Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಅಭಿವೃದ್ದಿ ಸಾಧ್ಯ : ಡಾ.ವೇದಾಂತ್ ಏಳಂಜಿ

---Advertisement---

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಮೇ. 30 : ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಗಳಿಸಿರುವ ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡೆ ಹಾಗೂ ಸಾಂಸ್ಕೃತಿಕ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಹಮ್ಮಿಕೊಳ್ಳಲಾಗಿತ್ತು.

ಯುವ ಬರಹಗಾರ ವಿಮರ್ಶಕ ಡಾ.ವೇದಾಂತ್ ಏಳಂಜಿ ಮಾತನಾಡಿ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‍ರವರ ವಿಚಾರಗಳನ್ನು ವಿದ್ಯಾರ್ಥಿಗಳು ಪಾಲಿಸಬೇಕು. ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಅಭಿವೃದ್ದಿ ಸಾಧ್ಯ ಎನ್ನುವುದು ಅಂಬೇಡ್ಕರ್‍ರವರ ಮೂಲ ಮಂತ್ರ ಎಂದು ಹೇಳಿದರು.

ಪ್ರಾಧ್ಯಾಪಕ ಮಂಜುನಾಥ್ ಆರ್.ಮಾತನಾಡುತ್ತ ಶೈಕ್ಷಣಿಕ ಹಂತದಲ್ಲಿ ಪೋಷಕರು ಮಕ್ಕಳ ಆಸಕ್ತಿಗನುಗುಣವಾಗಿ ಪ್ರೋತ್ಸಾಹಿಸಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಒಂದೊಂದು ಅಂಕಗಳಿಗೂ ಪ್ರಾಮುಖ್ಯತೆಯಿರುವುದರಿಂದ ವಿದ್ಯಾರ್ಥಿಗಳು ಶಿಕ್ಷಣದ ಕಡೆ ಹೆಚ್ಚಿನ ಗಮನ ಕೊಡಬೇಕೆಂದರು.

ಪ್ರಾಧ್ಯಾಪಕ ಲಿಂಗೇಶ್ವರ್ ಮಾತನಾಡಿ ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ ಎಂದು ತಿಳಿಸಿದರು. ಸೃಷ್ಟಿ, ರೇಖ, ರಶ್ಮಿ, ಸಿಂಚನ, ಐಶ್ವರ್ಯ, ವರ್ಷಿತ, ಸಂಜನ ಇವರುಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

ಗ್ರಾಮ ಪಂಚಾಯಿತಿ ಸದಸ್ಯ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡೆ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ನಾಗರಾಜ್, ಸಂತೋಷ, ಹರೀಶ್, ಪ್ರಭಾಕರ್, ಮಂಜುನಾಥ, ಮಾರಪ್ಪ, ತಿಪ್ಪೇಸ್ವಾಮಿ, ಗ್ರಾಮದ ಮುಖಂಡರುಗಳಾದ ಕರಿಯಪ್ಪ, ಪರಮೇಶ್ವರಪ್ಪ, ಶಂಕರ ಇವರುಗಳು ವೇದಿಕೆಯಲ್ಲಿದ್ದರು.
ಪ್ರಕಾಶ್ ಪ್ರಾರ್ಥಿಸಿದರು. ಪೊಲೀಸ್ ನಿಂಗರಾಜ್ ನಿರೂಪಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment