Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರಾಜ್ಯದಲ್ಲಿ ಏರಿಕೆಯಾಗುತ್ತಿದೆ ಡೆಂಗ್ಯೂ ಪ್ರಕರಣ : ಸಂಸದ ಡಾ.ಮಂಜುನಾಥ್ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ರಾಜ್ಯದಲ್ಲಿ ದಿನೇ‌ ದಿನೇ ಡೆಂಗ್ಯೂ ಪ್ರಕರಣ ಹೆಚ್ಚಾಗುತ್ತಲೇ ಇದೆ. ಈಗಾಗಲೇ ಕರ್ನಾಟಕದಲ್ಲಿ 7 ಸಾವಿರಕ್ಕೂ ಅಧಿಕ ಪ್ರಕರಣಗಳು ಕಾಣಿಸಿಕೊಂಡಿವೆ. ಇದರ ನಡುವೆ ಸಾವಿನ ಸಂಖ್ಯೆಯೂ ಹೆಚ್ಚಾಗುತ್ತಿದೆ. ಡೆಂಗ್ಯೂಗೆ ಸರಿಯಾದ ಚಿಕಿತ್ಸೆಯನ್ನು ಇನ್ನು ಕಂಡು ಹಿಡಿಯುವುದಕ್ಕೆ ಆಗಿಲ್ಲ. ಹೀಗಾಗಿ ಜನರೇ ಎಚ್ಚರಿಕೆಯಿಂದ ಇರಬೇಕಾಗಿದೆ. ಈ ಸಂಬಂಧ ಸಂಸದ ಡಾ.ಮಂಜುನಾಥ್ ಅವರು ಸರ್ಕಾರಕ್ಕೆ ಒತ್ತಡ ಹಾಕಿದ್ದಾರೆ.

ಡೆಂಗ್ಯೂ ರಾಜ್ಯಾದ್ಯಂತ ಹರಡುತ್ತಿದೆ. ಕೋವಿಡ್ ಮಾದರಿಯಲ್ಲಿ ಚಿಕಿತ್ಸಾ ವ್ಯವಸ್ಥೆ ಆಗಬೇಕು. ಡೆಂಗ್ಯೂ ನಿಯಂತ್ರಣ ಎಂದರೆ ಸೊಳ್ಳೆಗಳ ನಿಯಂತ್ರಣ. ಡೆಂಗ್ಯೂ ಕಾಯಿಲೆಗೆ ನಿಖರವಾದ ಚಿಕಿತ್ಸೆ ಇಲ್ಲ. ಇಲ್ಲಿ ಸೊಳ್ಳೆಗಳ ನಿಯಂತ್ರಣ ಬಹಳ ಮುಖ್ಯವಾಗುತ್ತದೆ. ಡೆಂಗ್ಯೂ ಜ್ಚರ ನಿಯಂತ್ರಣವಾಗದೆ ಇದ್ದರೆ, ಮಾರಕ ಕಾಯಿಲೆಗಳಾದ ಚಿಕನ್ ಗೂನ್ಯಾ, ಝೀಕಾ ವೈರಸ್ ಕೂಡ ಕಾಣಿಸಿಕೊಳ್ಳುತ್ತದೆ. ಸರ್ಕಾರ ವೈದ್ಯಕೀಯ ತುರ್ತು ಚಿಕಿತ್ಸೆ ಘೋಷಿಸಬೇಕು ಎಂದಿದ್ದಾರೆ.

ಸರ್ಕಾರ ನಿಗಧಿ ಮಾಡಿದ ಹಣಕ್ಕಿಂತ ಹೆಚ್ಚಿನ ದರ ಪಡೆದರೆ ಅಂಥಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು. ಅಂತಹ ಲ್ಯಾಬೋರೇಟರಿಗಳನ್ನು ಮುಚ್ಚಬೇಕು. ರಸ್ತೆಗಳು ಅಗೆದಿರುವುದು, ಗುಂಡಿ ಬಿದ್ದಿರುವುದನ್ನು ಸಕಾಲದಲ್ಲಿ ಮುಚ್ಚುತ್ತಿಲ್ಲ. ಹೀಗಾಗಿ ನೀರು ನಿಂತು ಡೆಂಗ್ಯೂ ಸೊಳ್ಳೆ ಉತ್ಪತ್ತಿಯಾಗುತ್ತಿವೆ. ಸೊಳ್ಳೆ ನಿಯಂತ್ರಣಕ್ಕಾಗಿ ಆರೋಗ್ಯ ಇಲಾಖರ, ನಗರಾಭಿವೃದ್ಧಿ ಇಲಾಖೆ, ಪಂಚಾಯತಿಗಳು, ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕೂಡ ಕೆಲಸ ಮಾಡಬೇಕಿದೆ. ಡೆಂಗ್ಯೂ ನಿಯಂತ್ರಣಕ್ಕೆ ಸರ್ಕಾರ ಮುಂದೆ ಬರಬೇಕು. ಮಳೆಗಾಲದ ಸಮಸ್ಯೆಗಳಿಗೆ ಚಳಿಗಾಲದಲ್ಲಿಯೇ ಪರಿಹಾರ ಕಂಡುಕೊಳ್ಳಬೇಕು. ಸೊಳ್ಳೆ ಉತ್ಪತ್ತಿ ಆಗದಂತೆ ನೋಡಿಕೊಳ್ಳಬೇಕು. ಶಾಲಾ ಕಾಲೇಜುಗಳಿಗೂ ಆದೇಶ ಪ್ರತಿ ಕಳುಹಿಸಿ, ಮುಂಗ್ರತಾ ಕ್ರಮ ಕೈಗೊಳ್ಳಲು ಸೂಚನೆ ನೀಡಬೇಕು ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಿಗ್ ಬಾಸ್, ಪ್ರಪಂಚವೇನು ಅಂಗಡಿಯಲ್ಲಿ ಸಿಗುವ ಚಡ್ಡಿಯಾ..? ಜಗದೀಶ್ ಗೆ ಧನರಾಜ್ ಟಾಂಗ್..!

ಬಿಗ್ ಬಾಸ್ ಸೀಸನ್ 11 ಶುರುವಾಗಿ ವಾರವಾಗಿದೆ. ಇಂದು ಕಿಚ್ಚನ ಪಂಚಾಯ್ತಿಯಲ್ಲಿ ಮೊದಲ ವಾರವೇ ಒಬ್ಬರು ಮನೆಯಿಂದ ಹೊರಗೆ ಬರಲಿದ್ದಾರೆ. ಟಾಸ್ಕ್ ನಲ್ಲಿ ಸರಿಯಾಗಿ ಆಡದಿರುವವರೋ, ಜನಗಳಿಂದ ಮತಗಳನ್ನು ಪಡೆಯದೆ ಇರುವವರೋ ಹೊರಗೆ ಬರಲಿದ್ದಾರೆ.

ಬಾದಾಮಿ ತಿನ್ನಲು ಸರಿಯಾದ ಸಮಯ ಯಾವುದು ಗೊತ್ತಾ..?

ಸುದ್ದಿಒನ್ : ಆರೋಗ್ಯವನ್ನು ಕಾಪಾಡಿಕೊಳ್ಳಲು ಡ್ರೈ ಫ್ರೂಟ್ಸ್ ತಿನ್ನಲು ವೈದ್ಯಕೀಯ ತಜ್ಞರು ಸಲಹೆ ನೀಡುತ್ತಾರೆ. ಬಾದಾಮಿ ಅಂತಹ ಒಂದು ಸೂಪರ್ ಫುಡ್. ನಿಯಮಿತವಾದ ಬಾದಾಮಿ ಸೇವನೆಯು ದೇಹಕ್ಕೆ ಹಲವಾರು ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಸರಿಯಾದ

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು

ಈ ರಾಶಿಯವರಿಗೆ ಇಷ್ಟಪಟ್ಟವರ ಜೊತೆ ಮದುವೆ ಫಿಕ್ಸ್ ಆಯಿತು, ಈ ರಾಶಿಯವರಿಗೆ ವಿದೇಶಿ ಯೋಗ, ಈ ರಾಶಿಗಳಿಗೆ ಸಂತಾನ ಭಾಗ್ಯ, ಭಾನುವಾರರಾಶಿ ಭವಿಷ್ಯ -ಅಕ್ಟೋಬರ್-6,2024 ಸೂರ್ಯೋದಯ: 06:11, ಸೂರ್ಯಾಸ್ತ : 05:57 ಶಾಲಿವಾಹನ ಶಕೆ

error: Content is protected !!