Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಡೆವಿಲ್ ಟ್ರೇಲರ್ ರಿಲೀಸ್ : ಧೂಳ್ ಎಬ್ಬಿಸಿದ ದರ್ಶನ್ ಮಾಸ್ ಡೈಲಾಗ್ ಗಳು

---Advertisement---

ದರ್ಶನ್ ಡೆವಿಲ್ ಸಿನಿಮಾ ಮೇಲೆ ಸಾಕಷ್ಟು ನಿರೀಕ್ಷೆ ಇದೆ. ರೇಣುಕಾಸ್ವಾಮಿ ಕೊಲೆಯಾಗದೆ ಇದ್ದಿದ್ದರೆ ಡೆವಿಲ್ ಸಿನಿಮಾ ಯಾವಾಗಲೋ ರಿಲೀಸ್ ಆಗ್ಬೇಕಿತ್ತು. ಮತ್ತೊಂದು ಹೊಸ ಸಿನಿಮಾಗೂ ಟೈಯಪ್ ಆಗ್ತಾ ಇದ್ದರು. ಆದರೆ ಅವರಿಲ್ಲದೇನೇ ಡೆವಿಲ್ ಸಿನಿಮಾವನ್ನು ರಿಲೀಸ್ ಮಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಸಿನಿಮಾದ ಎಲ್ಲಾ ಕೆಲಸಗಳು ಮುಗಿದಿರುವ ಕಾರಣ ದರ್ಶನ್ ಅವರೇ ಜೈಲಿನಿಂದ ಸೂಚನೆಯನ್ನು ನೀಡಿದ್ದಾರೆ. ಸಿನಿಮಾವನ್ನು ರಿಲೀಸ್ ಮಾಡಲು ಹೇಳಿದ್ದಾರೆ. ಹೀಗಾಗಿ ಡೆವಿಲ್ ತಂಡ ಸಿನಿಮಾ ರಿಲೀಸ್ ಗೆ ಎಲ್ಲಾ ತಯಾರಿ ನಡೆಸಿದೆ.

ಡಿಸೆಂಬರ್ 12ಕ್ಕೆ ರಿಲೀಸ್ ಆಗಬೇಕಿದ್ದ ಸಿನಿಮಾ ಇದೀಗ ಅಭಿಮಾನಿಗಳ ಒತ್ತಾಯದ ಮೇರೆಗೆ ಒಂದು ದಿನ ಮೊದಲೇ ಅಂದ್ರೆ ಡಿಸೆಂಬರ್ 11ಕ್ಕೆ ರಿಲೀಸ್ ಆಗ್ತಾ ಇದೆ. ಇಂದು ಅಭಿಮಾನಿಗಳೆಲ್ಲಾ ಕಾಯ್ತಾ ಇದ್ದಂತ ಟ್ರೇಲರ್ ರಿಲೀಸ್ ಆಗಿದೆ. ಟ್ರೇಲರ್ ನೋಡಿ ಫ್ಯಾನ್ಸ್ ಅಂತು ಫುಲ್ ಖುಷಿಯಾಗಿದ್ದಾರೆ. ಡೆವಿಲ್ ಸಿನಿಮಾದಲ್ಲಿ ದರ್ಶನ್ ಅವರಿಗೆ ಹಲವು ಶೇಡ್ ಗಳಿವೆ ಎಂದು ಹೇಳಲಾಗಿತ್ತು. ಟ್ರೇಲರ್ ನಲ್ಲಿ ಅದು ಕಾಣಿಸಿದೆ. ಅದರಲ್ಲೂ ದರ್ಶನ್ ಅವರು ಹೇಳುವ ಮಾಸ್ ಡೈಲಾಗ್ ಗಳಂತು ಸಿಕ್ಕಾಪಟ್ಟೆ ಇದ್ದು, ಮತ್ತೆ ಮತ್ತೆ ಟ್ರೇಲರ್ ನೋಡುವಂತೆ ಮಾಡ್ತಿದೆ.

ಕ್ಷಣಕ್ಕೊಂದು ಬಣ್ಣ ಬದಲಾಯಿಸುತ್ತಾ, ಗಳಿಗೆಗೊಂದು ವೇಷ ಹಾಕುತ್ತಾ ದರ್ಶನ್, ತನ್ನ ಹೀರೋಯಿನ್ ಗೆ ಗೊಂದಲ ಮಾಡ್ತಿದ್ದಾರೆ. ದರ್ಶನ್ ಅವರ ಹಲವು ಅವತಾರಗಳನ್ನು ಒಂದೇ ಸಿನಿಮಾದಲ್ಲಿ ನೋಡುವಂತಾಗಿದೆ. ಸ್ಟೈಲಿಶ್ ಲುಕ್, ಮಾಸ್ ಡೈಲಾಗ್ ಎಲ್ಲವೂ ವಾವ್ ಎನ್ನಿಸುವ ರೀತಿ ಇದ್ದು, ಸೂರ್ಯಂಗೆ ಹೆಚ್ಚು ಹೊತ್ತು ಗ್ರಹಣ ಹಿಡಿಯಲ್ಲ. ನಾನ್ ಬರ್ತಾ ಇದ್ದೀನಿ ಚಿನ್ನಾ ಎಂಬ ಡೈಲಾಗ್ ಅಂತು ಎಲ್ಲರನ್ನು ಕಾಡಿದೆ. ಯಾಕಂದ್ರೆ ಆದಷ್ಟು ಬೇಗ ದರ್ಶನ್ ಅವರು ಹೊರಗೆ ಬರಲಿ ಅಂತಾನೇ ಫ್ಯಾನ್ಸ್ ಕಾಯ್ತಾ ಇದ್ದಾರೆ. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ ಡೆವಿಲ್ ಟ್ರೇಲರ್ ಧೂಳೆಬ್ಬಿಸ್ತಾ ಇದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now