ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಆಗಸ್ಟ್. 12 : ಹೊರಪೇಟೆಯಲ್ಲಿರುವ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಗೆ ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಮಂಗಳವಾರ ಭೇಟಿ ನೀಡಿ ಶಿಥಿಲಾವಸ್ಥೆಯಲ್ಲಿರುವ ಕೊಠಡಿಗಳನ್ನು ವೀಕ್ಷಿಸಿದರು.
ದುಸ್ಥಿತಿಯಲ್ಲಿರುವ ಹಳೆಯ ಕೊಠಡಿಗಳನ್ನು ಕೆಡವಿ ನೂತನ ಕೊಠಡಿಗಳನ್ನು ನಿರ್ಮಿಸುವಂತೆ ನಿರ್ಮಿತಿ ಕೇಂದ್ರ ಹಾಗೂ ಲ್ಯಾಂಡ್ ಆರ್ಮಿ ಇಂಜಿನಿಯರ್ ಗಳಿಗೆ ಸೂಚಿಸಿದ ಉಪ ವಿಭಾಗಾಧಿಕಾರಿ ಮಕ್ಕಳಿಗೆ ದಿನನಿತ್ಯವೂ ಮೊಟ್ಟೆ, ಬಾಳೆ ಹಣ್ಣು ವಿತರಿಸಬೇಕು. ಮಕ್ಕಳ ಹಾಜರಾತಿ ಪುಸ್ತಕವನ್ನು ವೀಕ್ಷಿಸಿ ನಿರಂತರವಾಗಿ ಶಾಲೆಗೆ ಗೈರಾಗುವ ಮಕ್ಕಳ ಮನವೊಲಿಸಿ ಶಾಲೆಗೆ ಕರೆತರುವ ಕೆಲಸವಾಗಬೇಕು. ಇದಕ್ಕೆ ಪೋಷಕರುಗಳ ಜವಾಬ್ದಾರಿಯೂ ಇದೆ ಎಂದು ಹೇಳಿದರು.
ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರ ಪೂರೈಸುತ್ತಿರುವ ಸೌಲಭ್ಯಗಳು ಸಮರ್ಪಕವಾಗಿ ತಲುಪಬೇಕು. ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಮುಖ್ಯ. ಮಕ್ಕಳ ಮನಸ್ಸಿಗೆ ನಾಟುವ ರೀತಿಯಲ್ಲಿ ಪಾಠಗಳನ್ನು ಬೋಧಿಸುವಂತೆ ಉಪ ವಿಭಾಗಾಧಿಕಾರಿ ಸೂಚಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ನಾಗಭೂಷಣ್, ಪ್ರಧಾನ ಮಂತ್ರಿಗಳ ಹೊಸ ಹದಿನೈದು ಅಂಶಗಳ ಕಾರ್ಯಕ್ರಮಗಳ ಅನುಷ್ಟಾನ ಸಮಿತಿ ಸದಸ್ಯ ಹೆಚ್.ಆರ್.ಮಹಮದ್, ನಗರಸಭೆ ಮಾಜಿ ಉಪಾಧ್ಯಕ್ಷ ಸೈಯದ್ ಅಲ್ಲಾಭಕ್ಷಿ, ಉರ್ದು ಇ.ಸಿ.ಓ. ಸಮೀರ, ನಗರಸಭೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ರೇಖಾ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

















