Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಧ್ರುವ ಸರ್ಜಾ, ಧ್ರುವ ಸರ್ಜಾ ಫ್ಯಾನ್ಸ್ ಬಳಿ ಕ್ಷಮೆ ಕೇಳುತ್ತೇನೆ : ಪೊಲೀಸ್ ಠಾಣೆಯಿಂದ ಬಂದ ಸುಧಾಕರ್ ಹೊಸ ವಿಡಿಯೋ ಪೋಸ್ಟ್

---Advertisement---

 

ಬೆಂಗಳೂರು: ಮಾರ್ಟಿನ್ ಸಿನಿಮಾ ರಿಲೀಸ್ ಆದಾಗಿನಿಂದ ಯೂಟ್ಯೂಬರ್ ಸುಧಾಕರ್ ಹಾಗೂ ಧ್ರುವ ಸರ್ಜಾ ಫ್ಯಾನ್ಸ್ ನಡುವಿನ ಸುದ್ದಿಯೇ ಜೋರಾಗಿದೆ. ಸುಧಾಕರ್ ಸಿನಿಮಾ ಬಗ್ಗೆ ನೆಗೆಟಿವ್ ರಿವ್ಯೂ ಮಾಡಿ ಹಾಕಿದ್ದಕ್ಕೆ ಬೆದರಿಕೆ ಕರೆಗಳು ಬಂದಿವೆ ಎನ್ನಲಾಗಿತ್ತು. ಆದರೆ ಆ ಬಳಿಕ ಸುಧಾಕರ್ ಸವಾಲು ಕೂಡ ಹಾಕಿದ್ದರು. ಇಷ್ಟೆಲ್ಲಾ ಸೋಷಿಯಲ್ ಮೀಡಿಯ ಗಲಭೆ ನಡುವೆ, ಯಾವುದೋ ಪ್ರಕರಣದಲ್ಲಿ ಸುಧಾಕರ್ ಕೂಡ ಭಾಗಿಯಾಗಿದ್ದರು ಎಂದು ಮಾದನಾಯಕನಹಳ್ಳಿ ಪೊಲೀಸರು ಅರೆಸ್ಟ್ ಕೂಡ ಮಾಡಿದ್ದರು.

ಪೊಲೀಸ್ ಸ್ಟೇಷನ್ ಗೆ ಕರೆಸಿದ್ದ ಪೊಲೀಸರು ಬುದ್ದಿ ಮಾತು ಹೇಳಿ, ವಿಡಿಯೋಗಳನ್ನು ಡಿಲೀಟ್ ಮಾಡಿ ಕಳುಹಿಸಿದ್ದರು. ಇದೀಗ ಹೊಸದೊಂದು ವಿಡಿಯೋ ಮಾಡಿ ಸುಧಾಕರ್ ಪೋಸ್ಟ್ ಮಾಡಿದ್ದಾರೆ. ಜೊತೆಗೆ ಕಷ್ಟಕಾಲದಲ್ಲಿ ನಿಂತವರಿಗೆ, ದಾನಪುರ ಹೋಬಳಿಯ ಹಿರಿಯರು, ಜನತೆಗೆ ಧನ್ಯವಾದ ತಿಳಿಸಿದ್ದಾರೆ. ಆ ವಿಡಿಯೋದಲ್ಲಿ ಹೀಗಿದೆ.

‘ಗೊತ್ತೋ ಗೊತ್ತಿಲ್ಲದೆಯೋ ನಾನು ಒಂದು ರಿವ್ಯೂ ಕೊಟ್ಟಿದೆ. ಬೇರೆ ಯಾರ ಅಭಿಮಾನಿಯಾಗಿಯೂ ಈ ವಿಮರ್ಶೆ ಮಾಡಿಲ್ಲ. ಧ್ರುವ ಸರ್ಜಾ ಅವರ ಬಹದ್ದೂರ್ ಸಿನಿಮಾ ನನಗೆ ತುಂಬಾ ಇಷ್ಟ. ಅದ್ದೂರಿ ಸಿನಿಮಾದ ಡೈಲಾಗ್ ಗಳು ನನಗೆ ಈಗಲೂ ನೆನಪಿದೆ. ಈಗ ಧ್ರುವ ಸರ್ಜಾ ಅವರ ಕಟೌಟ್ ಗೆ ಅಂತಹ ಸಿನಿಮಾಗಳು ಬರ್ತಿಲ್ಲ ಅನ್ನೋ ಬೇಸರದಲ್ಲಿ ಹೇಳಿದ್ದೆ. ಕೆಟ್ಟ ಉದ್ದೇಶದಿಂದ ನಾನು ಹೇಳಿರಲಿಲದಲ. ಇದಾದ ಮೇಲೆ ಒಂದಯ ಗಂಟೆಯಲ್ಲಿಯೇ ಆ ವಿಡಿಯೋ ಡಿಲೀಟ್ ಮಾಡಿದ್ದೆ. ಕೆಲವರು ಬುದ್ದಿವಾದ ಹೇಳಿದ್ದರು. ಆದರೂ ಬೆದರಿಕೆ ಕರೆಗಳು ಬಂದಾಗ ನಾನು ಎರಡನೇ ವಿಡಿಯೋ ಮಾಡಿದೆ. ನನ್ನ ಕಡೆಯಿಂದ ತಪ್ಪಾಗಿದೆ. ಧ್ರುವ ಸರ್ಜಾ, ಧ್ರುವ ಸರ್ಜಾ ಫ್ಯಾನ್ಸ್ ಹಾಗೂ ಕರ್ನಾಟಕದ ಜನತೆಗೆ ನಾನು ಕ್ಷಮೆ ಕೇಳುತ್ತೇನೆ. ಧ್ರುವ ಸರ್ಜಾ ಅವರು ದೊಡ್ಡವರು. ಅವರ ಮುಂದೆ ನಾನು ಏನು ಅಲ್ಲ. ಇಷ್ಟರ ಮೇಲೆ ನಾನು ಏನು ಮಾತನಾಡುವುದಿಲ್ಲ ಎಂದು ವಿಡಿಯೋ ಮಾಡಿ ಪೋಸ್ಟ್ ಮಾಡಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment