Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿ.ಪಿ.ಬಡಾವಣೆ ಸರ್ಕಾರಿ ಶಾಲೆಯಲ್ಲಿ ಮಕ್ಕಳಿಗೆ ದಂತ ಚಿಕಿತ್ಸಾ ಶಿಬಿರ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, (ಜು.20) : ರೋಟರಿ ಕ್ಲಬ್, ಎಸ್.ಜೆ.ಎಂ. ಡೆಂಟಲ್ ಕಾಲೇಜು ವತಿಯಿಂದ ವಿ.ಪಿ.ಬಡಾವಣೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ಮಕ್ಕಳಿಗೆ ದಂತ ಚಿಕಿತ್ಸಾ ಶಿಬಿರವನ್ನು ಏರ್ಪಡಿಸಲಾಗಿತ್ತು.
ರೋಟರಿ ಸದಸ್ಯ ಹೆಚ್.ವೆಂಕಟೇಶ್ ಶಿಬಿರ ಉದ್ಗಾಟಿಸಿ ಮಾತನಾಡುತ್ತ ಹಲ್ಲಿನ ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು.

ಯಾವ ಮಕ್ಕಳಿಗೆ ಏನು ಸಮಸ್ಯೆಯಿದೆ ಎನ್ನುವುದನ್ನು ದಂತ ವೈದ್ಯರು ಪತ್ತೆ ಹಚ್ಚಿ ಚಿಕಿತ್ಸೆ ನೀಡುತ್ತಾರೆ. ಅದಕ್ಕೆ ತಗಲುವ ವೆಚ್ಚವನ್ನು ರೋಟರಿ ಸಂಸ್ಥೆಯಿಂದ ಭರಿಸಲಾಗುವುದು. ಮಕ್ಕಳು ಇದರ ಪ್ರಯೋಜನ ಪಡೆದುಕೊಂಡು ಆರೋಗ್ಯವಂತರಾಗಿರುವಂತೆ ತಿಳಿಸಿದರು.

ಎಸ್.ಜೆ.ಎಂ.ಡೆಂಟಲ್ ಕಾಲೇಜು ವೈದ್ಯಾಧಿಕಾರಿ ಜಯಚಂದ್ರ ಮಾತನಾಡಿ ಬೆಳಿಗ್ಗೆ ಮತ್ತು ರಾತ್ರಿ ದಿನಕ್ಕೆ ಎರಡು ಬಾರಿ ಹಲ್ಲನ್ನು ಉಜ್ಜುವ ಮೂಲಕ ಪ್ರತಿಯೊಬ್ಬರು ದಂತವನ್ನು ಶುಚಿಯಾಗಿಟ್ಟುಕೊಳ್ಳಬೇಕು. ಇಲ್ಲದಿದ್ದರೆ ಆರೋಗ್ಯದ ಮೇಲೆ ಸಮಸ್ಯೆಯಾಗುತ್ತದೆ. ಹಲ್ಲಿನ ಸಮಸ್ಯೆಯುಳ್ಳವರು ಡೆಂಟಲ್ ಕಾಲೇಜಿಗೆ ಆಗಮಿಸಿ ಚಿಕಿತ್ಸೆ ಪಡೆದುಕೊಳ್ಳುವಂತೆ ಮನವಿ ಮಾಡಿದರು.

ರೊ.ಮಧುಪ್ರಸಾದ್ ಮಾತನಾಡುತ್ತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಂತ ತಪಾಸಣೆಗೆ ಶಿಕ್ಷಕರು ಮುಂದಾಗಿರುವುದು ಶ್ಲಾಘನೀಯ. ಮುಂದಿನ ದಿನಗಳಲ್ಲಿ ಮಕ್ಕಳಿಗೆ ಡೆಸ್ಕ್, ನೋಟ್‍ಬುಕ್, ಪೆನ್, ಬ್ಯಾಗ್‍ಗಳನ್ನು ವಿತರಿಸಲಾಗುವುದು ಎಂದು ಹೇಳಿದರು.

ಶಿಬಿರದ ಅಧ್ಯಕ್ಷತೆ ವಹಿಸಿದ್ದ ರೋಟರಿ ಕ್ಲಬ್ ಅಧ್ಯಕ್ಷ ಕನಕರಾಜು ಮಾತನಾಡಿ ಮಕ್ಕಳೆಲ್ಲರೂ ಹಲ್ಲಿನ ಆರೋಗ್ಯ ಕಾಪಾಡಿಕೊಂಡು ಶಿಕ್ಷಣದ ಕಡೆಗೆ ಹೆಚ್ಚಿನ ಗಮನ ನೀಡುವ ಮೂಲಕ ಉತ್ತಮ ಭವಿಷ್ಯ ರೂಪಿಸಿಕೊಂಡು ಪೋಷಕರು ಹಾಗೂ ಶಾಲೆಗೆ ಕೀರ್ತಿ ತನ್ನಿ ಎಂದು ಹಾರೈಸಿದರು. ದೈಹಿಕ ಶಿಕ್ಷಣ ಶಿಕ್ಷಕ ಕೆ.ಹೆಚ್.ಶಿವರಾಂ, ರೋಟರಿ ಕ್ಲಬ್‍ನ ವೀರಭದ್ರಸ್ವಾಮಿ, ಸರಸ್ವತಿ ವೆಂಕಟೇಶ್‍ಬಾಬು, ಮಾಧುರಿ ಮಧುಪ್ರಸಾದ್, ಜಯಶ್ರೀಷಾ, ಶಿಕ್ಷಕರುಗಳು ಶಿಬಿರದಲ್ಲಿ ಭಾಗವಹಿಸಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment