Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಭಿಮಾನಿಗಳು, ಕಾರ್ಯಕರ್ತರಿಗೆ ಪ್ರೀತಿಯ ಪತ್ರ ಬರೆದು, ಮನವಿ ಮಾಡಿದ ದೇವೇಗೌಡರು..!

---Advertisement---

ಬೆಂಗಳೂರು: ದೊಡ್ಡಗೌಡರ ಮನೆಯಲ್ಲಿ ಇನ್ನು ಬೇಸರದ ಛಾಯೆ ಆರಿಲ್ಲ. ಯೋಚನೆ, ನೋವಲ್ಲಿಯೇ ಇದ್ದಾರೆ. ಯಾಕಂದ್ರೆ ಮಾಜಿ ಪ್ರಧಾನಿಗಳ ಕುಟುಂಬದಲ್ಲಿ ಇಂಥದ್ದೊಂದು ಅಪವಾದ ಬಂದರೆ ಸಹಿಸುವುದಾದರೂ ಹೇಗೆ..? ದೇವೇಗೌಡರಿಗೆ ಈಗಾಗಲೇ 91 ವರ್ಷ ವಯಸ್ಸಾಗಿದೆ. ಅವರ ಆರೋಗ್ಯದ ಕಾಳಜಿಯೂ ಬಹಳ ಮುಖ್ಯವಾಗುತ್ತದೆ. ಇದೇ ನೋವಲ್ಲಿ ಇದೀಗ ದೇವೇಗೌಡ ಅವರು ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಮನವಿಯೊಂದನ್ನು ಮಾಡಿದ್ದಾರೆ.

ಮೇ 18ಕ್ಕೆ ದೇವೇಗೌಡರ ಹುಟ್ಟಿದ ಹಬ್ಬ. 91 ತುಂಬಿ 92 ನೇ ವಸಂತಕ್ಕೆ ಕಾಲಿಡಲಿದ್ದಾರೆ. ಆದರೆ ಈ ಬಾರಿ ಕಾರಣಾಂತರಗಳಿಂದ ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ದೇವೇಗೌಡರ ಹುಟ್ಟುಹಬ್ಬ ಎಂದರೆ ಅಭಿಮಾನಿಗಳು, ಕಾರ್ಯಕರ್ತರು ಮನೆ ಮುಂದೆ ಸಾಲುಕಟ್ಟಿ ನಿಲ್ಲುತ್ತಾರೆ, ಶುಭಕೋರಲು ಬರುತ್ತಾರೆ. ಈ ಬಾರಿ ಆ ಖುಷಿಯ ಸಂಭ್ರಮವಿಲ್ಲ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ನೊಂದಿರುವ ದೊಡ್ಡಗೌಡ್ರು ಹುಟ್ಟುಹಬ್ಬವನ್ನು ಆಚರಣೆ ಮಾಡಿಕೊಳ್ಳುತ್ತಿಲ್ಲ. ಈ ಬಗ್ಗೆ ಪತ್ರ ಬರೆದಿದ್ದು, ಈ ಬಾರಿ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಎಲ್ಲರೂ ಇದ್ದಲ್ಲಿಯೇ ಶುಭಹಾರೈಸಬೇಕು ಎಂದು ಕೇಳಿಕೊಂಡಿದ್ದಾರೆ.

ಜೊತೆಗೆ ವಿಧಾನಪರಿಷತ್ ಚುನಾವಣೆಯಲ್ಲಿ ಜೆಡಿಎಸ್ – ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷದ ಸಂಘಟನೆಗೆ ಪ್ರತಿಯೊಬ್ಬರು ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕರೆಕೊಟ್ಟಿದ್ದಾರೆ. ಆದರೆ ಈ ಬಾರಿಯ ಹುಟ್ಟುಹಬ್ಬವನ್ನು ದೇವೇಗೌಡರು ಆಚರಿಸಿಕೊಳ್ಳದೇ ಇರುವುದು ಕಾರ್ಯಕರ್ತರಿಗೂ ಬೇಸರ ತರಿಸಿದೆ. ಆದರೆ ಇದ್ದಲ್ಲಿಯೇ ಶುಭಾಶಯ ಕೋರುವುದಕ್ಕೆ ಕೋರಲಾಗಿದೆ. ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ದೇವೇಗೌಡರ ಕುಟುಂಬಕ್ಕೆ ಮುಜುಗರವನ್ನುಂಟು ಮಾಡಿದೆ. ರೇವಣ್ಣ ಅವರೇನೋ ಜೈಲಿನಿಂದ ಹೊರಗೆ ಬಂದರು, ಆದರೆ ಪ್ರಜ್ವಲ್ ಮಾತ್ರ ಇನ್ನು ರಾಜ್ಯಕ್ಕೆ ಬರದೆ ಅಲ್ಲಿಯೇ ಉಳಿದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment