Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಲೆಜೆಂಡ್ ಗಳು ಹುಟ್ಟಿದ ದಿನವೇ ಧ್ರುವ ಸರ್ಜಾ ಮಗನ ಹುಟ್ಟು : ಆಕ್ಷನ್ ಪ್ರಿನ್ಸ್ ಹೇಳಿದ್ದೇನು..?

Facebook
Twitter
Telegram
WhatsApp

 

ಬೆಂಗಳೂರು: ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಎರಡನೇ ಬಾರಿಗೆ ತಂದೆಯಾಗಿದ್ದಾರೆ. ಇಂದು ಪ್ರೇರಣಾ ಎರಡನೇ ಮಗುವಿಗೆ ಜನ್ಮ ನೀಡಿದ್ದಾರೆ. ಗಣೇಶನ ಹಬ್ಬದ ದಿನವೇ ಗಂಡು ಮಗು ಬಂದಿದೆ. ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದೇ ಮಾಹಿತಿ ಲಭ್ಯವಾಗಿದೆ.

ಇನ್ನು ಧ್ರುವ ಸರ್ಜಾಗೆ ಗಂಡು ಮಗು ಆದ ಖುಷಿಯಲ್ಲಿ ಅಭಿಮಾನಿಗಳೆಲ್ಲಾ ಆಸ್ಪತ್ರೆಯ ಮುಂಭಾಗ ಸೇರಿದ್ದರು. ಧ್ರುವ ಸರ್ಜಾ ಮಗನನ್ನು ನೋಡಿಕೊಂಡು ಬಂದ ಖುಷಿಯನ್ನು ಅಭಿಮಾನಿಗಳು ಹಾಗೂ ಮಾಧ್ಯಮದವರ ಬಳಿ ಹೇಳಿದ್ದಾರೆ. ಅಭಿಮಾನಿಗಳಿಗೆಲ್ಲಾ ಸಿಹಿಯನ್ನು ತಿನಿಸಿದ್ದಾರೆ.

ಇದೆ ವೇಳೆ‌ ಮಾತನಾಡಿದ ಅವರು, ಈಗ ಎರಡನೇ ಮಗು ಆಗಿದೆ. ಲೆಕ್ಕದ ಪ್ರಕಾರ ಇದು ಮೂರನೇ ಮಗು. ರಾಯನ್ ಮೊದಲ ಮಗ. ಆಮೇಲೆ‌ ಹೆಣ್ಣು ಮಗು ಹುಟ್ಟಿದೆ. ಆದರೆ ಅವಳಿಗೆ ಇನ್ನು ಹೆಸರಿಟ್ಟಿಲ್ಲ. ಈಗ ಮಗ ಹುಟ್ಟಿದ್ದಾನೆ. ಮನೆಯಲ್ಲಿ ಈಗ ಮೂರು ಮಕ್ಕಳಿದ್ದಾರೆ. ಪ್ರೇರಣಾ ಮತ್ತು ಮಗ ಆರೋಗ್ಯವಾಗಿದ್ದಾರೆ. ಮಗು ಯಾವಾಗ ಹುಟ್ಟಿದರು ಅದು ಒಳ್ಳೆಯ ದಿನವೇ. ಲೆಜೆಂಡರಿಗಳು ಹುಟ್ಟಿದ ದಿನ ಜೊತೆಗೆ ಗೌರಿ ಗಣೇಶ ಹಬ್ಬ ಬೇರೆ ಇನ್ನಷ್ಟು ಖುಷಿ ಕೊಟ್ಟಿದೆ ಎಂದಿದ್ದಾರೆ. ಇದೇ ವೇಳೆ ತನ್ನ ಅಣ್ಣನನ್ನು ನೆನೆದಿದ್ದಾರೆ.

ಅಣ್ಣ ಎಂದರೆ ಧ್ರುವ ಸರ್ಜಾಗೆ ಇನ್ನಿಲ್ಲದ ಪ್ರೀತಿ. ಅಣ್ಣನಿಗೆ ತೋಟದ ಮನೆ ಎಂದರೆ ಬಲು ಇಷ್ಟ. ಈಗಾಗಿಯೇ ಧ್ರುವ ಸರ್ಜಾ ಫ್ಯಾಮಿಲಿ ಈಗ ತೋಡದ‌ ಮನೆಗೆ ಶಿಫ್ಟ್ ಆಗಿದ್ದಾರೆ. ಪ್ರೇರಣಾ ಅವರ ಸೀಮಂತ ಕಾರ್ಯ ಕೂಡ ತೋಟದ ಮನೆಯಲ್ಲಿಯೇ ಆಗಿತ್ತು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!