Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಗ್ರಹಣ ಸಮಯದಲ್ಲೂ ಮಂತ್ರಾಲಯದಲ್ಲಿ ಭಕ್ತರಿಗೆ ಅವಕಾಶ..!

Facebook
Twitter
Telegram
WhatsApp

ರಾಯಚೂರು: ಇಂದು ಕೇತುಗ್ರಸ್ತ ಸೂರ್ಯಗ್ರಹಣವಿದೆ. ಎಲ್ಲಾ ದೇವಸ್ಥಾನಗಳಲ್ಲೂ ಬಾಗಿಲು ಸಾಕಲಾಗುತ್ತದೆ. ಗ್ರಹಣ ಮುಗಿಯುವ ತನಕ ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ನಡೆಯುವುದಿಲ್ಲ. ದೇವರ ದರ್ಶನಕ್ಕೂ ಅವಕಾಶವಿರುವುದಿಲ್ಲ. ಆದರೆ ರಾಘವೇಂದ್ರ ಸ್ವಾಮಿ ಮಠ ಇದಕ್ಕೆ ಹೊರತಾಗಿದೆ. ಗ್ರಹಣ ಕಾಲದಲ್ಲೂ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.

ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿ ಮಠ ಹಾಗೂ ರಾಯರ ಶಾಖಾ ಮಠಗಳಲ್ಲಿ ಭಕ್ತರಿಗೆ ಯಾವುದೇ ನಿರ್ಬಂಧವಿಲ್ಲ. ರಾಯರ ಬೃಂದಾವನ ನೋಡುವುದಕ್ಕೆ ಗ್ರಹಣ ಕಾಲದಲ್ಲೂ ಅವಕಾಶ ನೀಡಲಾಗಿದೆ. ಆದರೆ ದಿನನಿತ್ಯದ ಪೂಜೆಗೆ ಮಾತ್ರ ಬ್ರೇಕ್ ಹಾಕಲಾಗಿದೆ. ಗ್ರಹಣ ಮುಗಿದ ಮೇಲೆ ಮಠದಲ್ಲಿ ಶಾಂತಿ ಹೋಮ ನಡೆಸಲಾಗುವುದು. ಆದರೆ ಸೂರ್ಯಾಸ್ತದ ವೇಳೆಗೆ ಗ್ರಹಣ ಮುಕ್ತಾಯವಾಗುತ್ತಿದ್ದು, ಪೂಜೆಗಳು ನಡೆಯುವುದಿಲ್ಲ ಎಂದು ತಿಳಿಸಲಾಗಿದೆ.

ರಾಘವೇಂದ್ರ ಸ್ವಾಮಿಗಳ ಶಾಖಾ ಮಠ ಹಾಗೂ ಸತ್ಯನಾಥ ಕಾಲೋನಿಯ ಉತ್ತರಾಧಿ ಮಠದಲ್ಲಿ ಗ್ರಹಣದ ವೇಳೆ ಗ್ರಹಣ ಶಾಂತಿ ಹೋಮ ಹಾಗೂ ಗೋಗ್ರಾಸ ಹೋಮ ಜರುಗಲಿವೆ. ಗ್ರಹಣದ ಬಳಿಕ ದೇವಾಲಯ, ಮಠಗಳ ಸ್ವಚ್ಛತಾ ಕಾರ್ಯ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ರೈತ ಆತ್ಮಹತ್ಯೆ

ಸುದ್ದಿಒನ್, ಚಳ್ಳಕೆರೆ, ಮೇ. 12 : ತಾಲೂಕಿನ ಬಾಲೇನಹಳ್ಳಿ ಗ್ರಾಮದ ಮೋಹನ್ ಕುಮಾರ್(36) ಎಂಬ ರೈತ ಬೆಳಗಾಗಿ ಮಾಡಿದ ಸಾಲವನ್ನು ತೀರಿಸಲಾಗದೆ ಭಾನುವಾರ ಬೆಳಗಿನ ಜಾವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ

ಹೊಸದುರ್ಗ | ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಫೇಲ್,‌ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

  ಸುದ್ದಿಒನ್, ಚಿತ್ರದುರ್ಗ, ಮೇ. 12  : ಇತ್ತಿಚೀಗಷ್ಟೆ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆ 21ನೇ ಸ್ಥಾನ ಪಡೆದುಕೊಂಡಿದೆ. ಇತ್ತ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ಫೇಲ್ ಆಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡ ಘಟನೆ

ಖ್ಯಾತ ಕಿರುತೆರೆ ನಟಿ ಪವಿತ್ರಾ ಜಯರಾಮ್ ಅಪಘಾತದಲ್ಲಿ ಸಾವು…!

ಬೆಂಗಳೂರು : ಇಂದು ತಾಯಂದಿರ ದಿನ. ಎಲ್ಲರೂ ತಮ್ಮ ತಾಯಂದಿರ ಫೋಟೋ ಹಾಕಿಕೊಂಡು ವಿಶ್ ಮಾಡುತ್ತಿದ್ದಾರೆ. ತಾಯಂದಿರಿಗೆ ಗಿಫ್ಟ್ ಕೊಟ್ಟು ಸಂಭ್ರಮಿಸುತ್ತಿದ್ದಾರೆ. ಆದರೆ ಈ ನಟಿಯ ಮಕ್ಕಳಿಗೆ ಆ ಯೋಗ ಇಲ್ಲ. ಅಮ್ಮನನ್ನು ತಬ್ಬಿ

error: Content is protected !!