ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿವೆ. ಕೇವಲ 20 ದಿನದಲ್ಲೇ 1404 ಪ್ರಕರಣಗಳು ದಾಖಲಾಗಿವೆ. ಹೀಗಾಗಿ ಸಾಮಾನ್ಯ ಜ್ವರ ಕಾಣಿಸಿಕೊಂಡರು ಜನರಿಗೆ ಆತಂಕ ಶುರುವಾಗಿದೆ. ಡೆಂಗ್ಯೂ ಪ್ರಕರಣಗಳ ಬಗ್ಗೆ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಈಗ ಒಟ್ಟು 5,571 ಪ್ರಕರಣಗಳು ಇದೆ.
ಈ ಮೊದಲೆಲ್ಲಾ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗಿದ್ದವು. ಆದರೆ ಸದ್ಯಕ್ಕೆ ಬೆಂಗಳೂರಿನಲ್ಲಿ ಪ್ರಕರಣ ಕಡಿಮೆಯಾಗಿದ್ದು, ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ಪ್ರಕರಣಗಳು ಜಾಸ್ತಿಯಾಗಿವೆ. ಡೆಂಗ್ಯೂ ಪ್ರಕರಣದಲ್ಲಿ ಜನ ಕೂಡ ಎಚ್ಚರಿಕೆ ವಹಿಸಬೇಕೆಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಡೆಂಗ್ಯೂ ಜ್ವರ ಆರಂಭದಲ್ಲಿ ಹೆಚ್ಚೇನು ಗುಣಲಕ್ಷಣಗಳನ್ನು ತೋರಿಸುವುದಿಲ್ಲ. ಬದಲಿಗೆ ನಾಲ್ಕೈದು ದಿನ ಕಳೆದರೆ ರೋಗ ಲಕ್ಷಣಗಳು ಕಂಡು ಬರುತ್ತವೆ. ಅದರಲ್ಲಿ ತಲೆನೋವು, ಮೈಕೈ ನೋವು, ಕೀಲು ನೋವು, ವಾಕರಿಕೆ, ವಾಂತಿ, ಕಣ್ಣುಗಳ ಹಿಂಭಾಗದಲ್ಲಿ ಊದಿಕೊಂಡ ಫೀಲ್ ಇರುತ್ತದೆ. ಹೀಗಾಗಿ ಸಣ್ಣಮಟ್ಟದ ಜ್ವರ ಕಾಣಿಸಿಕೊಂಡರು ಮೊದಲು ವೈದ್ಯರ ಬಳಿ ತಪಾಸಣೆ ಮಾಡಿಸಿಕೊಳ್ಳಿ. ಸರಿಯಾದ ಔಷಧಿ ತೆಗೆದುಕೊಳ್ಳಿ. ಡೆಂಗ್ಯೂ ಬಂದ ಕೂಡಲೇ ಪ್ಲೇಟ್ ಲೇಟ್ಸ್ ಕಡಿಮೆಯಾಗುತ್ತದೆ. ಅದರ ಕಡೆಗೂ ಗಮನ ಹರಿಸಿ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್