Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶ್ರೀರಂಗಪಟ್ಟಣದಲ್ಲಿ ರಾಜಾವೀರ ಮದಕರಿನಾಯಕ ಸ್ಮಾರಕ ನಿರ್ಮಾಣಕ್ಕೆ ಒತ್ತಾಯ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 15 : ನಾಡ ದೊರೆ ರಾಜಾವೀರ ಮದಕರಿನಾಯಕನ 243 ನೇ ಪುಣ್ಯಸ್ಮರಣೆಯನ್ನು ಗುರುವಾರ ನಾಯಕ ಸಮಾಜದಿಂದ ಆಚರಿಸಲಾಯಿತು.

ಮದಕರಿನಾಯಕನ ಪ್ರತಿಮೆಗೆ ಬೃಹದಾಕಾರವಾದ ಹೂಮಾಲೆ ಅರ್ಪಿಸಿ ನಂತರ ರಾಜಾವೀರಮದಕರಿನಾಯಕ ಫೋಟೋಗೆ ಪುಷ್ಪನಮನ ಸಲ್ಲಿಸಿ ಬಳಿಕ ಅಪರ ಜಿಲ್ಲಾಧಿಕಾರಿ ಮೂಲಕ ರಾಜ್ಯದ ಮುಖ್ಯಮಂತ್ರಿಗೆ ಶ್ರೀರಂಗಪಟ್ಟಣದಲ್ಲಿ ರಾಜಾವೀರ ಮದಕರಿನಾಯಕನ ಸ್ಮಾರಕ ನಿರ್ಮಿಸುವಂತೆ ಒತ್ತಾಯಿಸಿದರು.

ನಾಯಕ ಸಮಾಜದ ಜಿಲ್ಲಾಧ್ಯಕ್ಷ ಹೆಚ್.ಜೆ.ಕೃಷ್ಣಮೂರ್ತಿ ಮಾತನಾಡಿ ರಾಜನಹಳ್ಳಿಯಲ್ಲಿ ನಮ್ಮ ಮಠವಿದೆ. ಸ್ವಾಮಿಜಿಗಳು ಹೇಳಿದಂತೆ ನಾವುಗಳು ಕೇಳುತ್ತೇವೆ. ಅಮಿತ್‍ಷಾ ಚಿತ್ರದುರ್ಗಕ್ಕೆ ಬಂದಾಗ ಥೀಮ್ ಪಾರ್ಕ್ ನಿರ್ಮಿಸುವುದಾಗಿ ಭರವಸೆ ನೀಡಿದ್ದರೂ ಇದುವರೆವಿಗೂ ಈಡೇರಿಲ್ಲ. ತಿಮ್ಮಣ್ಣನನಾಯಕ ಕೆರೆ ಸಮೀಪ ತೋಟಗಾರಿಕೆ ಇಲಾಖೆಗೆ ಸೇರಿದ ಸಾಕಷ್ಟು ಜಾಗವಿದೆ. ಅಲ್ಲಿ ಥೀಮ್ ಪಾರ್ಕ್ ನಿರ್ಮಿಸಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಕೇಂದ್ರ ಸರ್ಕಾರವನ್ನು ಎಚ್ಚರಿಸಿದರು.

ರಾಜಾಮದಕರಿನಾಯಕ ಮಾತನಾಡಿ ಶ್ರೀರಂಗಪಟ್ಟಣದ ಪಶ್ವಿಮ ವಾಹಿನಿ ತೀರದಲ್ಲಿ ರಾಜಾವೀರ ಮದಕರಿನಾಯಕರ ದೇಹ ದಹನವಾಯಿತು. ಹಾಗಾಗಿ ಅಲ್ಲಿ ಸ್ಮಾರಕವಾಗಬೇಕು. ದಕ್ಷಿಣ ಭಾರತದಲ್ಲಿಯೆ ಅತ್ಯಂತ ಪ್ರಮುಖ ಐತಿಹಾಸಿಕ ಸ್ಥಳವಾಗಿರುವ ಚಿತ್ರದುರ್ಗಕ್ಕೆ ಕೇಂದ್ರ ಗೃಹ ಸಚಿವ ಅಮಿತ್‍ಷಾ ಭೇಟಿ ನೀಡಿದಾಗ ಥೀಂ ಪಾರ್ಕ್ ನಿರ್ಮಿಸುವುದಾಗಿ ಹೇಳಿ ಹೋಗಿದ್ದರು. ಇನ್ನು ಆಗಿಲ್ಲ. ಕೇಂದ್ರ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಆಗ್ರಹಿಸಿದರು.

ಬಾಲೇನಹಳ್ಳಿ ತಿಪ್ಪೇಸ್ವಾಮಿ, ನಗರಸಭೆ ಸದಸ್ಯ ವೆಂಕಟೇಶ್, ಮಾಜಿ ಸದಸ್ಯ ತಿಪ್ಪೇಸ್ವಾಮಿ, ಜಿಲ್ಲಾ ಕಾಂಗ್ರೆಸ್ ಎಸ್.ಟಿ.ಸೆಲ್ ವಿಭಾಗದ ಅಧ್ಯಕ್ಷ ಮಂಜುನಾಥ್, ರತ್ನಮ್ಮ, ಹೆಚ್.ಅಂಜಿನಪ್ಪ, ಪ್ರಶಾಂತ್ ಕೂಲಿಕಾರ್, ಯುವ ನ್ಯಾಯವಾದಿ ಅಶೋಕ್‍ಬೆಳಗಟ್ಟ, ಓಬಳೇಶ್ ಮುದ್ದಾಪುರ ಹೊಸಹಟ್ಟಿ ಇನ್ನು ಅನೇಕು ಪುಣ್ಯಸ್ಮರಣೆಯಲ್ಲಿ ಪಾಲ್ಗೊಂಡಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...