Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ ಒಂದೇ ತಿಂಗಳಲ್ಲಿ ಹೆಚ್ಚಾಯ್ತು ಡೆಂಗ್ಯೂ ಪ್ರಕರಣ : ಎಚ್ಚರದಿಂದ ಇರಲು ಜನರಿಗೆ ಸೂಚನೆ

---Advertisement---

 

 

ಮಳೆಗಾಲ, ಚಳಿಗಾಲದಲ್ಲಿ ವೈರಸ್ ಗಳು ಉಲ್ಬಣಗೊಳ್ಳುತ್ತವೆ. ಅದರಲ್ಲೂ ಇತ್ತಿಚೆಗೆ ಡೆಂಗ್ಯೂ ಕೇಸ್ ಹೆಚ್ಚಳವಾಗುತ್ತಿದೆ. ಇದು ಜನರಿಗೆ ಆತಂಕದ ವಾತಾವರಣ ಸೃಷ್ಟಿ ಮಾಡಿದೆ. ಬೆಂಗಳೂರು ನಗರ ಒಂದರಲ್ಲೇ ಒಂದೇ ತಿಂಗಳಲ್ಲಿ ಡೆಂಗ್ಯೂ ಪ್ರಕರಣ ಸಿಕ್ಕಾಪಟ್ಟೆ ಜಾಸ್ತಿಯಾಗಿದೆ ಎಂಬುದನ್ನು ಆರೋಗ್ಯ ಇಲಾಖೆ ತಿಳಿಸಿದೆ.

ಕೇವಲ ಒಂದೇ ತಿಂಗಳಲ್ಲಿ 1,400ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ವರದಿ ಆಗಿವೆ. ಕಳೆದ ತಿಂಗಳು ನವೆಂಬರ್ 1ರಿಂದ ಡಿಸೆಂಬರ್ 8ರವರೆಗೆ ನಗರದಲ್ಲಿ ಒಟ್ಟು 7,600 ಕ್ಕೂ ಹೆಚ್ಚು ಮಂದಿಯಲ್ಲಿ ಡೆಂಗ್ಯೂ ಕಾಯಿಲೆ ಲಕ್ಷಣಗಳು ಕಂಡು ಬಂದವು. ಈ ವೇಳೆ ಅವರನ್ನು ಪರಿಶೀಲನೆಗೆ ಒಳಪಡಿಸಿದಾಗ 1,460ಕ್ಕೂ ಅಧಿಕ ಮಂದಿಗೆ ಡೆಂಗ್ಯೂ ಕಾಯಿಲೆ ಇರುವುದು ದೃಢಪಟ್ಟಿದೆ.

ತಂಪು ವಾತಾವರಣ ಜೊತೆಗೆ ಬಿಸಿಲು, ಆಗಾಗ ಮಳೆಯಂತಹ ವಾತಾವರಣದಿಂದ ಸೊಳ್ಳೆಗಳ ವಿಪರೀತವಾಗಿ ಹೆಚ್ಚಾಗಿವೆ. ಇದರಿಂದ ಡೆಂಗ್ಯೂ ಪ್ರಕರಣ ಕಂಡು ಬರುತ್ತಿದ್ದು, ಮಹಿಳೆಯರು, ಮಕ್ಕಳು ಸೇರಿದಂತೆ ನಗರದ ನಾಗರೀಕರು ಅರೋಗ್ಯ ಕಾಳಜಿ ವಹಿಸುವುದು ಅಗತ್ಯವಾಗಿದೆ. ಸರಿಯಾದ ಸಮಯಕ್ಕೆ ಮಳೆಯಾಗದ ವಾತಾವರಣದಲ್ಲಿ ಏರುಪೇರಾಗಿರುವ ಕಾರಣ, ಹಲವು ರೀತಿಯ ಕಾಯಿಲೆಗಳಿಗೆ ದಾರಿ ಮಾಡಿಕೊಟ್ಟಂತೆ ಆಗಿದೆ. ಹೀಗಾಗಿ ಜನರು ತಮ್ಮ ಆರೋಗ್ಯದ ಕಡೆಗೂ ಗಮನ ಹರಿಸುವುದು ಬಹಳ ಮುಖ್ಯವಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment