Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡೆಂಗ್ಯೂ ಪರೀಕ್ಷೆ  : ಖಾಸಗಿ ಲ್ಯಾಬ್‍ಗಳು ವಿಧಿಸುವ ದರ ಸಾರ್ವಜನಿಕರಿಗೆ ಹೊರೆಯಾಗದಿರಲಿ : ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ

Facebook
Twitter
Telegram
WhatsApp

ಚಿತ್ರದುರ್ಗ. ಜುಲೈ13 : ಡೆಂಗ್ಯೂ ಪರೀಕ್ಷೆಗೆ ಖಾಸಗಿ ನರ್ಸಿಂಗ್ ಹೋಂ, ಲ್ಯಾಬ್‍ಗಳು ವಿಧಿಸುವ ದರದ ಬಗ್ಗೆ ನಿಗಾವಹಿಸಿ, ಸರ್ಕಾರ ನಿಗಧಿಪಡಿಸಿದ ದರ ಮಾತ್ರವೇ ತೆಗೆದುಕೊಳ್ಳಬೇಕು. ಸಾರ್ವಜನಿಕರಿಗೆ ಹೊರೆಯಾಗದಂತೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದರು.

ಇಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಡೆಂಗ್ಯೂ ಜ್ವರ ನಿಯಂತ್ರಣ ಕ್ರಮಕ್ಕಾಗಿ ಆರೋಗ್ಯ ಇಲಾಖೆಯ ವಿವಿಧ ಹಂತದ ಅಧಿಕಾರಿಗಳ ತುರ್ತು ಸಭೆಯಲ್ಲಿ ಮುಂಜಾಗ್ರತಾ ಕ್ರಮಗಳ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ನಗರದ ಖಾಸಗಿ ಲ್ಯಾಬ್‍ಗಳಿಗೆ ಭೇಟಿ ನೀಡಿ ಸೂಕ್ತ ಕ್ರಮ ವಹಿಸಿ, ಡೆಂಗ್ಯೂ ಮುಂಜಾಗ್ರತಾ ಕ್ರಮಕ್ಕಾಗಿ ವಿವಿಧ ಇಲಾಖೆಗಳ ಸಮನ್ವಯ ಸಾಧಿಸಿ ಸಹಕಾರ ಪಡೆಯಿರಿ. ಡೆಂಗ್ಯೂ ಹಾಟ್‍ಸ್ಪಾಟ್ ಗುರುತಿಸಿ ಚಿಕಿತ್ಸೆ ಸಮೀಕ್ಷೆ ಇತರೆ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು.

ಶಾಲಾ ಶಿಕ್ಷಣ ಇಲಾಖಾ ಮುಖ್ಯಸ್ಥರು ಎಲ್ಲಾ ಶಾಲೆಗಳಲ್ಲಿ ಮಕ್ಕಳ ಮೂಲಕ ಡೆಂಗ್ಯೂ ಜಾಗೃತಿ ಜಾಥಾ ನಡೆಸುವ ಮೂಲಕ ಸಾರ್ವಜನಿಕರಿಗೆ ಮಾಹಿತಿ ಶಿಕ್ಷಣ ನಡೆಸಲು ಕ್ರಮ ವಹಿಸುವಂತೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಜಿ.ಪಿ.ರೇಣುಪ್ರಸಾದ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎಸ್.ಪಿ.ರವೀಂದ್ರ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಬಿ.ವಿ.ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ನಾಗಭೂಷಣ್, ಸಾಂಕ್ರಾಮಿಕ ರೋಗಗಳ ನಿರ್ವಾಹಣಾ ತಂಡದವರು ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದರ್ಶನ್ ರಾಜಾತಿಥ್ಯ ಫೋಟೋ ರಿವಿಲ್ ಮಾಡಿದ್ದೇ ರಾಜ್ಯ ಸರ್ಕಾರ : ಜೋಶಿ ಹೇಳಿಕೆಗೆ ಡಿಕೆಶಿ ಹೇಳಿದ್ದೇನು..?

  ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೌಡಿಶೀಟರ್ ಗಳ ಜೊತೆಗೆ ಕೂತು ಟೀ ಕುಡೊಯುತ್ತಾ, ಸಿಗರೇಟು ಸೇದುತ್ತಾ, ನಗುಮುಖದಲ್ಲಿದ್ದ ದರ್ಶನ್ ಅವರ ಫೋಟೋ ಒಂದು ವೈರಲ್ ಆಗಿತ್ತು. ಆ ಬಳಿಕವೇ ದರ್ಶನ್ ಅವರನ್ನು ಬಳ್ಳಾರಿ

ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಎಂಬಿ ಪಾಟೀಲ್ : ಬೆಳೆಯುತ್ತಲೇ ಇದೆ ಆಕಾಂಕ್ಷಿಗಳ ಪಟ್ಟಿ..!

  ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಗಾಗ ಸಿಎಂ ಬದಲಾವಣೆಯ ವಿಚಾರ ಚರ್ಚೆಗೆ ಬರ್ತಾನೆ ಇರುತ್ತದೆ. ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಅವರು ಕೆಳಗಿಳಿಯುತ್ತಾರೆ ಎಂಬ ಚರ್ಚೆಯ ಜೊತೆಗೆ ನಾನು ಕೂಡ ಸಿಎಂ ಆಗಬಹುದು ಎಂಬ ಆಸೆ

Mobile phone : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇಲ್ಲಿದೆ ಸ್ಪಷ್ಟತೆ..!

  ಸುದ್ದಿಒನ್ : ಮೊಬೈಲ್ ಫೋನ್ ಬಳಸುವುದರಿಂದ ಮೆದುಳಿನ ಕ್ಯಾನ್ಸರ್ ಬರುತ್ತದೆಯೇ ? ಇದೀಗ ಈ ಪ್ರಶ್ನೆಗೆ WHO ಉತ್ತರ ನೀಡಿದೆ. ವಿಶ್ವ ಆರೋಗ್ಯ ಸಂಸ್ಥೆ ನಡೆಸಿದ ಇತ್ತೀಚಿನ ಅಧ್ಯಯನದಲ್ಲಿ, ಮೊಬೈಲ್ ಫೋನ್ ಬಳಕೆಯಿಂದ

error: Content is protected !!