ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಚಿತ್ರದುರ್ಗ: ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದ ಆರೋಪದ ಮೇಲೆ, ಚಿತ್ರದುರ್ಗದಿಂದ ಪ್ಲ್ಯಾನ್ ಮಾಡಿ, ಬೆಂಗಳೂರಿಗೆ ಎತ್ತಾಕಿಕೊಂಡು ಬಂದ ದರ್ಶನ್ ಗ್ಯಾಂಗ್, ಆತನನ್ನು ಸಾಯುವಂತೆ ಹೊಡೆದಿದ್ದಾರೆ. ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾರೆ. ಹೆಣ ಸುಮನಹಳ್ಳಿ ಬಳಿ ಸಿಕ್ಕ ಮೇಲೆ ತನಿಖೆಯಲ್ಲಿ ಒಬ್ಬೊಬ್ಬರೇ ಸಿಕ್ಕಿ ಬಿದ್ದು, ಈಗ ಆ ಮರ್ಡರ್ ಹಿಂದೆ ತಗಲಾಕಿಕೊಂಡವರು ಬರೋಬ್ಬರಿ ಹದಿನೇಳು ಮಂದಿ.
ಮನೆಗೆ ಇದ್ದವನೇ ಒಬ್ಬ ಮಗ.ಸೊಸೆ ಬೇರೆ ಗರ್ಭಿಣಿ. ಮನೆ ನಡೆಸುವುದು ಹೇಗೆ, ಸೊಸೆಯ ಮುಂದಿನ ಬದುಕು ಹೇಗೆ ಎಂದು ಪೋಷಕರು ಕಣ್ಣೀರು ಹಾಕುತ್ತಿದ್ದಾರೆ. ಸಹಾಯಕ್ಕಾಗಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಂದಿದ್ದಾರೆ. ಇದರ ಬೆನ್ನಲ್ಲೇ ಧ್ರುವ ಸರ್ಜಾ ಫ್ಯಾನ್ಸ್ ರೇಣುಕಾಸ್ವಾಮಿ ಕುಟುಂಬಕ್ಕೆ ಸಾಂತ್ವಾನ, ನೀಡಿ ಧನಸಹಾಯ ಮಾಡಿದ್ದಾರೆ.
ಧ್ರುವ ಸರ್ಜಾ ಅಭಿಮಾನಿ ಸಂಘದ ಅಧ್ಯಕ್ಷ ಮಹಾನ್ ಮತ್ತು ತಂಡದವರು ಚಿತ್ರದುರ್ಗದ ರೇಣುಕಾಸ್ವಾಮಿ ಮನೆಗೆ ಹೋಗಿದ್ದು, ಧ್ರುವ ಸರ್ಜಾ ಅವರಿಗೆ ದೂರವಾಣಿ ಮೂಲಕ ಕರೆ ಮಾಡಿ ಕೊಟ್ಟಿದ್ದಾರೆ. ಈ ವೇಳೆ ಧ್ರುವ ಸರ್ಜಾ, ಮೃತ ರೇಣುಕಾಸ್ವಾಮಿ ಕುಟುಂಬಸ್ಥರ ಜೊತೆಗೆ ಮಾತನಾಡಿದ್ದಾರೆ. ನಿಮ್ಮ ಜೊತೆಗೆ ನಾವಿದ್ದೇವೆ. ಏನೇ ಸಹಾಯ ಬೇಕಾದರೂ ನಮ್ಮನ್ನು ಕೇಳಿ ಎಂದು ಹೇಳಿದ್ದಾರೆ ಎನ್ನಲಾಗಿದೆ. ಬಳಿಕ ಅಭಿಮಾನಿ ಸಂಘದವರು ಹಣ ನೀಡಿ, ಸಾಂತ್ವನ ಹೇಳಿ ಬಂದಿದ್ದಾರೆ.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹದಿನೇಳು ಜನ ಅರೆಸ್ಟ್ ಆಗಿದ್ದು, ಹದಿಮೂರು ಜನ ಪರಪ್ಒನ ಅಗ್ರಹಾರ ಜೈಲಿನಲ್ಲಿದ್ದಾರೆ. ಇನ್ನುಳಿದ ನಾಲ್ಕು ಜನರನ್ನು ತುಮಕೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ. ದರ್ಶನ್ ಅವರನ್ನು ಮುಂದಿನ ವಿಚಾರಣೆಯ ಬಳಿಕ ತುಮಕೂರು ಜೈಲಿಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್