ಹುಬ್ಬಳ್ಳಿ; ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸರ್ಕಾರ ಅನುಮತಿ ನೀಡಿತ್ತು. ಆದರೆ ಇದೀಗ ಸರ್ಕಾರದ ಈ ನಿರ್ಧಾರವನ್ನು ಧಾರವಾಡ ಹೈಕೋರ್ಟ್ ತಡೆ ನೀಡಿದೆ. ಹುಬ್ಬಳ್ಳಿಯ ಕೇಶ್ವಾಪುರ ಸರ್ಕಲ್ ಬಳಿಯ 25 ಗುಂಟೆಗಿಂತಲೂ ಅಧಿಕ ಜಾಗದಲ್ಲಿ ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆ ಕುಡಿಯುವ ನೀರು ಸಂಗ್ರಹಣೆಗೆ ಮೀಸಲಿಟ್ಟಿತ್ತು. ಈ ಜಾಗದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ಸಿದ್ದರಾಮಯ್ಯ ಸರ್ಕಾರ ನುಮತಿ ನೀಡಿತ್ತು.
ಈ ಹಿನ್ನೆಲೆಯಲ್ಲಿ ಶೇಕಡಾ 5ರಷ್ಟು ಹಣವನ್ನು ಪಾಲಿಕೆಗೆ ನೀಡಿ, 25 ಗುಂಟೆಗಿಂತಲೂ ಅಧಿಕ ಭೂಮಿಯ ಹಕ್ಕನ್ನು ಪಡೆಯುವುದಕ್ಕೆ ಕ್ಯಾಬಿನೆಟ್ ತೀರ್ಮಾನ ಮಾಡಿತ್ತು. ಸಂಪುಟದ ಈ ನಿರ್ಧಾರವನ್ನು ಪಾಲಿಕೆಯ ಬಿಜೆಪಿ ಸದಸ್ಯರು ವಿರೋಧಿಸಿದ್ದರು. ಮಹಾನಗರ ಪಾಲಿಕೆಯ ಜಮೀನನ್ನು ಸರ್ಕಾರ ಅತ್ಯಂತ ಕಡಿಮೆ ಬೆಲೆಗೆ ಖರೀದಿಸಿ, ಅಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಮಾಡಲು ತೀರ್ಮಾನಿಸಿತ್ತು.
ಈ ಜಾಗದಲ್ಲಿ ಸದ್ಯಕ್ಕೆ ಹುಬ್ಬಳ್ಳಿ ಧಾರವಾಡಕ್ಕೆ ಪೂರೈಸುವ ನೀರಿನ ಟ್ಯಾಂಕ್ ಗಳಿವೆ. ಈ ಸ್ಥಳಕ್ಕೆ ಸಾರ್ವಜನಿಕರ ಪ್ರವೇಶವನ್ನೇ ನಿಷೇಧ ಮಾಡಿದೆ. ಹೀಗಿರುವಾಗ ಈ ಸ್ಥಳವನ್ನು ಕಾಂಗ್ರೆಸ್ ಕಚೇರಿಗೆ ನೀಡಿದ್ದು ಎಷ್ಟು ಸರಿ ಎಂಬ ಪ್ರಶ್ನೆ ಬಿಜೆಪಿ ಸದಸ್ಯರದ್ದಾಗಿದೆ. ಇದನ್ನು ಪ್ರಶ್ನಿಸಿ ಬಿಜೆಪಿ ಸದಸ್ಯರಾದ ಸಂತೋಷ ಚವ್ಹಾಣ್ ಹಾಗೂ ಬೀರಪ್ಪ ನ್ಯಾಯಾಲಯದ ಮೋರೆ ಹೋಗಿದ್ದರು. ವಾದ-ಪ್ರತಿವಾದ ಆಲಿಸಿದ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ಸರ್ಕಾರದ ನಿರ್ಧಾರಕ್ಕೆ ತಡೆ ನೀಡಿದೆ. ಸದ್ಯಕ್ಕೆ ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಕಚೇರಿಯನ್ನು ಬೇರೆ ಯಾವ ಜಾಗದಲ್ಲಿ ನಿರ್ಮಾಣ ಮಾಡುತ್ತಾರೆ ಕಾದು ನೋಡಬೇಕಿದೆ.
ಧಾರವಾಡ; ಇಲ್ಲಿನ ಹನುಮಕೊಪ್ಪ ಗೊಂಬೆಗಳು ಭವಿಷ್ಯ ನುಡಿದಿವೆ. ಯುಗಾದಿ ಹಬ್ಬದಂದು ಇಲ್ಲಿನ ಗೊಂಬೆಗಳ ಬಳಿ ಭವಿಷ್ಯ ಕೇಳುವ ಪ್ರತೀತಿ ಇದೆ.…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 30 : ನಗರದ ಬ್ಯಾಂಕ್ ಕಾಲೋನಿ ವಾಸಿ ಹಾಗೂ ದೊಡ್ಡ ಸಿದ್ದವ್ವನಹಳ್ಳಿ ಮೂಲದ ನಿವೈತ್ತ ಶಿಕ್ಷಕ…
ಇಂದು ಯುಗಾದಿ ಹಬ್ಬ. ಹಿಂದೂಗಳ ಹೊಸ ವರ್ಷಾರಂಭ. ಮರ ಗಿಡಗಳು ಹಳೆ ಎಲೆಗಳನ್ನ ಉದುರಿಸಿ ಹೊಸ ಚಿಗುರನ್ನ ಹೊತ್ತು, ಸುಂದರವಾಗಿ…
ಈ ರಾಶಿಯವರಿಗೆ ಮದುವೆ ಸಂಭ್ರಮ, ಆರ್ಥಿಕ ಅಭಿವೃದ್ಧಿ, ಕೆಲಸ ಬದಲಾವಣೆ, ವಿದೇಶ ಯೋಗ, ಆಟದಲ್ಲಿ ಗೆಲವು, ಭಾನುವಾರದ ರಾಶಿ ಭವಿಷ್ಯ…
ಬೆಂಗಳೂರು; ಒಂದನೇ ತರಗತಿಗೆ ಸೇರಿಸ ಬಯಸುವ ಮಕ್ಕಳನ್ನು ಶಾಲೆಗೆ ಸೇರಿಸುವ ಗೊಂದಲ ಸಾಕಷ್ಟು ಇದೆ. ಆರು ವರ್ಷ ಆಗಿರಲೇಬೇಕು ಎಂಬ…
ಬೆಂಗಳೂರು; ಶಾಸಕ ಬಸನಗೌಡ ಪಾಟೀಲ್ ಅವರು ಫೈಯರ್ ಬ್ರಾಂಡ್ ಅಂತಾನೇ ಹೆಸರು ಪಡೆದಿರುವವರು. ಬಿಜೆಪಿಯಲ್ಲಿಯೇ ಇದ್ದುಕೊಂಡು ಬಿಜೆಪಿ ನಾಯಕರ ವಿರುದ್ಧವೇ…