ಮಳೆಗಾಲ ಶುರುವಾಯ್ತು ಅಂದ್ರೆ ಹಲವು ರೀತಿಯ ವೈರಸ್ ಗಳು ಶುರುವಾಗುತ್ತವೆ. ನಾನಾ ಕಾಯಿಲೆಗಳು ಹರಡುವುದಕ್ಕೆ ಶುರುವಾಗುತ್ತೆ. ಅದರಲ್ಲೂ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ರಾಜ್ಯಾದ್ಯಂತ 4 ಸಾವಿರಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣ ದಾಖಲಾಗಿದೆ.
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಈ ವರ್ಷ ಡೆಂಗ್ಯೂ ಪ್ರಕರಣ ಇನ್ನಷ್ಟು ಜಾಸ್ತಿಯಾಗಿದೆ. ಹೀಗಾಗಿ ಜನ ಎಚ್ಚರದಿಂದ ಇರಬೇಕಾಗಿದೆ. ಜ್ವರ, ತಲೆನೋವು, ಸುಸ್ತು, ವಾಂತಿ, ಗಂಟಲು ನೋವು, ಮೈಕೈ ನೋವು, ಹೊಟ್ಟೆ ನೋವು, ಅಲರ್ಜಿಯಂತಹ ಲಕ್ಷಣಗಳು ಕಂಡು ಬಂದರೆ ತಕ್ಷಣ ಎಚ್ಚೆತ್ತುಕೊಳ್ಳಬೇಕಾಗಿದೆ.

ಮಳೆಗಾಲದಲ್ಲಿ ಅಲ್ಲಲ್ಲಿ ನೀರು ನಿಲ್ಲುವ ಕಾರಣ ಸೊಳ್ಳೆಗಳ ಕಾಟವೂ ಹೆಚ್ಚಾಗುತ್ತದೆ. ಸೊಳ್ಳೆಗಳು ಕಡಿಯಿವುದರಿಂದ ಡೆಂಗ್ಯೂ ಜೊತೆಗೆ ನಾನಾ ಕಾಯಿಲೆಗಳು ಹರಡುತ್ತವೆ. ಹೀಗಾಗಿ ಜನ ಕೂಡ ಆರೋಗ್ಯದ ದೃಷ್ಟಿಯಿಂದ ಎಚ್ಚರವಾಗಿರಬೇಕಾಗಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.














