ಬಿಜೆಪಿ ಸರ್ಕಾರದಲ್ಲೇ ಅಭಿವೃದ್ಧಿ ಹೆಚ್ಚು ವೇಗ ಪಡೆಯುತ್ತದೆ: ಸಿಎಂ

ಸಿಂದಗಿ: ಬಿಜೆಪಿ ಸರ್ಕಾರದ ಅವಧಿಯಲ್ಲೇ ಅಭಿವೃದ್ಧಿ ಕಾರ್ಯಗಳು ಹೆಚ್ಚು ವೇಗ ಪಡೆಯುತ್ತವೆ. ನೀರಾವರಿ ಯೋಜನೆಗಳು ನಮ್ಮ ಸರ್ಕಾರದ ಅವಧಿಯಲ್ಲೆ ಹೆಚ್ಚು ಕಾರ್ಯರೂಪಕ್ಕೆ ಬಂದಿವೆ ಎಂದು‌ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಗುತ್ತಿ ಬಸವಣ್ಣ ಏತನೀರಾವರಿ, ಚಿಮ್ಮಲಗಿ ಏತನೀರಾವರಿಗಳೇ ಇದಕ್ಕೆ ಸಾಕ್ಷಿ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಯೋಜನೆಗಳನ್ನು ನಿರ್ಲಕ್ಷ ಮಾಡಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿಂಧಗಿ ಮತಕ್ಷೇತ್ರದ ಕಕ್ಕಳಮೇಲಿ ಗ್ರಾಮದಲ್ಲಿ ನಡೆದ ಚುನಾವಣಾ ಪ್ರಚಾರ ಭಾಷಣದಲ್ಲಿ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಯಾರ ಬಗ್ಗೆಯೂ ಆಲೋಚಿಸುವುದಿಲ್ಲ. ಅಧಿಕಾರ ಕಳೆದುಕೊಂಡು ನಂತರ ಚುನಾವಣೆ ಸಂದರ್ಭದಲ್ಲಿ ಮಾತ್ರ ಮನೆ ಬಾಗಿಲಿಗೆ ಬರುತ್ತದೆ. ಸಿಂಧಗಿಯಲ್ಲಿ ಒಂದು ಲಕ್ಷ ಎಕರೆಗಿಂತ ಹೆಚ್ಚು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಒದಗಿಸುವಂತಹ ಸೌಭಾಗ್ಯ ನಮ್ಮ ಸರ್ಕಾರಕ್ಕೆ ದೊರೆತಿದೆ. ನಾವು ಆರಂಭ ಮಾಡಿದ ಯೋಜನೆಗಳನ್ನು ನಾವೇ ಉದ್ಘಾಟನೆ ಮಾಡುವುದು ಸಂತಸದ ವಿಷಯ ಎಂದು ಬೊಮ್ಮಾಯಿ ಹರ್ಷ ವ್ಯಕ್ತ ಪಡಿಸಿದರು.

ಬಿಜೆಪಿ ಸರ್ಕಾರ ಕರ್ನಾಟಕದ ಅಭಿವೃದ್ಧಿ, ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಿಗೆ ಸೌಲಭ್ಯ, ರೈತರ ಜೀವನ ಜೀವನ ಸುಧಾರಿಸುವ ಕುರಿತು ನಾವು ಮಾತನಾಡುತ್ತಿದ್ದೇವೆ. ಆದರೆ ಕಾಂಗ್ರೆಸ್ ಸುಳ್ಳಿನ ಸರಮಾಲೆಯನ್ನು ಹೆಣೆದು ಚುನಾವಣೆ ಗೆಲ್ಲುವ ಹುನ್ನಾರದಲ್ಲಿದ್ದಾರೆ. ಎರಡು ಕ್ಷೇತ್ರದಲ್ಲಿ ಅವರ ಆಸೇ ಇಡೇರುವುದಿಲ್ಲ ಎಂದು ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತ ಪಡಿಸಿದರು.

ಕಾಂಗ್ರೆಸ್ ನವರು ಬಿಜೆಪಿ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿದೆ ಎಂದು ಆರೋಪಿಸುತ್ತಾರೆ. ಇವರ ಒಳ ಒಪ್ಪಂದದಿಂದಲೇ ಸರ್ಕಾರ ಸಮ್ಮೀಶ್ರ ಸರ್ಕಾರ ರಚನೆ ಯಾಗಿ ಪತನಗೊಂಡಿದೆ. ಮೊದಲು ನಿಮ್ಮ ನಿಮ್ಮ ವ್ಯವಾಹಾರದ ಒಪ್ಪಂದಗಳನ್ನು ಮುಗಿಸಿಕೊಳ್ಳಿ ಎಂದು ಎರಡು ಪಕ್ಷದವರನ್ನು ಬೊಮ್ಮಾಯಿ ಕಾಲೆಳೆದರು.

ನಮ್ಮ ಒಪ್ಪದ ಏನಿದ್ದರು ಸಿಂಧಗಿಯ ಜನತೆಯೊಂದಿಗೆ ಇದೆ, ಇಲ್ಲಿನ ರೈತರ ಜೋತೆ, ಅಭಿವೃದ್ಧಿಯ ಜೋತೆ, ಯುವಕರ ಜೋತೆ, ನಮ್ಮ ತಾಂದಿರ ಜೋತೆ, ಇಲ್ಲಿನ ಹಿಂದುಳಿದ ವರ್ಗದವರ ಜೋತೆ ನಮ್ಮ ಒಪ್ಪಂದವಾಗಿದೆ ಎಂದು ಹೇಳಿದರು.

suddionenews

Recent Posts

ಮೈಕ್ರೋ ಫೈನಾನ್ಸ್ ಸುಗ್ರಿವಾಜ್ಞೆಗೆ ಅಂಕಿತ ಹಾಕದ ರಾಜ್ಯಪಾಲರು : ಸರ್ಕಾರಕ್ಕೆ ಹಿನ್ನಡೆ

ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…

41 minutes ago

ಚಿತ್ರದುರ್ಗ APMC | ಶೇಂಗಾ, ಕಡಲೆ ಸೇರಿದಂತೆ ಇತರೆ ಉತ್ಪನ್ನಗಳ ಫೆಬ್ರವರಿ 07 ರ ಮಾರುಕಟ್ಟೆ ಧಾರಣೆ ವಿವಿರ ಇಲ್ಲಿದೆ…!

  ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…

1 hour ago

ಚಿತ್ರದುರ್ಗದ ಅಳಿಯ ಡಾಲಿ ಮೇಲೆ ದರ್ಶನ್ ಫ್ಯಾನ್ಸ್ ಗರಂ : ಫುಲ್ ಟ್ರೋಲ್..!

ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…

4 hours ago

ಮೂಡಾ ಅಪ್ಡೇಟ್: ಸಿಎಂ ಸಿದ್ದರಾಮಯ್ಯರಿಗೆ ರಿಲೀಫ್ ನೀಡಿದ ಹೈಕೋರ್ಟ್

ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…

4 hours ago

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ

ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…

11 hours ago

ಫೆಬ್ರವರಿ 10ಕ್ಕೆ ಕರ್ನಾಟಕದಲ್ಲಿ ಕುಂಭಮೇಳ : ಹೇಗಿದೆ ತಯಾರಿ..?

  144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…

20 hours ago