Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತೀವ್ರ ವಿರೋಧದ ನಡುವೆಯೂ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆ ಕಾಮಗಾರಿಯಲ್ಲಿ ಮೀಸಲಾತಿ ವಿಧೇಯಕ ಮಂಡನೆ ; ಏನಿದೆ ಅದರಲ್ಲಿ..?

---Advertisement---

ಬೆಂಗಳೂರು; ಸಿಎಂ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡ 4ರಷ್ಟು ಮೀಸಲಾತಿಯನ್ನು ಘೋಷಣೆ ಮಾಡಿದ್ದರು. ಅದಕ್ಕೆ ಸಾಕಷ್ಟು ವಿರೋಧವೂ ವ್ಯಕ್ತವಾಗಿತ್ತು. ಇದೀಗ ವಿರೋಧದ ನಡುವೆಯು ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಯ್ತು. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಅವರು ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿದರು. ಆದರೆ ಬಜೆಟ್ ನ ಆಯವ್ಯಯಕ್ಕೆ ವಿಧಾನಮಂಡಲ ಇನ್ನೂ ಅಂಗೀಕಾರ ನೀಡಿಲ್ಲ.

 

ಈವರೆಗೂ ಸರ್ಕಾರಿ ಗುತ್ತಿಗೆಯಲ್ಲಿ ಎಸ್ಸಿ ಹಾಗೂ ಎಸ್ಟಿಗಳಿಗೆ ಮಾತ್ರ ಮೀಸಲಾತಿ ಇದ್ದು, ಇದೀಗ ಪ್ರವರ್ಗ 2ಬಿಗೆ ಬರುವ ಮುಸ್ಲಿಮರಿಗೂ ಅವಕಾಶ ಕಲ್ಪಿಸಲಾಗಿದೆ. 2025-26ನೇ ಸಾಲಿನ ಆಯವ್ಯಯದ ಭಾಷಣದಲ್ಲಿ ಪ್ರಸ್ತಾವಿಸಲಾದ ಭರವಸೆಯಂತೆ ನಿರುದ್ಯೋಗ ಸಮಸ್ಯೆ ನಿವಾರಿಸಲು ಈ ವಿಧೇಯಕ ರೂಪಿಸಿರುವುದಾಗಿ ತಿಳಿಸಲಾಗಿದೆ.

ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆಶೇಕಡ 4 ಪರ್ಸೆಂಟ್ ಮೀಸಲಾತಿ ವಿಧೇಯಕ ಮಂಡನೆ ಬಳಿಕ ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು, ಸದನದಲ್ಲಿ ಆ ವಿಷಯ ಬಂದಾಗ ಉತ್ತರ ಕೊಡುತ್ತೇವೆ. ಬಿಜೆಪಿಯವರು ರಾಜಕೀಯ ಬಿಟ್ಟು ಬೇರೆ ಏನು ಮಾಡುತ್ತಿಲ್ಲ. ಸರ್ವಜನಾಂಗದ ಶಾಂತಿಯ ತೋಟ ಮಾಡಲು ಹೊರಟಿದ್ದೇವೆ. ಆದರೆ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ನಾವೂ ಯಾರನ್ನೂ ತುಷ್ಠೀಕರಣ ಮಾಡುವ ಅಗತ್ಯವಿಲ್ಲ. ಯಾರ ತುಷ್ಠೀಕರಣವೂ ಇಲ್ಲ, ತಿರಸ್ಕಾರವೂ ಇಲ್ಲ. ಆದರೆ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ‌ ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇಕಡ 4 ರಷ್ಟು ಮೀಸಲಾತಿ ನೀಡಿದ್ದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿದೆ. ಇದರ ಜೊತೆಗೆ ಹಿಂದುಳಿದ ವರ್ಗಗಳಿಗೆ ಸರಕು ಮತ್ತು ಸೇವೆಗಳಲ್ಲಿ ಮೀಸಲಾತಿ ಕಲ್ಪಿಸುವ ವಿಧೇಯಕವನ್ನು ಮಂಡಿಸಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...