Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ರೇವಣ್ಣನಿಗೆ ಕಡೆಯ ಎಚ್ಚರಿಕೆ ಕೊಟ್ಟ ದೇವೇಗೌಡ್ರು : ಶರಣಾಗುವಂತೆ ಪತ್ರ..!

---Advertisement---

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಷನ್ ಮುಗಿದ ಮಾರನೇ ದಿನ ಎಸ್ಕೇಪ್ ಆಗಿರುವ ಪ್ರಜ್ವಲ್ ರೇವಣ್ಣ ಇನ್ನು ದೇಶಕ್ಕೆ ವಾಪಾಸ್ ಆಗಿಲ್ಲ. ಎಸ್ಐಟಿ ಅಧಿಕಾರಿಗಳು ಹಲವು ಬಾರಿ ನೋಟೀಸ್ ನೀಡಿದ್ದಾರೆ. ಕೋರ್ಟ್ ಕೂಡ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಆದರೂ ಪ್ರಜ್ವಲ್ ರೇವಣ್ಣ ಸುಳಿವು ಇಲ್ಲ. ಇದೀಗ ಹೆಚ್.ಡಿ. ದೇವೇಗೌಡ್ರು ಮೊಮ್ಮಗನಿಗೆ ಕಡೆಯ ಎಚ್ಚರಿಕೆಯನ್ನು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣರಿಗೆ ಬಹಿರಂಗ ಪತ್ರ ಬರೆದಿರುವ ದೇವೇಗೌಡ್ರು, ನಾನು ಮೇ 18ನೇ ತಾರೀಕು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಸ್ನೇಹಿತರಿಗೆ, ಕುಟುಂಬಸ್ಥರಿಗೆ, ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರ ಬಂದು ಮಾತನಾಡುವುದಕ್ಕೆ ಸ್ವಲ್ಪ ಸಮಯವಿಡಿಯಿತು. ನಾನು ಈಗಾಗಲೇ ಸ್ಪಷ್ಟ ಪಡಿಸಿರುವ ಹಾಗೇ ಅವನು ತಪ್ಪಿತಸ್ಥನಾದರೆ, ಅವನಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ಈ ನಿಲುವನ್ನು ನನ್ನ ಮಗ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹಗರಣ ಹೊರಬಿದ್ದ ಮೊದಲ ದಿನದಿಂದಾನೇ ಪ್ರತಿಪಾದಿಸಿದ್ದಾರೆ. ಕೆಲವು ವಾರದಿಂದ ನನ್ನ ಹಾಗೂ ಕುಟುಂಬದ ಬಗ್ಗೆ ಜನ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡಲ್ಲ. ಅವರನ್ನು ಟೀಕೆ ಮಾಡುವುದಕ್ಕೂ ಹೋಗಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರ ಬರುವವರೆಗೂ ಕಾಯುತ್ತೇನೆ.

 

ಎಲ್ಲಿದ್ದರೂ ಕೂಡಲೇ ವಾಪಸ್ ಬರಬೇಕು. ಪ್ರಜ್ವಲ್ ಎಲ್ಲಿದ್ದರು ಬಂದು ಪೊಲೀಸರ ಮುಂದೆ ಶರಣಾಗಬೇಕು. ವಿಚಾರಣೆಯನ್ನು ಎದುರಿಸಬೇಕು. ಯವುದೇ ಮುಲಜು, ಮರ್ಜಿ ಇಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ ಎಂದು ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...