Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

KAS ಪರೀಕ್ಷೆ ಮುಂದೂಡಲು ಆಗ್ರಹ : ಹಲವರು ಪೊಲೀಸರ ವಶಕ್ಕೆ..!

---Advertisement---

ಬೆಂಗಳೂರು: ಆಗಸ್ಟ್ 27ಕ್ಕೆ KAS ಪರೀಕ್ಷೆಯನ್ನು ನಿಗಧಿ ಮಾಡಲಾಗಿದೆ. ಕೆಎಎಸ್ ಪ್ರಿಮಿನರಿ ಪರೀಕ್ಷೆಯ ಬಗ್ಗೆ ಹಲವು ಗೊಂದಲಗಳಿದ್ದು, ಪರೀಕ್ಷೆ ಮುಂದೂಡುವಂತೆ ನಿನ್ನೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆದಿದೆ. ಇಂದು ಬೆಳಗ್ಗೆ ಬೇರೆ ಬೆಳವಣಿಗೆ ನಡೆದಿದ್ದು, ವಿಜಯನಗರ ಪೊಲೀಸರು ಹಲವರನ್ನು ವಶಕ್ಕೆ ಪಡೆದಿದ್ದಾರೆ.

 

ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ಮಾಡಿದ್ದ ಅಖಿಲ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಅಧ್ಯಕ್ಷ ಕಾಂತಕುಮಾರ್ ಸೇರಿ ಹಲವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪರೀಕ್ಷೆ ಮುಂದೂಡಲು ಸಾಧ್ಯವಿಲ್ಲ ಎಂದು ಸಿಎಂ ಹೇಳಿದ್ದಾರೆ. ಆದರಿವತ್ತು ರಾಜ್ಯಪಾಲರನ್ನ ಭೇಟಿ ವಿದ್ಯಾರ್ಥಿಗಳು ತಯಾರಿ ನಡೆಸಿದ್ದರು. ರಾಜ್ಯಪಾಲರು ಕಾಲಾವಕಾಶ ಕೂಡ ನೀಡಿದ್ದರು. ಜೊತೆಗೆ ವಿಜಯನಗರದಲ್ಲಿ ಸಿಎಂ ಭೇಟಿಗೆ ನಿರ್ಧರಿಸಿದ್ದರು. ಸಂಜೆ ವಿಜಯನಗರದಲ್ಲಿ ಸಿಎಂ ಪಾಲಿಕೆ ಬಜಾರ್ ಉದ್ಘಾಟನೆ ಮಾಡಲಿದ್ದಾರೆ. ಈ ವೇಳೆ ಸಿಎಂ‌ ಭೇಟಿ ಮಾಡುವ ಪ್ರಯತ್ನದಲ್ಲಿದ್ದ ಅಭ್ಯರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗೃತ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಇನ್ನು ಈ ಸಂಬಂಧ ಪರೀಕ್ಷೆ ನಿಗಧಿತ ಸಮಯದಂದೇ ನಡೆಯಲಿದೆ ಎಂದು ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಎಲ್.ಕೆ.ಅತೀಕ್ ಸ್ಪಷ್ಟನೆ ನೀಡಿದ್ದಾರೆ. ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೆಎಎಸ್ ಆಕಾಂಕ್ಷಿಗಳ ಸಣ್ಣದೊಂದು ಗುಂಪು ಆ. 27ಕ್ಕೆ ನಿಗದಿಯಾಗಿರುವ ಕೆಎಎಸ್ ಪರೀಕ್ಷೆಯನ್ನು ಮುಂದೂಡಲು ಲಾಬಿ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಆ ಗುಂಪು ಎಲ್ಲಾ ತರದ ಒತ್ತಡ ತಂತ್ರ ಬಳಸುತ್ತಿದ್ದಾರೆ. ಆ ಗುಂಪು ಕೆಪಿಎಸ್​​ಸಿ, ಡಿಪಿಎಆರ್ ಮತ್ತು ಸಿಎಂ ಕಚೇರಿಯ ಅಧಿಕಾರಿಗಳಿಗೆ ಕರೆಗಳು ಹಾಗೂ ವಾಟ್ಸ್ ಆ್ಯಪ್ ಮೆಸೇಜ್​​ಗಳನ್ನು ಹರಿ ಬಿಡುತ್ತಿದ್ದಾರೆ. ಹೀಗಾಗಿ ನಾನು ಕೆಲವೊಮ್ಮೆ ನನ್ನ ಮೊಬೈಲನ್ನು ಎರೊಪ್ಲೇನ್ ಮೋಡ್​​ಗೆ ಇಡುವಂತಾಗಿದೆ ಎಂದು ತಿಳಿಸಿದ್ದಾರೆ.

ಕೆಪಿಸಿಎಸ್ ಸುತ್ತ ಅನುಮಾನದ ಹುತ್ತ ಎಂದು ಹೇಳುವ ಮೂಲಕ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ಈ 1500 ಗುಂಪಿನ ವಿದ್ಯಾರ್ಥಿಗಳ ಗುಂಪಿನ ಒತ್ತಡಕ್ಕೆ ಮಣಿದರೆ 2.5 ಲಕ್ಷ ಪರೀಕ್ಷಾರ್ಥಿಗಳಿಗೆ ಅನ್ಯಾಯ ಮಾಡಿದಂತೆ ಆಗಲಿದೆ. ಅವರೆಲ್ಲರೂ ಪರೀಕ್ಷೆಗೆ ತಯಾರಿ ನಡೆಸಿದ್ದು, ಪರೀಕ್ಷಾ ಕೇಂದ್ರಗಳಿಗೆ ತಮ್ಮ ಪ್ರವೇಶ ಪತ್ರವನ್ನು ನೋಂದಾಯಿಸಿದ್ದಾರೆ ಎಂದು ಹೇಳಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...