Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಟಿಕೆಟ್ ಕದನದ ಬೆನ್ನಲ್ಲೇ ಒಗ್ಗಟ್ಟು ಪ್ರದರ್ಶಿಸಿದ ದೇವೇಗೌಡರ ಕುಟುಂಬ..!

---Advertisement---

ಕಳೆದ ಕೆಲ ದಿನಗಳಿಂದ ದೇವೇಗೌಡರ ಕುಟುಂಬದಲ್ಲಿ ಟಿಕೆಟ್ ನದ್ದೆ ಸದ್ದು ಸುದ್ದಿ. ಆ ಕಡೆ ಭವಾನಿ ರೇವಣ್ಣ ನಾನೇ ಹಾಸನ ಅಭ್ಯರ್ಥಿ ಅಂದ್ರೆ ಈ ಕಡೆ ಕುಮಾರಸ್ವಾಮಿ ಭವಾನಿ ಅವರೇ ನಿಲ್ಲಬೇಕು ಎಂಬ ಅನಿವಾರ್ಯತೆ ಇಲ್ಲ ಎನ್ನುತ್ತಿದ್ದರು. ಇದು ಬಿಜೆಪಿ ಪಕ್ಷಕ್ಕೆ ದೊಡ್ಡ ಆಹಾರವಾಗಿತ್ತು. ಅದೇ ಕಾರಣಕ್ಕೆ ನಳಿನ್ ಕುಮಾರ್ ಕಟೀಲು, ಈಶ್ವರಪ್ಪ ಸೇರಿದಂತೆ ಹಲವರು ಭವಾನಿ ರೇವಣ್ಣ ಅವರನ್ನು ತಮ್ಮ ಪಕ್ಷಕ್ಕೆ ಆಹ್ವಾನ ಮಾಡಿದ್ದರು. ಇದೀಗ ಅದೆಲ್ಲದಕ್ಕೂ ಟಾಂಗ್ ನೀಡಿದ್ದಾರೆ ದೊಡ್ಡ ಗೌಡರ ಕುಟುಂಬ.

ಟಿಕೆಟ್ ವಿಚಾರಕ್ಕೆ ಎದ್ದಿದ್ದ ಭಿನ್ನಾಭಿಪ್ರಾಯಗಳನ್ನೆಲ್ಲಾ ಮರೆತು ದೊಡ್ಡ ಗೌಡರ ಕುಟುಂಬ ಒಗ್ಗಟ್ಟನ್ನು ಪ್ರದರ್ಶಿಸಿದೆ. ಹೊಳೆನರಸೀಪುರದಲ್ಲಿ ಹೆಚ್ ಡಿ ಕುಮಾರಸ್ವಾಮಿ, ಹೆಚ್ ಡಿ ರೇವಣ್ಣ, ಭವಾನಿ ರೇವಣ್ಣ, ಸೂರಜ್ ರೇವಣ್ಣ, ಪ್ರಜ್ವಲ್ ರೇವಣ್ಣ ಎಲ್ಲರೂ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ನಗರ್ತಿಯಲ್ಲಿ ದೇವಸ್ಥಾನದ ಉದ್ಘಾಟನಾ ಕಾರ್ಯಕ್ರಮವನ್ನು ದೇವೇಗೌಡರ ಕುಟುಂಬ ನಿಂತು ನೆರವೇರಿಸಿಕೊಟ್ಟಿದ್ದಾರೆ.

ಒಟ್ಟಿಗೆ ದೀಪ ಬೆಳಗಿದ್ದಾರೆ, ಒಟ್ಟಿಗೆ ಒಂದೇ ವಾಹನದಲ್ಲಿ ರೋಡ್ ಶೋ ನೆರವೇರಿಸಿದ್ದಾರೆ. ಈ ಮೂಲಕ ನಮ್ಮಲ್ಲಿ ಭಿನ್ನಾಭಿಪ್ರಾಯವಿಲ್ಲವೆಂದು ತೋರಿಸಿದ್ದಾರೆ. ಸದ್ಯ ಕುಟುಂಬದಲ್ಲು ಮೇಲ್ನೋಟಕ್ಕೆ ಟಿಕೆಟ್ ವಿಚಾರ ಶಮನವಾದಂತೆ ಕಾಣುತ್ತಿದೆ. ಆದರೆ ಹಾಸನ ಟಿಕೆಟ್ ಯಾರ ಪಾಲಾಗಬಹುದು ಎಂಬ ಪ್ರಶ್ನೆ ಎದ್ದಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...