Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಹೆಚ್. ಅಂಜನೇಯ ಅವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿ ಮೇ. 26 ರಂದು  ಬೃಹತ್ ಅಭಿಮಾನದ ನಡಿಗೆ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 87220 22817

ಚಿತ್ರದುರ್ಗ,(ಮೇ. 24)  : ಮಾದಿಗ ಸಮುದಾಯ ನಾಯಕ, ದಲಿತರ ದ್ವನಿಯಾಗಿರುವ ಹೆಚ್. ಅಂಜನೇಯವರವನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಸಚಿವರನ್ನಾಗಿ ಮಾಡುವಂತೆ ಆಗ್ರಹಿಸಿ ಮೇ. 26 ರಂದು ನಗರದಲ್ಲಿ ಬೃಹತ್ ಅಭಿಮಾನ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ನ್ಯಾಯವಾದಿಗಳು, ಅಖಿಲ ಕರ್ನಾಟಕ ಹೆಚ್ ಅಂಜನೇಯ ಅಭಿಮಾನಿಗಳ ಬಳದ ರವೀಂದ್ರ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 2023ರ ವಿಧಾನಸಭಾ ಚುನಾವಣೆಯಲ್ಲಿ ಅಂಜನೇಯರವರು ಕುತಂತ್ರದಿಂದ ಅಲ್ಪ ಮತಗಳ ಅಂತರದಿಂದ ಸೋಲನ್ನು ಅನುಭವಿಸಬೇಕಾಯಿತು. ಮಾದಿಗ ಜನಾಂಗದ ಮಹಾ ಪುರುಷರಾದ ಅಂಜನೇಯರವರು ನಮ್ಮ ಜನಾಂಗದಚ ಪರವಾಗಿ ಧ್ವನಿಯನ್ನು ಎತ್ತುವ ಸಲುವಾಗಿ ವಿಧಾನಸೌಧದಲ್ಲಿ ಇರಬೇಕಿದೆ ಈ ಹಿನ್ನಲೆಯಲ್ಲಿ ಅವರನ್ನು ಎಂ.ಎಲ್.ಸಿ. ಮಾಡಿ ಸಚಿವರನ್ನಾಗಿ ಮಾಡಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜನ ಖರ್ಗೆಯವರನ್ನು ಆಗ್ರಹಿಸಿದ್ದಾರೆ.

ಅಂಜನೇಯರವರು ಸಮಾಜ ಕಲ್ಯಾಣ ಸಚಿವರಾಗಿದ್ಧಾಗ ರಾಜ್ಯದಲ್ಲಿ ಉತ್ತಮವಾದ ಕೆಲಸವನ್ನು ಮಾಡಿದ್ದಾರೆ ವಿವಿಧ ರೀತಿಯ ಹಾಸ್ಟಲ್‌ಗಳನ್ನು ನಿರ್ಮಾಣ ಮಾಡುವುದರ ಮೂಲಕ ಬಡ ಮಕ್ಕಳ ವಿದ್ಯಾಭ್ಯಾಸಕ್ಕೆ ಕಾರಣಿಭೂತರಾಗಿ ಶಿಕ್ಷಣದ ಹೊರೆಯಿಂದ ದೂರ ಮಾಡಿದ್ದಾರೆ. ಇದ್ದಲ್ಲದೆ ಗ್ರಾಮೀಣ ಪ್ರದೇಶಗಳಲ್ಲಿ ಮನೆ, ಚರಂಡಿ, ರಸ್ತೆಗಳನ್ನು ನಿರ್ಮಾಣ ಮಾಡಿದ್ದಾರೆ. ಸಮುದಾಯ ಭವನಗಳನ್ನು ನಿರ್ಮಾಣ ಮಾಡಿ, ಗಂಗಕಲ್ಯಾಣ ಕಾರ್ಯಕ್ರಮದಡಿಯಲ್ಲಿ ಕೊಳವೆಭಾವಿಯನ್ನು ಕೊರೆಸುವುದರ ಮೂಲಕ ಕೃಷಿಗೆ ಸಹಾಯವನ್ನು ಮಾಡಿದ್ದಾರೆ ಎಂದರು.

ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಉತ್ತಮವಾದ ಹೆಸರನ್ನು ಮಾಡುವುದರ ಮೂಲಕ ಅವರಿಗೆ ಕೀರ್ತಿಯನ್ನು ತಂದಿದ್ದಾರೆ. ಅವರನ್ನು ಎಂ.ಎಲ್.ಸಿಯನ್ನಾಗಿ ಮಾಡಿ ಸಚಿವರನ್ನಾಗಿ ಮಾಡುವುದರ ಮೂಲಕ ಮತ್ತೋಮ್ಮೆ ರಾಜ್ಯದಲ್ಲಿ ಮಾದಿಗ ಜನಾಂಗದವರಿಗೆ ನೆರವಾಗಬೇಕಿದೆ, ಈ ಹಿನ್ನಲೆಯಲ್ಲಿ ಅವರ ಅಭೀಮಾನ ಬಳಗದಿಂದ ಮೇ. 26ರ ಶುಕ್ರವಾರದಂದು ಚಿತ್ರದುರ್ಗ ನಗರದಲ್ಲಿ ಸಂತೇಪೇಟೆಯಿಂದ ಜಿಲ್ಲಾ ಕಾಂಗ್ರೆಸ್ ಕಚೇರಿಯವರೆಗೂ ಬೃಹತ್ ಅಭಿಮಾನದ ನಡಿಗಯನ್ನು ಹಮ್ಮಿಕೊಳ್ಳಲಾಗಿದೆ ಇದರಲ್ಲಿ ಅಂಜನೇಯ ಅಭಿಮಾನಿಗಳು ಭಾಗವಹಿಸುವುದರ ಮೂಲಕ ಯಶಸ್ವಿಗೂಳಿಸುವಂತೆ ರವೀಂದ್ರ ಮನವಿ ಮಾಡಿದ್ದಾರೆ.

ಈ ಹಿಂದೆ ಚುನಾವಣೆಯಲ್ಲಿ ಸೋತವರನ್ನು ಎಂ.ಎಲ್.ಸಿಯನ್ನಾಗಿ ಮಾಡಿ ಅವರನ್ನು ಸಚಿವರನ್ನಾಗಿ ಮಾಡಿದ ಉದಾಹರಣೆಗಳು ಇವೆ ಇದೇ ರೀತಿ ಅಂಜುನೇಯರವರನ್ನು ಸಹಾ ಎಂ.ಎಲ್.ಸಿ.ಯನ್ನಾಗಿ ಮಾಡಿ ಸಚಿವರನ್ನಾಗಿ ಮಾಡಬೇಕೆಂದು ಆಗ್ರಹಿಸಿದ್ದು, ಇದರಿಂದ ಈ ಜನಾಂಗಕ್ಕೆ ಮಾನ್ಯತೆಯನ್ನು ನೀಡಿದಂತೆ ಆಗಲಿದೆ ಮುಂದಿನ ದಿನದಲ್ಲಿ ಅಂಜುನೇಯವರ ಧ್ವನಿ ವಿಧಾನಸಭೆಯಲ್ಲಿ ಮೊಳಗುವಂತಾಗಬೇಕಿದೆ. ಈಗ ಪ್ರಾರಂಭೀಕವಾಗಿ ಚಿತ್ರದುರ್ಗದಲ್ಲಿ ನಮ್ಮ ಹೋರಾಟವನ್ನು ಹಮ್ಮಿಕೊಳ್ಳಳಾಗಿದೆ ಮುಖಂಡರು ನಮ್ಮ ಬೇಡಿಕೆಯನ್ನು ಈಡೇರಿಸದಿದ್ದರೆ ರಾಜ್ಯದ್ಯಾದಂತ ಹೋರಾಟವನ್ನು ರೂಪಿಸಲಾಗುವುದೆಂದು ಎಚ್ಚರಿಸಿದರು.

ಗೋಷ್ಟಿಯಲ್ಲಿ ಕುಮಾರಸ್ವಾಮಿ, ಕೆಂಚಪ್ಪ, ಸೋಮಶೇಖರ್, ಬ್ಯಾಲಹಳ್ಳಿ ಜಯ್ಯಪ್ಪ, ಶರಣಪ್ಪ, ಮಂಜುನಾಥ್ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೆಣಸಿನಕಾಯಿ ಕತ್ತರಿಸಿದ ನಂತರ ನಿಮ್ಮ ಕೈಗಳು ಉರಿಯದಂತೆ ತಡೆಯಲು ಹೀಗೆ ಮಾಡಿ….!

ಸುದ್ದಿಒನ್ : ಮೆಣಸಿನಕಾಯಿ ಕತ್ತರಿಸಿದ ನಂತರ ಕೈಗಳು ಉರಿಯುತ್ತವೆ.  ಇದು ಕೆಲವೊಮ್ಮೆ ಹೆಚ್ಚು ಆಗಬಹುದು. ಮೆಣಸಿನಕಾಯಿಯಲ್ಲಿರುವ ಕ್ಯಾಪ್ಸೈಸಿನ್ ಎಂಬ ರಾಸಾಯನಿಕವೇ ಇದಕ್ಕೆ ಕಾರಣ. ಮತ್ತು ಈ ಉರಿಯನ್ನು ಕಡಿಮೆ ಮಾಡಲು ಯಾವ ಸಲಹೆಗಳನ್ನು ಅನುಸರಿಸಬಹುದು

ಬೇಸಿಗೆಯಲ್ಲಿ ಸೌತೆಕಾಯಿ ತಿಂದರೆ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ ?

ಸುದ್ದಿಒನ್ : ದಿನದಿಂದ ದಿನಕ್ಕೆ ಬಿಸಿಲ ತಾಪ ಹೆಚ್ಚಾಗುತ್ತಿದೆ. ಇದರಿಂದಾಗಿ ಅನೇಕರು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಬೇಸಿಗೆಯ ಧಗೆಗೆ ತಕ್ಕಂತೆ ದೇಹಕ್ಕೆ ಸಾಕಷ್ಟು ಪೋಷಕಾಂಶಗಳನ್ನು ಒದಗಿಸಬೇಕು. ಈ ಬೇಸಿಗೆಯಲ್ಲಿ ಪ್ರತಿದಿನ ಸೌತೆಕಾಯಿಯನ್ನು ತಿನ್ನುವುದು ಒಳ್ಳೆಯದು.

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ

ಈ ರಾಶಿಯವರು ಇಂದು ತುಂಬಾ ಖುಷಿ ಪಡೆಯುವ ಸಂದೇಶ ಪಡೆಯಲಿದ್ದಾರೆ, ಶನಿವಾರ- ರಾಶಿ ಭವಿಷ್ಯ ಏಪ್ರಿಲ್-20,2024 ಸೂರ್ಯೋದಯ: 06:00, ಸೂರ್ಯಾಸ್ತ : 06:29 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

error: Content is protected !!