ರಾಯಚೂರು: ಇಂದು ಕೇತುಗ್ರಸ್ತ ಸೂರ್ಯಗ್ರಹಣವಿದೆ. ಎಲ್ಲಾ ದೇವಸ್ಥಾನಗಳಲ್ಲೂ ಬಾಗಿಲು ಸಾಕಲಾಗುತ್ತದೆ. ಗ್ರಹಣ ಮುಗಿಯುವ ತನಕ ಯಾವುದೇ ರೀತಿಯ ಪೂಜೆ ಪುನಸ್ಕಾರಗಳು ನಡೆಯುವುದಿಲ್ಲ. ದೇವರ ದರ್ಶನಕ್ಕೂ ಅವಕಾಶವಿರುವುದಿಲ್ಲ. ಆದರೆ ರಾಘವೇಂದ್ರ ಸ್ವಾಮಿ ಮಠ ಇದಕ್ಕೆ ಹೊರತಾಗಿದೆ. ಗ್ರಹಣ ಕಾಲದಲ್ಲೂ ದೇವರ ದರ್ಶನಕ್ಕೆ ಅವಕಾಶ ನೀಡಲಾಗಿದೆ.
ಮಂತ್ರಾಲಯದಲ್ಲಿ ರಾಘವೇಂದ್ರ ಸ್ವಾಮಿ ಮಠ ಹಾಗೂ ರಾಯರ ಶಾಖಾ ಮಠಗಳಲ್ಲಿ ಭಕ್ತರಿಗೆ ಯಾವುದೇ ನಿರ್ಬಂಧವಿಲ್ಲ. ರಾಯರ ಬೃಂದಾವನ ನೋಡುವುದಕ್ಕೆ ಗ್ರಹಣ ಕಾಲದಲ್ಲೂ ಅವಕಾಶ ನೀಡಲಾಗಿದೆ. ಆದರೆ ದಿನನಿತ್ಯದ ಪೂಜೆಗೆ ಮಾತ್ರ ಬ್ರೇಕ್ ಹಾಕಲಾಗಿದೆ. ಗ್ರಹಣ ಮುಗಿದ ಮೇಲೆ ಮಠದಲ್ಲಿ ಶಾಂತಿ ಹೋಮ ನಡೆಸಲಾಗುವುದು. ಆದರೆ ಸೂರ್ಯಾಸ್ತದ ವೇಳೆಗೆ ಗ್ರಹಣ ಮುಕ್ತಾಯವಾಗುತ್ತಿದ್ದು, ಪೂಜೆಗಳು ನಡೆಯುವುದಿಲ್ಲ ಎಂದು ತಿಳಿಸಲಾಗಿದೆ.
ರಾಘವೇಂದ್ರ ಸ್ವಾಮಿಗಳ ಶಾಖಾ ಮಠ ಹಾಗೂ ಸತ್ಯನಾಥ ಕಾಲೋನಿಯ ಉತ್ತರಾಧಿ ಮಠದಲ್ಲಿ ಗ್ರಹಣದ ವೇಳೆ ಗ್ರಹಣ ಶಾಂತಿ ಹೋಮ ಹಾಗೂ ಗೋಗ್ರಾಸ ಹೋಮ ಜರುಗಲಿವೆ. ಗ್ರಹಣದ ಬಳಿಕ ದೇವಾಲಯ, ಮಠಗಳ ಸ್ವಚ್ಛತಾ ಕಾರ್ಯ ನಡೆಯಲಿದೆ.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…