Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಂದಿನಿಂದ ಭಕ್ತರಿಗೆ ರಾಮಲಲ್ಲಾ ದರ್ಶನದ ಅವಕಾಶ : ಏನೆಲ್ಲಾ ದಾಖಲೆ ಬೇಕು..? ಸಮಯ ಯಾವುದು ಇಲ್ಲಿದೆ ಮಾಹಿತಿ

---Advertisement---

 

ಅಯೋಧ್ಯೆ: ಬಾಲರಾಮನ ಪ್ರಾಣ ಪ್ರತಿಷ್ಠಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ನಿನ್ನೆಯಷ್ಟೇ ನೆರವೇರಿಸಿದ್ದಾರೆ. ಆಹ್ವಾನಿತರಿಗೆ ಮಾತ್ರ ನಿನ್ನೆಯ ದಿನ ನೇರವಾಗಿ ಬಾಲರಾಮನನ್ನು ಕಣ್ತುಂಬಿಕೊಳ್ಳುವುದಕ್ಕೆ ಸಾಧ್ಯವಾಗಿದೆ. ಇನ್ನುಳಿದಂತೆ ಇಡೀ ದೇಶದ ಜನ ಲೈವ್ ಮೂಲಕ ರಾಮಲಲ್ಲಾನನ್ನು ನೋಡಿ ಸಂತಸಗೊಂಡಿದ್ದಾರೆ. ಭಕ್ತಿಯಿಂದ ಕುಳಿತಲ್ಲಿಯೇ ಕೈ ಮುಗಿದಿದ್ದಾರೆ. ಆದರೆ ಒಂದು ಸಲವಾದರೂ ಹತ್ತಿರದಿಂದ ರಾಮಲಲ್ಲಾನನ್ನು ನೋಡುವಾಸೆ ಎಲ್ಲರಿಗೂ ಇದ್ದೆ ಇದೆ. ಅದಕ್ಕೆ ಇಂದಿನಿಂದಾನೇ ಅವಕಾಶವೂ ಸಿಕ್ಕಿದೆ.

ಅಯೋಧ್ಯೆಯಲ್ಲಿ 5 ಡಿಗ್ರಿ ಚಳಿ ಇದೆ. ಆದರೂ ಕೊರೆಯುವ ಚಳಿಯಲ್ಲೂ ರಾಮನ ಭಕ್ತರು ರಾಮಲಲ್ಲಾನ ದರ್ಶನಕ್ಕಾಗಿ ಕ್ಯೂ ನಿಂತಿದ್ದಾರೆ. ಇಂದಿನಿಂದ ಸಾರ್ವಜನಿಕರ ದರ್ಶನಕ್ಕೆ ಅವಕಾಶವಿದ್ದು, ರಾಮಮಂದಿರದ ಒಳಗೆ ಹೋಗುವುದಕ್ಕೆ ಒಂದಷ್ಟು ದಾಖಲೆಗಳ ಅವಶ್ಯಕತೆ ಇದೆ. ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಧಾವಿಸುತ್ತಿರುವ ಕಾರಣ, ಅಯೋಧ್ಯೆಯಲ್ಲಿ ನೂಕು ನುಗ್ಗಲಾಗಿದೆ. ಭದ್ರತೆಯ ನಡುವೆ ಭಕ್ತರು ದರ್ಶನ ಪಡೆಯುತ್ತಿದ್ದಾರೆ.

ರಾಮಮಂದಿರದಲ್ಲಿ ಸಾರ್ವಜನಿಕರಿಗೆ ದರ್ಶನ ನೀಡಲು ಸಮಯ ನಿಗದಿ ಮಾಡಲಾಗಿದೆ. ಅದರಲ್ಲಿ ಬೆಳಗ್ಗೆ 7ರಿಂದ 11.30ರ ತನಕ ಮಾತ್ರ ದರ್ಶನಕ್ಕೆ ಅವಕಾಶ ಒದಗಿಸಲಾಗಿದೆ. ಮತ್ತೆ ಮಧ್ಯಾಹ್ನ 2ರಿಂದ ಸಂಜೆ 7ರ ತನಕವೂ ದರ್ಶನಕ್ಕೆ ಅವಕಾಶವಿದೆ. ಇನ್ನುಳಿದ ಸಮಯದಲ್ಲಿ ದೇವಾಲಯದ ಬಾಗಿಲನ್ನು ಬಂದ್ ಮಾಡಲಾಗಿರುತ್ತದೆ. ನಿತ್ಯ ಬೆಳಗ್ಗೆ ಶೃಂಗಾರ ಆರತಿ ಸಂಜೆ ಸಂಧ್ಯಾ ಆರತಿ‌ ನಡೆಯಲಿದೆ. ಆರತಿಯ ದೃಶ್ಯವನ್ನು ಭಕ್ತರು ಕಣ್ತುಂಬಿಕೊಳ್ಳಬಹುದು. ಆದರೆ ಇದಕ್ಕೆ ಆರತಿ ಪಾಸ್ ಪಡೆಯಬೇಕು. ಆನ್ಲೈನ್ ಹಾಗೂ ಆಫ್ ಲೈನ್ ನಲ್ಲಿ ಪಾಸ್ ಗಳನ್ನು ಪಡೆಯಬಹುದಾಗಿದೆ. ಟ್ರಸ್ಟ್ ನ ವೆಬ್ ಸೈಟ್ ನಲ್ಲಿ ನಿಮ್ಮ ಹೆಸರನ್ನು ನೋಂದಾಯಿಸಿಕೊಂಡು ಪಾಸ್ ಪಡೆಯಬಹುದು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment