Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತುಮಕೂರಿನಲ್ಲಿ 7 ವರ್ಷದ ಮಗುವನ್ನು ಬಲಿ ಪಡೆದ ಡೆಂಗ್ಯು..!

---Advertisement---

ತುಮಕೂರು: ಈಗಷ್ಟೇ ಚಳಿಗಾಲ ಕಳೆದು ಬೇಸಿಗೆ ಶುರುವಾಗಿದೆ. ರೋಗ ರುಜಿನಗಳು ಆರಂಭವಾಗುತ್ತಿವೆ. ವೈರಲ್ ಫೀವರ್ ಜೊತೆಗೆ ಡೇಂಘಿ ಜ್ಚರ ಕೂಡ ಕಾಣಿಸಿಕೊಳ್ಳುತ್ತಿದೆ. ಇದೀಗ ತುಮಕೂರು ಜಿಲ್ಲೆಯಲ್ಲಿ ಡೇಂಗಿಗೆ ಬಾಲಕ ಬಲಿಯಾಗಿದ್ದಾನೆ. 7 ವರ್ಷದ ಕರುಣಾಕರ್ ಎಂಬ ಬಾಲಕ ಈ ಡೇಂಘಿಗೆ ಬಲಿಯಾಗಿದ್ದಾನೆ. ಪುತ್ರನನ್ನು ಕಳೆದುಕೊಂಡು ಹರೀಶ್ ಕುಮಾರ್ ಮನೆಯಲ್ಲಿ ದುಃಖ ಮಡುಗಟ್ಟಿದೆ. ಮಗನ ಬಗ್ಗೆ ಸಾವಿರಾರು ಕನಸುಗಳನ್ನು ಕಂಡಿದ್ದರು. ಈಗಿನ್ನು 2 ತರಗತಿಯಲ್ಲಿದ್ದ. ಓದುವ ವಿಚಾರಕ್ಕೂ ತಂದೆ ತಾಯಿ ದೊಡ್ಡ ಕನಸ್ಸನ್ನೇ ಕಟ್ಟಿಕೊಂಡಿದ್ದರು. ಈಗ ವಿಧಿ ಅವನನ್ನು ಬಿಡದೆ ಎಳೆದುಕೊಂಡು ಹೋಗಿದೆ. ಪಾವಗಡ ಪಟ್ಟಣದ ಬಾಬೈಯನ ಗುಡಿಬೀದಿಯಲ್ಲಿ ಈ ಘಟನೆ ನಡೆದಿದೆ.

ಕರುಣಾಕರ್ ಗೆ ಕಳೆದ ಕೆಲವು ದಿನಗಳಿಂದ ಜ್ವರ ಕಾಣಿಸಿಕೊಂಡಿತ್ತು. ಕಳೆದ 8 ದಿನಗಳಿಂದ ಪಾವಗಡದ ಸುಧಾ ಕ್ಲಿನಿಕ್ ನಲ್ಲಿಯೇ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕರುಣಾಕರ್ ಸಾವನ್ನಪ್ಪಿದ್ದಾನೆ. ಇತ್ತ ಪೋಷಕರಿಗೆ ಕ್ಲಿನಿಕ್ ನವರ ಮೇಲೆ ಆಕ್ರೋಶ ಹೊರ ಹಾಕಿದ್ದಾರೆ. ಯಾಕಂದ್ರೆ ಬಾಲಕನ ಕೊನೆ ಕ್ಷಣದವರೆಗೂ ಡೇಂಘೀ ಜ್ವರ ಬಂದಿದೆ ಎಂದು ಹೇಳಿರಲಿಲ್ಲವಂತೆ. ಹೀಗಾಗಿ ವೈದ್ಯರ ನಿರ್ಲಕ್ಷ್ಯದಿಂದಾನೇ ಮಗು ಸಾವನ್ನಪ್ಪಿದೆ ಎಂದು ಆರೋಪಿಸಿದ್ದಾರೆ. ಸುಧಾ ಕ್ಲಿನಿಕ್ ಮುಂದೆ ಪ್ರತಿಭಟನೆಯನ್ನು ಮಾಡಿದ್ದಾರೆ.

ಡೇಂಘಿ ಜ್ವರದ ಬಗ್ಗೆ ಸಾಕಷ್ಟು ಎಚ್ಚರಿಕೆ ವಹಿಸುವುದು ಬಹಳ ಮುಖ್ಯವಾಗಿದೆ. ದದ್ದುಗಳು, ಕಣ್ಣುನೋವು, ತೀವ್ರ ತಲೆನೋವು, ಹೆಚ್ಚಿನ ಜ್ವರ, ವಾಂತಿ ಮತ್ತು ವಾಕರಿಕೆ, ಸ್ನಾಯು ಮತ್ತು ಕೀಲುಗಳಲ್ಲಿ ನೋವು ಕಾಣಿಸಿಕೊಳ್ಳುವುದೇನಾದರೂ ಕಂಡು ಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರ ಬಳಿ ತೋರಿಸಿ. ಹಾಗೇ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಆಹಾರವನ್ನು ಸೇವಿಸಿ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment