Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಯೋಧ್ಯೆಗೆ ಕುಟುಂಬ ಸಮೇತ ಹೊರಟ ದೇವೇಗೌಡರ ಕುಟುಂಬ

---Advertisement---

 

ಬೆಂಗಳೂರು: ನಾಳೆ ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದೆ. ಈ ಸುಂದರವಾದ ಘಳಿಗೆಯನ್ನು ಕಣ್ತುಂಬಿಕೊಳ್ಳುವುದಕ್ಕೆ ದೊಡ್ಡಗೌಡರ ಕುಟುಂಬ ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ. ಕುಟಂಬ ಸಮೇತ ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ತೆರಳಿದ್ದಾರೆ.

ದೇವೇಗೌಡರು, ಅವರ ಪತ್ನಿ ಚನ್ನಮ್ಮ, ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರು ಅಯೋಧ್ಯೆಗೆ ವಿಮಾನದಲ್ಲಿ ತೆರಳಿದ್ದಾರೆ. ದೊಡ್ಡಗೌಡರ ಕುಟುಂಬಕ್ಕೂ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಲ್ಲಿ ಭಾಗಿಯಾಗುವುದಕ್ಕೆ ಆಹ್ವಾನ ಬಂದಿತ್ತು. ಕುಟುಂಬ ಸಮೇತ ಪೂಜೆಗೆ ಹಾಜರಾಗುತ್ತೀವಿ ಎಂದು ಹೇಳಿದ್ದ ಗೌಡರು, ಇಂದು ಅಯೋಧ್ಯೆಗೆ ಹೊರಟಿದ್ದಾರೆ.

ವಿಮಾನ ಹತ್ತುವ ಮೊದಲು ಮಾತನಾಡಿದ ದೇವೇಗೌಡರು, ಅಯೋಧ್ಯೆಯಲ್ಲಿ ನಡೆಯೋ ರಾಮಲಲ್ಲಾ ಮೂರ್ತಿ ಉದ್ಘಾಟನೆಗೆ ಕಾಶ್ಮೀರದ ಮುಸ್ಲಿಂರು ಹೂವುಗಳನ್ನು ಕಳುಹಿಸಿದ್ದಾರೆ. ಪಶ್ಚಿಮ ಬಂಗಾಳದ ಜನ ಕೂಡ ಹೂಗಳನ್ನು ಕಳುಹಿಸಿದ್ದಾರೆ. ಅನೇಕ ರಾಜ್ಯಗಳಿಂದ ಅಯೋಧ್ಯೆಗೆ ಅನೇಕ ಉಡುಗೊರೆಗಳು ಬಂದಿವೆ. ಹಿಂದೂಗಳು ಬಿಡಿ, ಮುಸ್ಲಿಮರೇ ಹೂವಿನ ಮಳೆ ಸುರಿಸುತ್ತಿದ್ದಾರೆ. ಎಲ್ಲರೂ ಎಲ್ಲದನ್ನೂ ಅರ್ಥ ಮಾಡಿಕೊಳ್ಳಬೇಕು. ಯಾರಿಗೆ ಯಾರೂ ಪ್ರೇರಣೆ ಮಾಡಲ್ಲ ಎಂದಿದ್ದಾರೆ.

ನಾಳೆ ರಾಮಲಲ್ಲಾ ಮೂರ್ತಿಗೆ ಪ್ರಾಣ ಪ್ರತಿಷ್ಠಾಪನೆಯಾಗಲಿದೆ. ಈ ದಿನಕ್ಕೋಸ್ಕರ ಇಡೀ ವಿಶ್ವದ ಹಿಂದೂಗಳು ಕಾಯುತ್ತಿದ್ದರು. ಈ ಗಳಿಗೆಯನ್ನು ನಾಳೆ ಎಲ್ಲಾ ಚಾನೆಲ್ ಗಳು ನೇರ ಪ್ರಸಾರ ಮಾಡಲಿದ್ದು, ಅಯೋಧ್ಯೆಯಲ್ಲಿ ಏನೆಲ್ಲಾ ಕಾರ್ಯಗಳು ನಡೆಯುತ್ತಿವೆ ಎಂಬುದನ್ನು ಜನ ಮನೆಯಿಂದಾನೇ ಕಣ್ತುಂಬಿಕೊಳ್ಳಬಹುದು. ರಾಮನ ಭಕ್ತಿಗೆ ಒಳಗಾಗಬಹುದು. ಸಾಧ್ಯವಾದವರು ಅಯೋಧ್ಯೆಗೆ ತೆರಳಿ, ಪೂಜೆ ಸಲ್ಲಿಸಲಿದ್ದಾರೆ. ಈಗಾಗಲೇ ಕರ್ನಾಟಕದಿಂದ ಅಯೋಧ್ಯೆಗೆ ನೇರ ರೈಲುಗಳನ್ನು ಬಿಡಲಾಗಿದೆ. ಮೈಸೂರಿನಿಂದ ಕೂಡ ರೈಲು ಇದೆ ಎಂಬುದನ್ನು ಸಂಸದ ಪ್ರತಾಪ್ ಸಿಂಹ ಮೊದಲೇ ಮಾಹಿತಿ ನೀಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment