ್ ಏಕಾಂಗಿ ಪ್ರತಿಭಟನೆ!

---Advertisement---

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ, ಜು. 24 : ಐತಿಹಾಸಿಕ ಚಿತ್ರದುರ್ಗದಲ್ಲಿ ಸರ್ಕಾರದಿಂದ ದುರ್ಗೋತ್ಸವ ಕಾರ್ಯಕ್ರಮವನ್ನು ಸರ್ಕಾರ ಕೂಡಲೇ ದಿನಾಂಕ ನಿಗಧಿಪಡಿಸಿ ಆಚರಿಸುವ ಅಗ್ರಹಿಸಿ ಕರ್ನಾಟಕ ಕೊಳಗೇರಿ ನಿವಾಸಿಗಳ ಸಂಯುಕ್ತ ಸಂಘಟನೆ ಕೆ.ಕೆ.ಎನ್. ಎಸ್.ಎಸ್. ಜಿಲ್ಲಾ ಸಮಿತಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರನ್ನು ಒತ್ತಾಯಿಸಿದೆ.

ಚಿತ್ರದುರ್ಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಬಳಿಯಲ್ಲಿ ಏಕಾಂಗಿಯಾಗಿ ಪ್ರತಿಭಟನೆಯನ್ನು ಮಾಡಿದ ಕೆ.ಕೆ.ಎನ್.ಎಸ್.ಎಸ್. ಜಿಲ್ಲಾ ಸಮಿತಿಯ ಅಧ್ಯಕ್ಷ ಗಣೇಶ್ ಚಿತ್ರದುರ್ಗವು ಐತಿಹಾಸಿಕ ರಾಜ-ಮಹಾರಾಜರು ಆಳಿದಂತಹ ಜಿಲ್ಲೆಯಾಗಿದ್ದು, ಇತಿಹಾಸವಿರುವ ರಾಜವೀರಮದಕರಿನಾಯಕರು, ಒನಕೆ ಓಬವ್ವ ಆಳಿದ ನಾಡಿದು. ಚಿತ್ರದುರ್ಗ ಜಿಲ್ಲೆಯಲ್ಲಿ ಕೋಟೆ ನಾಡು ಎಂದು ಹೆಸರು ಆಗಿದ್ದು, ಏಳುಸುತ್ತಿನ ಕೋಟೆಗೆ ದೇಶ-ವಿದೇಶಗಳಿಂದ ಸಾವಿರಾರು ಜನರು ಪ್ರತಿದಿನ ಕೋಟೆಯನ್ನು ಮತ್ತು ಪತಿಹಾಸಿಕವುಳ್ಳ ಚಂದ್ರವಳ್ಳಿ, ಜೋಗಿಮಟ್ಟಿ ಅರಣ್ಯಧಾಮ, ಮುರುಘಾಮಠ ಇನ್ನಿತರೆ ಪ್ರವಾಸಿತಾಣಗಳನ್ನು ವೀಕ್ಷಿಸಲು ಬರುತ್ತಾರೆ. ಕರ್ನಾಟಕ ಸರ್ಕಾರದಿಂದ ಮೈಸೂರು ದಸರಾ, ಹಂಪಿ ಉತ್ಸವ, ಕೊಡಗು ಉತ್ಸವ, ಕಿತ್ತೂರು ಉತ್ಸವ, ಈ ರೀತಿ ಕೆಲವು ಜಿಲ್ಲೆಗಳಲ್ಲಿ ಇತಿಹಾಸವುಳ್ಳ ಹೆಸರುಗಳ ಮೇಲೆ ಉತ್ಸವಗಳನ್ನು ಸರ್ಕಾರವೇ ಆಚರಿಸುತ್ತಾ ಬಂದಿರುತ್ತದೆ. ಆದರೆ ಐತಿಹಾಸಿಕ ಚಿತ್ರದುರ್ಗವನ್ನು ರಾಜ ಮಹರಾಜರು ಆಳಿದ್ದು, ಇತಿಹಾಸ ಇರುವ ಚಿತ್ರದುರ್ಗದಲ್ಲಿ ದುರ್ಗೋತ್ಸವ ಕಾರ್ಯಕ್ರಮವನ್ನು ಶ್ರೀ ಹೆಚ್.ಆಂಜನೇಯ ಸಚಿವರಾಗಿದ್ದ ಸಮಯದಲ್ಲಿ 1-2 ಬಾರಿ ಮಾತ್ರ ಆಚರಿಸಿ, ನಂತರ ಅಲ್ಲಿಂದ ಇಲ್ಲಿಯವರೆಗೂ ಯಾವುದೇ ಸರ್ಕಾರ ಈ ಬಗ್ಗೆ ಗಮನ ಹರಿಸದೇ ಚಿತ್ರದುರ್ಗವನ್ನು ಕಡೆಗಣಿಸಲಾಗಿದೆ ಎಂದು ದೂರಿದರು.

ಚಿತ್ರದುರ್ಗ ಜಿಲ್ಲೆಯಲ್ಲಿ ಮುಖ್ಯವಾಗಿ ಐತಿಹಾಸಿಕ ಕೋಟೆ, ಮುರುಘಾಮಠ, ವಿ.ವಿ.ಸಾಗರ, ನಾಯಕನಹಟ್ಟಿ ಇಂತಹ ಪ್ರಮುಖ ಸ್ಥಳಗಳನ್ನು ಹೊಂದಿರುವ ಜಿಲ್ಲೆಯಾಗಿದ್ದು, ನಮ್ಮ ಕೋಟೆಯು ಐತಿಹಾಸಿಕವಾಗಿ ದೇಶದಲ್ಲಿ ಹೆಸರು ಮಾಡಿರುವಂತಹ ಕೋಟೆಯಾಗಿದೆ. ರಾಜ ಮಹರಾಜರು ಆಳಿದ ಕೋಟೆಯಾಗಿದ್ದು, ಪ್ರತಿದಿನ ಕೋಟೆ ಮತ್ತು ಜಿಲ್ಲೆಯ ಐತಿಹಾಸಿಕ ಪ್ರವಾಸಿ ತಾಣಗಳನ್ನು ವೀಕ್ಷಿಸಲು ದೇಶದ ಮೂಲೆ ಮೂಲೆಯಿಂದ ಮತ್ತು ಹೊರ ದೇಶದ ಪ್ರವಾಸಿಗರು ಬಂದು ವೀಕ್ಷಣೆ ಮಾಡುತ್ತಿರುತ್ತಾರೆ. ಈ ಐತಿಹಾಸಿಕ ಪ್ರವಾಸಿ ತಾಣಗಳನ್ನು ಹೆಚ್ಚು ಹೆಚ್ಚು ಪ್ರಚಾರ ಮಾಡಲು ವರ್ಷಕ್ಕೊಮ್ಮೆ ಐತಿಹಾಸಿಕ “ದುರ್ಗೋತ್ಸವ” ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಮಾಡಿದರೆ ಇನ್ನು ಹೆಚ್ಚಿನದಾಗಿ ಪ್ರವಾಸಿತಾಣಗಳು ಅಭಿವೃದ್ಧಿ ಹೊಂದಲು ಮತ್ತು ಪ್ರವಾಸಿಗರು ಜಿಲ್ಲೆಯ ಐತಿಹಾಸಿಕ ಸ್ಥಳಗಳನ್ನು ಇನ್ನು ಹೆಚ್ಚಿನದಾಗಿ ವೀಕ್ಷಣೆ ಮಾಡಲು ಅವಕಾಶವಾಗುತ್ತದೆ. ಚಿತ್ರದುರ್ಗದಲ್ಲಿ “ದುರ್ಗೋತ್ಸವ” ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳಾದ ತಾವುಗಳು ಉದ್ಘಾಟಿಸಿ, ಪ್ರತಿವರ್ಷ ಮುಂದು ವರೆಸಿಕೊಂಡು ಹೋಗಲು ಅವಕಾಶ ಮಾಡಿಕೊಡಬೇಕೆಂದು ಕೆ.ಕೆ.ಎನ್.ಎಸ್.ಎಸ್. ಜಿಲ್ಲಾ ಸಮಿತಿಯ ಅಧ್ಯಕ್ಷ ಗಣೇಶ್ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ | ಪೋಕ್ಸೋ ಪ್ರಕರಣದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ಸಂತ್ರಸ್ತೆಗೆ 4 ಲಕ್ಷ ರೂ. ಪರಿಹಾರ ; ಕೋರ್ಟ್​ ಆದೇಶ

ಚಿತ್ರದುರ್ಗ : ಬರ, ಭದ್ರಾ ಮೇಲ್ದಂಡೆ, ಗ್ಯಾರಂಟಿ ರಿಪೋರ್ಟ್ ರೆಡಿ ಇಟ್ಟುಕೊಳ್ಳಿ: ಸಿಎಂ ಸಭೆಗೂ ಮುನ್ನ ಅಧಿಕಾರಿಗಳಿಗೆ ಡಿಸಿ ಟಿ.ವೆಂಕಟೇಶ್ ಸೂಚನೆ

ಚಿತ್ರದುರ್ಗ : ಬೀದಿಗಿಳಿದು ಸೂಕ್ತ ಉತ್ತರ ನೀಡಲಿದ್ದೇವೆ: ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ಎಂ.ಎಲ್.ಸಿ.ನವೀನ್ ಮುನ್ನೆಚ್ಚರಿಕೆ

ಶಾಸಕ ​ಟಿ. ರಘುಮೂರ್ತಿಗೆ ಸಚಿವ ಸ್ಥಾನ ನೀಡಲು ‘ಯುವ ಸೇನೆ’ ಪಟ್ಟು: ಬರಗೇರಮ್ಮ ದೇವಾಲಯದಲ್ಲಿ ವಿಶೇಷ ಪೂಜೆ!

ಚಿತ್ರದುರ್ಗ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಆಗ್ರಹ: ರೈತ ಸಂಘ-ಹಸಿರುಸೇನೆಯಿಂದ ಪ್ರತಿಭಟನೆ

ನೀಟ್ ಅಕ್ರಮ, ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಚಿತ್ರದುರ್ಗದಲ್ಲಿ ವಕೀಲರ ಪ್ರತಿಭಟನೆ