ಪ್ರಧಾನಿ ಮೋದಿ ರೋಡ್ ಶೋಗೆ ಟಕ್ಕರ್ ಕೊಡಲು ಸಿದ್ಧವಾಗಿದ್ದ ದೇವೇಗೌಡರ ರೋಡ್ ಶೋ ರದ್ದು..!

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ ಅವರ ವಯಸ್ಸೇನು ಕಡಿಮೆಯಲ್ಲ. ಆದರೂ ಇಷ್ಟು ವಯಸ್ಸಾದರೂ ಪಕ್ಷಕ್ಕಾಗಿ ಹಗಲು ರಾತ್ರಿಯೆನ್ನದೆ ಶ್ರಮಿಸುತ್ತಾರೆ. ಕುಮಾರಸ್ವಾಮಿ ಅವರು ಸಿಎಂ ಆಗಲಿ ಎಂದು ಯೋಜನೆಗಳನ್ನು ರೂಪಿಸುತ್ತಿದ್ದಾರೆ. ಈಗ 2023ರ ಚುನಾವಣೆ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಾರುಪತ್ಯವಿದೆ. ಇಲ್ಲಿ ಕಮಲ ಅರಳಿಸಬೇಕೆಂದು ಬಿಜೆಪಿ ಹೈಕಮಾಂಡ್ ನಾಯಕರು ಬಂದು ಹೋಗಿ ಮಾಡುತ್ತಿದ್ದಾರೆ. ಮೊನ್ನೆ ಮೊನ್ನೆಯಷ್ಟೇ ಪ್ರಧಾನಿ ಮೋದಿಯವರು ಮಂಡ್ಯ ಭಾಗದಲ್ಲಿ ದೊಡ್ಡಮಟ್ಟದ ರೋಡ್ ಶೋ ನಡೆಸಿದ್ದಾರೆ. ಈ ರೋಡ್ ಶೋಗೆ ಟಕ್ಕರ್ ಕೊಡೋದಕ್ಕೆ ದೇವೇಗೌಡರ ನೇತೃತ್ವದಲ್ಲಿ ರೋಡ್ ಶೋ ಆಯೋಜನೆ ಮಾಡಲಾಗಿತ್ತು. ಆದರೆ ದೊಡ್ಡ ಗೌಡರ ಆರೋಗ್ಯ ದೃಷ್ಟಿಯಿಂದ ಅದು ರದ್ದಾಗಿದೆ.

ರಾಜ್ಯದ 85 ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಪೂರ್ಣಗೊಂಡಿದೆ. ಮಾರ್ಚ್ 26ರಂದು ಬೃಹತ್ ಸಮಾವೇಶ ನಡೆಸಲಿದ್ದು, ಸುಮಾರು ಹತ್ತು ಲಕ್ಷ ಮತದಾರರನ್ನು ಸೇರಿಸುವ ಉದ್ದೇಶ ಹೊಂದಲಾಗಿದೆ. ಇದೇ ಮಾರ್ಚ್ 26ರಂದೇ ದೇವೇಗೌಡ ಅವರು ಕುಂಬಳಗೋಡಿನಿಂದ ಮೈಸೂರು ತನಕ ರೋಡ್ ಶೋ ನಡೆಸಲು ಯೋಜಿಸಿದ್ದರು. ಆದರೆ ವೈದ್ಯರ ಸಲಹೆ ಮೇರೆಗೆ ಈ ರೋಡ್ ಶೋ ರದ್ದು ಮಾಡಲಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ತಿಳಿಸಿದ್ದಾರೆ.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

1 hour ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

2 hours ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

5 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago