Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಆರ್ಯವೈಶ್ಯ ಸಂಘದಿಂದ ನವೆಂಬರ್ 05 ರಂದು ಚಿತ್ರದುರ್ಗದಲ್ಲಿ ದೇವತೆಗಳ ಸಮಾಗಮ ಊರಹಬ್ಬ ಮತ್ತು ಪಂಚ್ಯಗವ್ಯ ಹೋಮ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ : ಸುರೇಶ್ ಪಟ್ಟಣ್,                             ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನವೆಂಬರ್. 02 : ಆರ್ಯ ವೈಶ್ಯ ಸಂಘ ಮತ್ತು ಜೈ ವಾಸವಿ ಮಿತ್ರ ವೃಂದ ಇವರ ಸಂಯುಕ್ತಾಶ್ರಯದಲ್ಲಿ ನವೆಂಬರ್ 05 ರ ಭಾನುವಾರ ಹನ್ನೂಂದು ದೇವತೆಗಳ ಸಮಾಗಮ ಊರಹಬ್ಬ ಮತ್ತು ಲೋಕ ಕಲ್ಯಾಣಕ್ಕಾಗಿ ಪಂಚ್ಯಗವ್ಯ ಹೋಮವನ್ನು ನಗರದ ಕನ್ಯಕಾಪರಮೇಶ್ವರಿ ದೇವಾಲಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಆರ್ಯವೈಶ್ಯ ಸಂಘದ ಗೌರವಾಧ್ಯಕ್ಷರಾದ ಎಸ್.ಎನ್. ಕಾಶಿ ವಿಶ್ವನಾಥ್ ಶೆಟ್ಟಿ ಮತ್ತು ಅಧ್ಯಕ್ಷರಾದ ಎಂ.ಕೆ.ವೆಂಕಟೇಶ್ ತಿಳಿಸಿದ್ದಾರೆ.

ಜೈ ವಾಸವಿ ಮಿತ್ರ ವೃಂದದ  14ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಇದರಲ್ಲಿ ಶ್ರೀ ಕನ್ಯಕಾಪರಮೇಶ್ವರಿ, ಶ್ರೀ ಏಕನಾಥೇಶ್ವರಿ ಶ್ರೀ ಉಚ್ಚಂಗಿಯಲ್ಲಮ್ಮ, ಶ್ರೀ ಬರಗೇರಮ್ಮ, ಶ್ರೀ ಗೌರಸಂದ್ರ ಮಾರಮ್ಮ, ಶ್ರೀ ಕಾಳಿಕಮಠೇಶ್ವರಿ, ಶ್ರೀ ದುರ್ಗಾದೇವಿ, ಶ್ರೀ ಬುಡ್ಡಾಂಬಿಕದೇವಿ, ಶ್ರೀ ಬನಶಂಕರಿ ಶ್ರೀ ಚೇಳುಗುಡ್ಡ ಗೌರಸಂದ್ರ ಹಾಗೂ ಶ್ರೀ ದೊಡ್ಡ ಮಾರಮ್ಮ ಅಮ್ಮನವರು ಆಗಮಿಸಲಿದ್ದಾರೆ.

ಅಂದು ಬೆಳಿಗ್ಗೆ 8 ಗಂಟೆಗೆ ಅಮ್ಮನವರನ್ನು ಮೆರವಣಿಗೆಯ ಮೂಲಕ ಸಿಹಿನೀರಿನ ಹೊಂಡದಿಂದ ಕರೆದುಕೊಂಡು ನಗರದ ವಾಸವಿ ಮಹಲ್ ರಸ್ತೆಯಲ್ಲಿನ ಶ್ರೀ ಕನ್ಯಕಾ ಪರಮೇಶ್ವರಿ ದೇವಾಲಯಕ್ಕೆ ಬರಲಾಗುವುದು. ಅಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ರವರೆಗೆ ಭಕ್ತಾಧಿಗಳಿಗೆ ಅಮ್ಮನವರ ದರ್ಶನಕ್ಕೆ ಅವಕಾಶವನ್ನು ಕಲ್ಪಿಸಲಾಗಿದೆ, ಅಲ್ಲದೆ ಅಮ್ಮನವರಿಗೆ ಮಡಿಲು ಅಕ್ಕಿಯನ್ನು ಹಾಕುವುದಕ್ಕೂ ಸಹಾ ಅವಕಾಶವನ್ನು ಕಲ್ಪಿಸಲಾಗಿದೆ ಮದ್ಯಾಹ್ನ 12 ಗಂಟೆಯಿಂದ ಭಕ್ತಾದಿಗಳಿಗೆ ಅನ್ನ ಸಂತರ್ಪಣೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ನಗರದ ಸರ್ವ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಮೂಲಕ ಅಮ್ಮನವರ ಕೃಪೆಗೆ ಪಾತ್ರರಾಗಬೇಕಾಗಿ ಮನವಿ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಲೋಕಾಯುಕ್ತ ಬಲೆಗೆ ಬಿದ್ದ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ

ಸುದ್ದಿಒನ್, ಚಿತ್ರದುರ್ಗ, ಮೇ. 06  : ಗುತ್ತಿಗೆದಾರನ  ಕಾಮಗಾರಿ ಬಿಲ್ ಪಾವತಿ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಮಂಡಳಿ ಕಾರ್ಯದರ್ಶಿ ಬಸವರಾಜಪ್ಪ ನಾಲ್ಕು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ

ಕರ್ನಾಟಕದಲ್ಲಿಯೇ ತೀರ್ಥಹಳ್ಳಿಯಲ್ಲಿ ಬೆಳೆಯುವ ಅಡಿಕೆ ಬೆಸ್ಟ್ : ಸಂಶೋಧನೆಯಲ್ಲಿ ಬಯಲಾಯ್ತು ಸತ್ಯ

  ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಹೆಚ್ಚಾಗಿ ಅಡಿಕೆಯನ್ನು ಬೆಳೆಯುತ್ತಾರೆ. ಆದರೆ ರಾಜ್ಯದೆಲ್ಲೆಡೆ ಆಲ್ಮೋಸ್ಟ್ ಎಲ್ಲಾ ಜಿಲ್ಲೆಯಲ್ಲೂ ಅಡಿಕೆ ತೋಟವನ್ನು ಮಾಡಿರುತ್ತಾರೆ. ಆದರೆ ಅಡಿಕೆಯ ಗುಣಮಟ್ಟದ ವಿಚಾರಕ್ಕೆ ಬಂದರೆ ತೀರ್ಥಹಳ್ಳಿಯ ಅಡಿಕೆ ಉತ್ತಮ ಎನ್ನಲಾಗುತ್ತದೆ. ಕೃಷಿ

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..!

ಅಕ್ಷಯ ತೃತೀಯಕ್ಕೆ ಚಿನ್ನದ ಬೆಲೆ ಬಲು ದುಬಾರಿ.. ಏರುತ್ತಲೆ ಇದೆ ದರ..! ಬಂಗಾರ ಅಂದ್ರೆ ಯಾರಿಗೆ ಇಷ್ಟವಿಲ್ಲ ಹೇಳಿ. ಬಂಗಾರವನ್ನು ತೆಗೆದುಕೊಳ್ಳಬೇಕೆಂದು ಎಲ್ಲರಿಗೂ ಆಸೆ‌. ಆದರೆ ಇತ್ತಿಚಿನ ದಿನಗಳಲ್ಲಿ ಬಂಗಾರವನ್ನು ಮಧ್ಯಮವರ್ಗದವರು ಮುಟ್ಟುವುದಕ್ಕಾದರೂ ಸಾಧ್ಯವ..?

error: Content is protected !!