Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗಡಿಭಾಗದ ಒಳಗಿನ ಮತ್ತು ಹೊರಭಾಗದ ಕಲೆಗಳಿಗೆ ಪ್ರೋತ್ಸಾಹ ನೀಡುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸದಾ ಸಿದ್ಧ : ಎಸ್.ಕೆ.ಮಲ್ಲಿಕಾರ್ಜುನ

Facebook
Twitter
Telegram
WhatsApp

ಸುದ್ದಿಒನ್, ಚಿತ್ರದುರ್ಗ, ಡಿ.22 : ಕನ್ನಡನಾಡಿನ ವೈಭವವನ್ನು ಸಾಂಸ್ಕೃತಿಕವಾಗಿ ಉಳಿಸಿ ಬೆಳೆಸುವಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರಂತರ ಶ್ರಮಿಸುತ್ತಿದೆ. ಮರೆಯಾಗುತ್ತಿರುವ ಕಲೆಗಳಿಗೆ ಉತ್ತೇಜನ, ಪ್ರೋತ್ಸಾಹ ಮತ್ತು ಸಹಕಾರ ನೀಡುತ್ತಿದೆ ಎಂದು ಹಿರಿಯೂರು ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಂ.ತಿಪ್ಪೇಸ್ವಾಮಿ ಹೇಳಿದರು.

ಹಿರಿಯೂರು ತಾಲ್ಲೂಕಿನ ಯಲ್ಲದಕೆರೆ ಗ್ರಾಮದಲ್ಲಿನ ಜ್ಞಾನಜ್ಯೋತಿ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ಚಿಗುರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಗಳಿಗೆ ಇಲಾಖೆ ಸೂಕ್ತ ವೇದಿಕೆ ಕಲ್ಪಿಸಿಕೊಟ್ಟಿದೆ. ಜೀವನ ಪರ್ಯಂತ ಮರೆಯಲಾಗದ ಉಜ್ವಲ ಭವಿಷ್ಯ ರೂಪಿಸುತ್ತಿದೆ. ಕಲೆಗೆ ಸಾವಿಲ್ಲ, ಕಲೆಯನ್ನು ನಂಬಿದವರಿಗೆ ನಿಜವಾದ ಶಾಂತಿ, ನೆಮ್ಮದಿ ಇರುವುದಿಲ್ಲ. ಬದಲಿಗೆ ತೃಪ್ತಿದಾಯಕರಾಗಿರುತ್ತಾರೆ. ಕಲೆಯನ್ನು ಆಸ್ವಾದಿಸುವ ಪೋಷಕರು ಕಲೆಯನ್ನು ಮತ್ತು ಕಲಾವಿದರನ್ನು ಪೋಷಿಸಬೇಕು ಹಾಗೂ ಸಹಕರಿಸಬೇಕು ಆಗ ಮಾತ್ರ ಸಾರ್ಥಕತೆಯ ಬದುಕು ಕಟ್ಟಿಕೊಟ್ಟ ಪುಣ್ಯ ಕಲಾ ಉಪಾಸಕರಿಗೆ ಸಲ್ಲುತ್ತದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ ಮಾತನಾಡಿ ಇಲಾಖೆಯಿಂದ ಜಿಲ್ಲೆಯ ಗಡಿಭಾಗದ ಗ್ರಾಮೀಣ ಪ್ರದೇಶಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಗಡಿಭಾಗದ ಸಂಸ್ಕೃತಿ ಆಚಾರ, ವಿಚಾರಗಳು, ಸಾಂಸ್ಕೃತಿಕವಾಗಿ ವಿನಿಮಯ ಮಾಡಿಕೊಳ್ಳುವ ಅವಕಾಶವನ್ನು ಕಲ್ಪಿಸಿದೆ. ಗಡಿಭಾಗದ ಒಳಗಿನ ಮತ್ತು ಹೊರಭಾಗದ ಕಲೆಗಳಿಗೆ ಪ್ರೋತ್ಸಾಹ ನೀಡುವಲ್ಲಿ ಇಲಾಖೆ ಸದಾ ಸಿದ್ಧವಾಗಿರುತ್ತದೆ ಎಂದರು.

ಯಲ್ಲದಕೆರೆ ಗ್ರಾ.ಪಂ. ಅಧ್ಯಕ್ಷೆ ನಯನ ರಮೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಶಿಕ್ಷಣ ಸಂಯೋಜಕ ಗಿರೀಶ್, ರಂಗಸೌರಭ ಕಲಾ ಸಂಘದ ಕಾರ್ಯದರ್ಶಿ ಹಾಗೂ ರಂಗ ನಿರ್ದೇಶಕ ಕೆ.ಪಿ.ಎಂ. ಗಣೇಶಯ್ಯ, ಗ್ರಾ.ಪಂ ಸದಸ್ಯ ಧರ್ಮರಾಜ್, ಜ್ಞಾನಜ್ಯೋತಿ ಪ್ರೌಢಶಾಲೆಯ ಆಡಳಿತಾಧಿಕಾರಿ ಮನೋಹರ್, ಡಾ.ರಘುನಂದನ್, ಪರಮೇಶ್ವರಭಟ್, ಗೀತಾ ಮತ್ತು ನಾಗಶ್ರೀ ಭಟ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಮಾತನಾಡಿದರು.

ಶಾಲೋಂ ಆರ್ ಮತ್ತು ತಂಡದವರು ಕರ್ನಾಟಕ ಶಾಸ್ತ್ರೀಯ ಸಂಗೀತ, ಕೆ.ಪಿ.ಎಂ.ಗುರುದೇವ್ ಮತ್ತು ತಂಡದವರು ಸುಗಮ ಸಂಗೀತ, ಗ್ರೀಷ್ಮ ಮತ್ತು ಸಂಗಡಿಗರಿಂದ ಜಾನಪದ ಗೀತೆಗಳು, ಶ್ರೇಯಂಕ ಮತ್ತು ಸಂಗಡಿಗರಿಂದ ಸಮೂಹ ನೃತ್ಯ, ಸುವೀಕ್ಷ ಆರ್.ಎಸ್ ಮತ್ತು ಸಂಗಡಿಗರಿಂದ ನಾಟಕ ಪ್ರದರ್ಶನ, ಭುವನ್ಯರಾವ್ ಇವರು ಏಕಪಾತ್ರಾಭಿನಯ, ಜ್ಞಾನಜ್ಯೋತಿ ಪ್ರೌಢಶಾಲೆಯ ಮಕ್ಕಳು ಜಾನಪದ ನೃತ್ಯ ಮತ್ತು ಕೋಲಾಟ ಪ್ರದರ್ಶನ ನೀಡಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Curd in Summer : ಬೇಸಿಗೆಯಲ್ಲಿ ಪ್ರತಿದಿನ ಮೊಸರು ತಿಂದರೆ ಏನಾಗುತ್ತದೆ ಗೊತ್ತಾ ?

ಸುದ್ದಿಒನ್ :  ಬೇಸಿಗೆಯಲ್ಲಿ ಮಸಾಲೆಯುಕ್ತ ಆಹಾರವನ್ನು ಕಡಿಮೆ ಸೇವಿಸಿದರೆ ಒಳ್ಳೆಯದು.  ಬದಲಾಗಿ, ಲಘು ಆಹಾರವನ್ನು ಸೇವಿಸಿದರೆ ಬಿಸಿಲಿನ ಪ್ರಭಾವ ಅಷ್ಟಾಗಿ ಬೀರುವುದಿಲ್ಲ. ಅನೇಕ ಜನರು ಬೇಸಿಗೆಯಲ್ಲಿ ನಿಯಮಿತವಾಗಿ ಮೊಸರು ತಿನ್ನುತ್ತಾರೆ. ಪ್ರತಿನಿತ್ಯ ಬೇಸಿಗೆಯಲ್ಲಿ ಮೊಸರು

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ?

ಈ ರಾಶಿಯವರು ನಿಮ್ಮನ್ನು ತುಂಬಾ ಇಷ್ಟಪಟ್ಟು ಹತ್ತಿರ ಹತ್ತಿರ ಬರುವರು,ನೀವು ಏಕೆ ದೂರ ಸುರಿಯುತ್ತಿದ್ದೀರಿ? ಭಾನುವಾರ-ಮೇ-5,2024 ಸೂರ್ಯೋದಯ: 05:51, ಸೂರ್ಯಾಸಸ್ತ : 06:33 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ , ಸಂವತ್2079,

ಚಿತ್ರದುರ್ಗ | ವಿಜೃಂಭಣೆಯಿಂದ ನೆರವೇರಿದ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮೇ. 04  : ಕೋಟೆ ರಸ್ತೆಯಲ್ಲಿರುವ ಪಾದಗುಡಿಯಲ್ಲಿ ದುರ್ಗದ ಅದಿ ದೇವತೆ ಏಕನಾಥೇಶ್ವರಿ ಅಮ್ಮನ ಸಿಡಿ ಮಹೋತ್ಸವ

error: Content is protected !!