ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಧರ್ಮಸ್ಥಳದ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರನನ್ನು ಎಸ್ಐಟಿ ಮುಖ್ಯಸ್ಥರು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪ್ರಶ್ನೆಗಳ ಸುರಿಮಳೆಯನ್ನ ಸುರಿಸಿದ್ದು, ಶವ ಹೂತು ಹಾಕಿದ್ದ ವೇಳೆ ನಿನ್ನ ಜೊತೆ ಇದ್ದವರು ಯಾರು..? ತಲೆ ಬುರುಡೆ ತಂದದ್ದು ಎಲ್ಲಿಂದ, ಆಗ ನಿನ್ನ ಜೊತೆಗೆ ಯಾರಿದ್ರು..? ಎಂಬೆಲ್ಲಾ ಪ್ರಶ್ನೆಗಳನ್ನ ಕೇಳಿದ್ದಾರೆ.
ತಲೆ ಬುರುಡೆ ಯಾರದ್ದು ಅನ್ನೋ ಖಚಿತತೆ ನಿಮಗೆ ಇದ್ಯಾ..? ಹೂತು ಹಾಕಿದ್ದ ಮೃತದೇಹಗಳ ಪೈಕಿ ಪರಿಚಿತ ವ್ಯಕ್ತಿಗಳದ್ದಿತ್ತಾ.? ಮೃತದೇಹ ಹೂತು ಹಾಕಲು ಒತ್ತಡ ಹಾಕಿದ ಮೇಲ್ವಿಚಾರಕರ ಹೆಸರೇನು..? ಎಸ್ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ಸಮ್ಮುಖದಲ್ಲಿ ವಿಚಾರಣೆ ನಡೆಯುತ್ತಿದೆ. ಅಷ್ಟೇ ಅಲ್ಲ 2014ರಲ್ಲಿ ದೂರುದಾರನ ಕುಟುಂಬದ ಬಾಲಕಿಗೆ ಕಿರುಕುಳ ನೀಡಿದ್ದರ ಬಗ್ಗೆಯು ಪ್ರಶ್ನೆಗಳನ್ನ ಕೇಳಲಾಗಿದೆ.
ಮೇಲ್ವಿಚಾರಕ ರ ಸಂಪರ್ಕದಲ್ಲಿದ್ದ ವ್ಯಕ್ತಿಯಿಂದ ಕಿರುಕುಳ ನೀಡಿದ್ದ ಎಂದಿದ್ದರು ದೂರುದಾರ. 2014ರ ಡಿಸೆಂಬರ್ ನಲ್ಲಿ ಧರ್ಮಸ್ಥಳದಿಂದ ಓಡಿ ಹೋದರ ಎಂದಿದ್ದ. ನನಗೆ ಜೀವ ಭಯ ಇತ್ತು. ಮತ್ತೆ ನನ್ನ ಜೀವ ಉಳಿಸಿಕೊಳ್ಳುವುದಕ್ಕೆ ನಾನು ಓಡಿ ಹೋದೆ ಎಂದಿದ್ದ. ಈ ಸಂಬಂಧ ಎಸ್ಐಟಿ ಟೀಂ ಸಾಲು ಸಾಲು ಪ್ರಶ್ನೆಗಳನ್ನ ಕೇಳಿದೆ. ಆರಂಭದಿಂದ ಇಲ್ಲಿಯವರೆಗೂ ಏನೆಲ್ಲ ಬೆಳವಣಿಗೆ ನಡೆದಿದೆ ಎಂಬುದರ ಬಗ್ಗೆ ವಿಚಾರಣೆ ನಡೆದಿದೆ.
ಲೈಂಗಿಕ ಸಂಪರ್ಕ ನೀಡಿದವ ನಿಮ್ಮ ಕುಟುಂಬದ ಸಂಪರ್ಕದಲ್ಲಿದ್ರಾ..? ಆಗ ಪೊಲೀಸರನ್ನ ನೀವೂ ಯಾಕೆ ಸಂಪರ್ಕಿಸಲಿಲ್ಲ. ಘಟನೆ ಬಳಿಕ ಯಾವ ರಾಜ್ಯಕ್ಕೆ ಹೋಗಿ ತಲೆಮರೆಸಿಕೊಂಡಿದ್ದೀರಿ. ನಿಮ್ಮನ್ನು ಯಾರಾದ್ರೂ ಹುಡುಕಾಡಿದ್ರಾ..? ಎಂಬ ನಾನಾ ಪ್ರಶ್ನೆಗಳನ್ನ ಎಸ್ಐಟಿ ಅಧಿಕಾರಿಗಳು ಈ ದೂರುದಾರನಿಗೆ ಕೇಳ್ತಾ ಇದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್