Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣನಿಗೆ ಶರಣಾಗುವಂತೆ ದೇವೇಗೌಡ್ರು ಪತ್ರ : ರೇವಣ್ಣ ಹೇಳಿದ್ದೇನು..?

Facebook
Twitter
Telegram
WhatsApp

ಮಂಗಳೂರು: ಜೈಲಿನಿಂದ ಹೊರ ಬಮನದ ಮೇಲೆ ಮಾಜಿ ಸಚಿವ ಹಡಚ್.ಡಿ ರೇವಣ್ಣ ಅವರು ದೇವಸ್ಥಾನಗಳನ್ನು ತಿರುಗುವ ಕೆಲಸ ಮಾಡುತ್ತಿದ್ದಾರೆ. ಇಂದು ಧರ್ಮಸ್ಥಳದ ಶ್ರೀ ಮಂಜುನಾಥ ದೇಗುಲಕ್ಕೆ ಭೇಟಿ ನೀಡಿದ್ದಾರೆ. ಮಂಜುನಾಥನಿಗೆ ವಿಶೇಷ ಪೂಜೆ ನೆರವೇರಿಸಿದ್ದಾರೆ. ಅಂಕಷ್ಟಗಳನ್ನು ನಿವಾರಿಸುವುದಕ್ಕೆ ದೇವರ ಬಳಿ ಪ್ರಾರ್ಥಿಸಿದ್ದಾರೆ. ಮಂಜುನಾಥ ದೇವಸ್ಥಾನವಲ್ಲದೆ ಇತರೆ ದೇವಸ್ಥಾನಗಳಿಗೂ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ.

 

ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಸುಮಾರು ನಾಲ್ಕು ದಶಕಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. 25 ವರ್ಷಗಳ ಕಾಲ ಹೊಳೆನರಸೀಪುರ ಶಾಸಕನಾಗಿ ಜನರ ಸೇವೆ ಸಲ್ಲಿಸಿದ್ದೇನೆ. ನನಗೆ ಕಾನೂನಿನ ಮೇಲೆ ಗೌರವವಿದೆ ಮತ್ತು ಮಂಜುನಾಥನ ಮೇಲೆ ನಂಬಿಕೆ ಇದೆ. ಪ್ರಕರಣಗಳು ನ್ಯಾಯಾಲಯದ ವಿಚಾರಣೆಯಲ್ಲಿರುವಾಗ ಮಾತನಾಡುವುದಿ, ಕಮೆಂಟ್ ಮಾಡುವುದು ಸರಿಯಲ್ಲ ಎಂದು ತಮ್ಮ ಹಾಗೂ ಮಗ ಪ್ರಜ್ವಲ್ ಬಗ್ಗೆ ಇರುವ ಆರೋಪಗಳ ಬಗ್ಗೆ ಮಾತನಾಡುವುದಕ್ಕೆ ಹೋಗಲಿಲ್ಲ.

ಇದೇ ವೇಳೆ ಮಾಜಿ ಪ್ರಧಾನಿ, ರೇವಣ್ಣ ಅವರ ತಂದೆ ಹೆಚ್.ಡಿ.ದೇವೇಗೌಡ ಅವರು ಪ್ರಜ್ವಲ್ ರೇವಣ್ಣ ಅವರಿಗೆ ಶರಣಾಗುವಂತೆ ಪತ್ರ ಬರೆದಿದ್ದರು. ಅದರಲ್ಲೂ ಕಡೆಯ ಎಚ್ಚರಿಕೆ ಎಂದು ಹೇಳಿದ್ದರು. ಈ ಬಗ್ಗೆ ಪ್ರಶ್ನೆ ಮಾಡಿದಾಗ ಪತ್ರದ ಬಗ್ಗೆಯೆಲ್ಲಾ ನನಗೇನು ಗೊತ್ತಿಲ್ಲ ಎಂದು ಹೇಳಿ ಮುಂದೆ ಸಾಗಿದರು.

ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗಿ ಇಂದಿಗೆ ಸರಿಯಾಗಿ ಒಂದು ತಿಂಗಳು. ಎಷ್ಟೇ ನೋಟೀಸ್ ಕೊಟ್ಟರು ದೇಶಕ್ಕೆ ಬಂದು ಎಸ್ಐಟಿ ತನಿಖೆಯನ್ನು ಎದುರಿಸುತ್ತಿಲ್ಲ. ಇನ್ನೊಂದು ವಾರ ಕಳೆದರೆ ಲೋಕಸಭಾ ಚುನಾವಣೆಯ ಫಲಿತಾಂಶವೂ ಬರಲಿದೆ. ಫಲಿತಾಂಶದ ಬಳಿಕ ಪ್ರಜ್ವಲ್ ದೇಶಕ್ಕೆ ಬರುವ ಸಾಧ್ಯತೆ ಇದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಜನತಾ ದರ್ಶನ ಕಾರ್ಯಕ್ರಮ ಸಿಎಂ ಹಾಗೂ ಡಿಸಿಎಂ ಮಾಡುವುದು : ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

  ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಹಲವು ಬಾರಿ ಜನತಾ ದರ್ಶನ ಕಾರ್ಯಕ್ರಮ ಮಾಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಜನ ತನ್ನ ಸಮಸ್ಯೆಗಳನ್ನು

ಕುಮಾರಸ್ವಾಮಿ ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರು : ಸರ್ಕಾರದ ವಿರುದ್ಧ ಕೇಂದ್ರ ಸಚಿವ ಕೆಂಡಾಮಂಡಲ

ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದಾರೆ. ಆದರೆ ಈ ಜನಾತಾ ದರ್ಶನಕ್ಕೆ ಡಿಸಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸೇರಿದಂತೆ ಯಾವ ಅಧಿಕಾರಿಯೂ ಹಾಜರಾಗಿರಲಿಲ್ಲ. ಎಲ್ಲರೂ

UK Election Result 2024 |  ಬ್ರಿಟನ್ ಪ್ರಧಾನಿ ರಿಷಿ ಸುನಕ್ ಗೆ ಹೀನಾಯ ಸೋಲು : ಅಧಿಕಾರದ ಗದ್ದುಗೆ ಏರಿದ ಲೇಬರ್ ಪಕ್ಷ : ನೂತನ ಪ್ರಧಾನಿಯಾಗಿ ಕೀರ್ ಸ್ಟಾರ್‌ಮೇರ್

  ಸುದ್ದಿಒನ್ : ಬ್ರಿಟನ್‌ನಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ರಿಷಿ ಸುನಕ್ ನೇತೃತ್ವದ ಕನ್ಸರ್ವೇಟಿವ್ ಪಕ್ಷವು ಹೀನಾಯ ಸೋಲನ್ನು ಅನುಭವಿಸಿತು. ವಿರೋಧ ಪಕ್ಷ ಲೇಬರ್ ಪಾರ್ಟಿಗೆ ಜನರು ಅಧಿಕಾರ ನೀಡಿದ್ದಾರೆ. ಯುಕೆ ಸಂಸತ್ತಿನ ಒಟ್ಟು

error: Content is protected !!