Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ : ಗೌರಸಂದ್ರಮಾರಮ್ಮ ದೇವಿಗೆ ವಿಶೇಷ ಪೂಜೆ: ನೆಹರು ನಗರದಲ್ಲಿ ಸಡಗರದ ಹೋಳಿಗೆಮ್ಮ ಹಬ್ಬ

---Advertisement---

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಜುಲೈ. 28 : ನೆಹರು ನಗರದ ಒಂದನೆ ಕ್ರಾಸ್‍ನಲ್ಲಿ ಮಂಗಳವಾರ ಹೋಳಿಗೆಮ್ಮ ಆಚರಿಸಿ ಸುತ್ತಮುತ್ತಲಿನ ನಿವಾಸಿಗಳು ಶ್ರದ್ದಾ ಭಕ್ತಿಯನ್ನು ಸಮರ್ಪಿಸಿದರು.

ಗೌರಸಂದ್ರಮಾರಮ್ಮನನ್ನು ಗುಡಿಯಿಂದ ಮೆರವಣಿಗೆ ಮಾಡಿಕೊಂಡು ಹೊಳೆ ಪೂಜೆ ಸಲ್ಲಿಸಿದ ಬಳಿಕ ನೆಹರು ನಗರದಲ್ಲಿರುವ ಆಂಜನೇಯಸ್ವಾಮಿ ಬಳಿ ಕೂರಿಸಲಾಯಿತು. ದಾರಿಯುದ್ದಕ್ಕೂ ಮಹಿಳೆಯರು ಗೌರಸಂದ್ರಮಾರಮ್ಮನಿಗೆ ಆರತಿ ಬೆಳಗಿ ಹೋಳಿಗೆ, ಮೊಸರನ್ನ, ಬಾಳೆಹಣ್ಣು, ಕಾಯಿ ಸಮರ್ಪಿಸಿ ಪೂಜೆ ಸಲ್ಲಿಸಿದರು.

ಹಿಂದಿನ ಕಾಲದಲ್ಲಿ ಪ್ಲೇಗು, ಕಾಲರ ಕಾಣಿಸಿಕೊಂಡಾಗ ಇಡಿ ಊರಿಗೆ ಊರೇ ಜನ ಖಾಲಿ ಮಾಡುತ್ತಿದ್ದರು. ಅಂದಿನಿಂದ ಯಾವುದೇ ರೋಗ ರುಜಿನಗಳು ಸೋಂಕಬಾರದೆಂದು ಹೋಳಿಗೆಮ್ಮ ಆಚರಿಸುವ ಪದ್ದತಿ ನಡೆದುಕೊಂಡು ಬರುತ್ತಿದೆ. ಅದರಂತೆ ನೆಹರು ನಗರದಲ್ಲಿ ಹೋಳಿಗೆಮ್ಮನನ್ನು ಪೂಜಿಸಿ ಎಡೆಯಿಟ್ಟು ಸಂಜೆ ಗಾಂಧಿ ಸರ್ಕಲ್‍ನ ಗಡಿಗೆ ತಲುಪಿಸಲಾಗುವುದೆಂದು ಎಪಿಎಂಸಿ. ಹಮಾಲರ ಸಂಘದ ಅಧ್ಯಕ್ಷ ಬಿ.ಬಸವರಾಜಪ್ಪ ತಿಳಿಸಿದರು. ನೂರಾರು ಭಕ್ತರು ಈ ಸಂದರ್ಭದಲ್ಲಿ ಹಾಜರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now