Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇಂದಿನಿಂದ ಭಕ್ತರಿಗೆ ರಾಮಲಲ್ಲಾ ದರ್ಶನದ ಅವಕಾಶ : ಏನೆಲ್ಲಾ ದಾಖಲೆ ಬೇಕು..? ಸಮಯ ಯಾವುದು ಇಲ್ಲಿದೆ ಮಾಹಿತಿ

Facebook
Twitter
Telegram
WhatsApp

 

ಅಯೋಧ್ಯೆ: ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ನೆರವೇರಿಸಿದ್ದಾರೆ. ಆಹ್ವಾನಿತರಿಗೆ ಮಾತ್ರ ನಿನ್ನೆಯ ದಿನ ನೇರವಾಗಿ ಬಾಲರಾಮನನ್ನು ಕಣ್ತುಂಬಿಕೊಳ್ಳುವುದಕ್ಕೆ ಸಾಧ್ಯವಾಗಿದೆ. ಇನ್ನುಳಿದಂತೆ ಇಡೀ ದೇಶದ ಜನ ಲೈವ್ ಮೂಲಕ ರಾಮಲಲ್ಲಾನನ್ನು ನೋಡಿ ಸಂತಸಗೊಂಡಿದ್ದಾರೆ. ಭಕ್ತಿಯಿಂದ ಕುಳಿತಲ್ಲಿಯೇ ಕೈ ಮುಗಿದಿದ್ದಾರೆ. ಆದರೆ ಒಂದು ಸಲವಾದರೂ ಹತ್ತಿರದಿಂದ ರಾಮಲಲ್ಲಾನನ್ನು ನೋಡುವಾಸೆ ಎಲ್ಲರಿಗೂ ಇದ್ದೆ ಇದೆ. ಅದಕ್ಕೆ ಇಂದಿನಿಂದಾನೇ ಅವಕಾಶವೂ ಸಿಕ್ಕಿದೆ.

ಅಯೋಧ್ಯೆಯಲ್ಲಿ 5 ಡಿಗ್ರಿ ಚಳಿ ಇದೆ. ಆದರೂ ಕೊರೆಯುವ ಚಳಿಯಲ್ಲೂ ರಾಮನ ಭಕ್ತರು ರಾಮಲಲ್ಲಾನ ದರ್ಶನಕ್ಕಾಗಿ ಕ್ಯೂ ನಿಂತಿದ್ದಾರೆ. ಇಂದಿನಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ರಾಮಮಂದಿರದ ಒಳಗೆ ಹೋಗುವುದಕ್ಕೆ ಒಂದಷ್ಟು ದಾಖಲೆಗಳ ಅವಶ್ಯಕತೆ ಇದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿರುವ ಕಾರಣ, ಅಯೋಧ್ಯೆಯಲ್ಲಿ ನೂಕು ನುಗ್ಗಲಾಗಿದೆ. ಭದ್ರತೆಯ ನಡುವೆ ಭಕ್ತರು ದರ್ಶನ ಪಡೆಯುತ್ತಿದ್ದಾರೆ.

ರಾಮಮಂದಿರದಲ್ಲಿ ಸಾರ್ವಜನಿಕರಿಗೆ ದರ್ಶನ ನೀಡಲು ಸಮಯ ನಿಗದಿ ಮಾಡಲಾಗಿದೆ. ಅದರಲ್ಲಿ ಬೆಳಗ್ಗೆ 7ರಿಂದ 11.30ರ ತನಕ ಮಾತ್ರ ದರ್ಶನಕ್ಕೆ ಅವಕಾಶ ಒದಗಿಸಲಾಗಿದೆ. ಮತ್ತೆ ಮಧ್ಯಾಹ್ನ 2ರಿಂದ ಸಂಜೆ 7ರ ತನಕವೂ ದರ್ಶನಕ್ಕೆ ಅವಕಾಶವಿದೆ. ಇನ್ನುಳಿದ ಸಮಯದಲ್ಲಿ ದೇವಾಲಯದ ಬಾಗಿಲನ್ನು ಬಂದ್ ಮಾಡಲಾಗಿರುತ್ತದೆ. ನಿತ್ಯ ಬೆಳಗ್ಗೆ ಶೃಂಗಾರ ಆರತಿ ಸಂಜೆ ಸಂಧ್ಯಾ ಆರತಿ‌ ನಡೆಯಲಿದೆ. ಆರತಿಯ ದೃಶ್ಯವನ್ನು ಭಕ್ತರು ಕಣ್ತುಂಬಿಕೊಳ್ಳಬಹುದು. ಆದರೆ ಇದಕ್ಕೆ ಆರತಿ ಪಾಸ್ ಪಡೆಯಬೇಕು. ಆನ್ಲೈನ್ ಹಾಗೂ ಆಫ್ ಲೈನ್ ನಲ್ಲಿ ಪಾಸ್ ಗಳನ್ನು ಪಡೆಯಬಹುದಾಗಿದೆ. ಟ್ರಸ್ಟ್ ನ ವೆಬ್ ಸೈಟ್ ನಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಪಾಸ್ ಪಡೆಯಬಹುದು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೋದಿ ನನ್ನ ಹೃದಯದಲ್ಲಿದ್ದಾರೆ, ಫೋಟೋ ಬಳಕೆಗೆ ಅನುಮತಿ ಸಿಕ್ಕಿದೆ : ಕೆ. ಎಸ್. ಈಶ್ವರಪ್ಪ

    ಶಿವಮೊಗ್ಗ: ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವೆದ್ದು, ಪಕ್ಷೇತರ ಅಭ್ಯರ್ಥಿಯಾಗಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗ ಅಖಾಡದಲ್ಲಿ ನಿಂತಿದ್ದಾರೆ. ಆರಂಭದಿಂದಲೂ ಪ್ರಧಾನಿ ಮೋದಿಯವರ ಫೋಟೋವನ್ನೇ ಬಳಕೆ ಮಾಡಿಕೊಳ್ಳುತ್ತಿದ್ದರು. ಆದರೆ ಬಿಜೆಪಿ ನಾಯಕರು

ಹೊರಗೆ ಬಾರದಂತೆ ಮೈಸೂರಿಗರಿಗೆ ಹವಮಾನ ಇಲಾಖೆಯಿಂದ ಎಚ್ಚರಿಕೆ : ಆರೆಂಜ್ ಅಲರ್ಟ್ ಘೋಷಣೆ

ಮೈಸೂರು: ಬೆಳಗಿನ ಜಾವವೇ ಬಿಸಿಲಿನ ತಾಪ ಜೋರಾಗಿರುತ್ತೆ. ಮೇ ಸಮಯಕ್ಕೆ ಅದಾಗಲೇ ಭೂಮಿ ತಂಪಾಗಬೇಕಿತ್ತು. ಆದರೆ ಧಗೆ ಎಷ್ಟಿದೆ ಅಂದ್ರೆ ಹೊರಗೆ ಬರೋದಕ್ಕೆ ಸಾಧ್ಯವಾಗುತ್ತಿಲ್ಲ. ದಾಹವೂ ಹೆಚ್ಚಾಗಿದೆ. ಪಾನೀಯಗಳ ಬೆಲೆಯೂ ಗಗನಕ್ಕೇರುತ್ತಿದೆ. ಅದರಲ್ಲೂ ಕೆಲವು

ಮೇ 8 ರಂದು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ..?

ಬೆಂಗಳೂರು: ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಫಲಿತಾಂಶ ಬಂದಿದೆ. ಭವಿಷ್ಯದ ಮುಖ್ಯ ಘಟ್ಟದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯು ಒಂದು. ಈಗಾಗಲೇ ಪರೀಕ್ಷೆ ಬರೆದ 8 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಕರ್ನಾಟಕ ಪ್ರೌಢ

error: Content is protected !!